<p>ಬೆಳಗಾವಿ: ಶಾಲಾ–ಕಾಲೇಜುಗಳಿಗೆ ಹಿಜಾಬ್ ಧರಿಸಿಕೊಂಡು ಹೋಗಲು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದನ್ನು ಖಂಡಿಸಿ, ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.</p>.<p>ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೇಸರಿ ಶಾಲೆ ಹಂಚಲು ತೆರಳುತ್ತಿದ್ದರು. ಆಗ ಪೊಲೀಸರು ವಶಕ್ಕೆ ಪಡೆದಾಗ ಪರಸ್ಪರರ ಮಧ್ಯೆ ವಾಗ್ವಾದವಾಯಿತು.</p>.<p>‘ರಾಜ್ಯ ಸರ್ಕಾರ ಮುಸ್ಲಿಮರ ಓಲೈಕೆ ಜತೆಗೆ, ಮಕ್ಕಳ ಮನಸ್ಸು ಹದಗೆಡಿಸಲು ಮುಂದಾಗಿದೆ. ಶಾಲಾ–ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸದಿದ್ದರೆ, ಪ್ರತಿ ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳಿಗೆ ಕೇಸರಿ ಧ್ವಜ ಹಂಚುತ್ತೇವೆ’ ಎಂದು ಎಚ್ಚರಿಕೆ ಕೊಟ್ಟರು.</p>.<p>ಶ್ರೀರಾಮಸೇನೆ ಮುಖಂಡ ರವಿಕುಮಾರ ಕೋಕಿತಕರ ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-21-1464087547</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಶಾಲಾ–ಕಾಲೇಜುಗಳಿಗೆ ಹಿಜಾಬ್ ಧರಿಸಿಕೊಂಡು ಹೋಗಲು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದನ್ನು ಖಂಡಿಸಿ, ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.</p>.<p>ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೇಸರಿ ಶಾಲೆ ಹಂಚಲು ತೆರಳುತ್ತಿದ್ದರು. ಆಗ ಪೊಲೀಸರು ವಶಕ್ಕೆ ಪಡೆದಾಗ ಪರಸ್ಪರರ ಮಧ್ಯೆ ವಾಗ್ವಾದವಾಯಿತು.</p>.<p>‘ರಾಜ್ಯ ಸರ್ಕಾರ ಮುಸ್ಲಿಮರ ಓಲೈಕೆ ಜತೆಗೆ, ಮಕ್ಕಳ ಮನಸ್ಸು ಹದಗೆಡಿಸಲು ಮುಂದಾಗಿದೆ. ಶಾಲಾ–ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸದಿದ್ದರೆ, ಪ್ರತಿ ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳಿಗೆ ಕೇಸರಿ ಧ್ವಜ ಹಂಚುತ್ತೇವೆ’ ಎಂದು ಎಚ್ಚರಿಕೆ ಕೊಟ್ಟರು.</p>.<p>ಶ್ರೀರಾಮಸೇನೆ ಮುಖಂಡ ರವಿಕುಮಾರ ಕೋಕಿತಕರ ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-21-1464087547</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>