<p><strong>ಬೆಳಗಾವಿ</strong>: ಹುಕ್ಕೇರಿ ತಾಲ್ಲೂಕಿನ ನದಿಗುಡಿಕೇತ್ರ ಗ್ರಾಮದ ಹೆಳವರ ಜಾತಿಯ ಮಹಿಳೆಯನ್ನು ಮರ್ಯಾದೆಗೇಡು ಹತ್ಯೆ ಮಾಡಿದ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಮಹಾರಾಷ್ಟ್ರದ ಸಾಂಗ್ಲಿ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೇಳಿದರು.</p><p>‘ಸತ್ಯವ್ಯ ಹೆಳವರ (24) ಅವರು ಕ್ಷತ್ರಿಯ ಜಾತಿಯ ಪ್ರಿಯಕರನ ಜತೆ ಸಾಂಗತ್ಯ ಬೆಳೆಸಿದ್ದಕ್ಕೆ ಅವರ ಕುಟುಂಬ ಸದಸ್ಯರೇ ಸತ್ಯವ್ಯ ಅವರಿಗೆ ಬಲವಂತದಿಂದ ವಿಷ ಕುಡಿಸಿ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು. </p><p>‘ಕೊಲೆಗೆ ಮುನ್ನ, ಆರೋಪಿಗಳು ಸತ್ಯವ್ವ ಅವರನ್ನು ಮನವೊಲಿಸಲು ಸಾಂಗ್ಲಿ ಜಿಲ್ಲೆಯ ಶಿರೋಳ ಮತ್ತು ಅರಗದಲ್ಲಿ ಎಂಟು ದಿನ ಇದ್ದರು. ನಂತರ ಅವರನ್ನು ಕೊಲೆ ಮಾಡಿ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ್ದರು. ಸಾಂಗ್ಲಿ ಜಿಲ್ಲೆಯಲ್ಲಿ ಈ ಪ್ರಕರಣದ ಎಲ್ಲ ಬೆಳವಣಿಗೆಗಳು ನಡೆದಿರುವುದರಿಂದ, ಪ್ರಕರಣದ ತನಿಖೆಯನ್ನು ಸಾಂಗ್ಲಿ ಪೊಲೀಸರಿಗೆ ಹಸ್ತಾಂತರಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಹುಕ್ಕೇರಿ ತಾಲ್ಲೂಕಿನ ನದಿಗುಡಿಕೇತ್ರ ಗ್ರಾಮದ ಹೆಳವರ ಜಾತಿಯ ಮಹಿಳೆಯನ್ನು ಮರ್ಯಾದೆಗೇಡು ಹತ್ಯೆ ಮಾಡಿದ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಮಹಾರಾಷ್ಟ್ರದ ಸಾಂಗ್ಲಿ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೇಳಿದರು.</p><p>‘ಸತ್ಯವ್ಯ ಹೆಳವರ (24) ಅವರು ಕ್ಷತ್ರಿಯ ಜಾತಿಯ ಪ್ರಿಯಕರನ ಜತೆ ಸಾಂಗತ್ಯ ಬೆಳೆಸಿದ್ದಕ್ಕೆ ಅವರ ಕುಟುಂಬ ಸದಸ್ಯರೇ ಸತ್ಯವ್ಯ ಅವರಿಗೆ ಬಲವಂತದಿಂದ ವಿಷ ಕುಡಿಸಿ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು. </p><p>‘ಕೊಲೆಗೆ ಮುನ್ನ, ಆರೋಪಿಗಳು ಸತ್ಯವ್ವ ಅವರನ್ನು ಮನವೊಲಿಸಲು ಸಾಂಗ್ಲಿ ಜಿಲ್ಲೆಯ ಶಿರೋಳ ಮತ್ತು ಅರಗದಲ್ಲಿ ಎಂಟು ದಿನ ಇದ್ದರು. ನಂತರ ಅವರನ್ನು ಕೊಲೆ ಮಾಡಿ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ್ದರು. ಸಾಂಗ್ಲಿ ಜಿಲ್ಲೆಯಲ್ಲಿ ಈ ಪ್ರಕರಣದ ಎಲ್ಲ ಬೆಳವಣಿಗೆಗಳು ನಡೆದಿರುವುದರಿಂದ, ಪ್ರಕರಣದ ತನಿಖೆಯನ್ನು ಸಾಂಗ್ಲಿ ಪೊಲೀಸರಿಗೆ ಹಸ್ತಾಂತರಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>