<p><strong>ಬೆಳಗಾವಿ</strong>: ‘ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಸೋರುತ್ತಿದೆ. ಸರಿಯಾಗಿ ನಿರ್ವಹಣೆ ಮಾಡದಿರುವುದೇ ಇದಕ್ಕೆ ಕಾರಣ. ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೇ ಹೊಣೆ ಮಾಡಿ ಪ್ರಕರಣ ದಾಖಲಿಸಲಾಗುವುದು’ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ತಿಳಿಸಿದರು.</p><p>ಜಿಲ್ಲಾಸ್ಪತ್ರೆ ವ್ಯವಸ್ಥೆ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಹಳೆಯದಾಗಿದೆ. ಎಲ್ಲೆಂದರಲ್ಲಿ ಸೋರುತ್ತಿದೆ. ಕಟ್ಟಡದ ತುಂಬ ವಿದ್ಯುತ್ ಪರಿಕರಗಳಿವೆ. ನೀರು ಸೋರಿ ಯಾವಾಗ ಬೇಕಾದರೂ ಅವಘಡ ಸಂಭವಿಸಬಹುದು. ಇದೆಲ್ಲವನ್ನೂ ಅಧಿಕಾರಿಗಳು ಗಮನಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯ ಕಾರ್ಯದರ್ಶಿ, ನಿರ್ದೇಶಕ, ಆಸ್ಪತ್ರೆ ನಿರ್ದೇಶಕರನ್ನು ಭಾಗಿದಾರರನ್ನಾಗಿ ಮಾಡಿ ನೋಟಿಸ್ ನೀಡಲಾಗುವುದು’ ಎಂದರು.</p><p>‘ಔಷಧ ವಿತರಣೆಯಲ್ಲೂ ಪಾರದರ್ಶಕತೆ ಕಂಡುಬಂದಿಲ್ಲ. ರೋಗಿ ಹೆಸರು, ಯಾರಿಗೆ, ಎಷ್ಟು, ಯಾವ ಔಷಧ ಕೊಟ್ಟಿದ್ದಾರೆ ಎಂಬ ಬಗ್ಗೆ ದಾಖಲೆಗಳಿಲ್ಲ. ಈ ವ್ಯವಸ್ಥೆಯನ್ನು ಡಿಜಿಟಲೀಕರಣ ಮಾಡುವಂತೆ ಸೂಚಿಸಿದ್ದೇನೆ. ಔಷಧ ಸೋರಿಕೆ ಬಗ್ಗೆ ಸಂಬಂಧಿಸಿದವರಿಗೆ ನೋಟಿಸ್ ನೀಡಿ, ಸುಧಾರಿಸಲು ಒಂದು ತಿಂಕಳ ಕಾಲಾವಕಾಶ ನೀಡಲಾಗುವುದು’ ಎಂದರು.</p><p>‘ಜಿಲ್ಲೆಯ 250 ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದೇನೆ. ಅಧಿಕಾರಿಗಳು ಮತ್ತು ಇಲಾಖೆಗಳ ಮೇಲೆ ದಾಖಲಾದ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಎಂಟು ತಂಡಗಳಾಗಿ ಸಾರಿಗೆ ಇಲಾಖೆ, ಅಬಕಾರಿ, ಮಹಾನಗರ ಪಾಲಿಕೆ, ಉಪನೋಂದಣಾಧಿಕಾರಿ ಕಚೇರಿ, ಎಡಿಎಲ್ಆರ್ ಮುಂತಾದ ಕಚೇರಿಗಳಿಗೂ ಭೇಟಿ ನೀಡಿದ್ದೇವೆ’ ಎಂದೂ ತಿಳಿಸಿದರು.</p><p><strong>‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿಳಂಬ: ತನಿಖೆ’</strong></p><p>‘ಬೆಳಗಾವಿಯಲ್ಲಿ ಸಿದ್ಧಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೆ ವಿಳಂಬ ಮಾಡಲಾಗಿದೆ. ಕೆಲವು ಕಾಮಗಾರಿಗಳೂ ಕಳಪೆಯಾಗಿವೆ. ಇದರ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುತ್ತೇವೆ’ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಪ್ರತಿಕ್ರಿಯಿಸಿದರು.</p><p>‘ಸರ್ಕಾರದ ಹಣ ಪೋಲಾಗಲು ಯಾರು ಕಾರಣ ಎಂಬುದನ್ನು ಪತ್ತೆ ಹಚ್ಚಿ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ’ ಎಂದೂ ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಸೋರುತ್ತಿದೆ. ಸರಿಯಾಗಿ ನಿರ್ವಹಣೆ ಮಾಡದಿರುವುದೇ ಇದಕ್ಕೆ ಕಾರಣ. ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೇ ಹೊಣೆ ಮಾಡಿ ಪ್ರಕರಣ ದಾಖಲಿಸಲಾಗುವುದು’ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ತಿಳಿಸಿದರು.</p><p>ಜಿಲ್ಲಾಸ್ಪತ್ರೆ ವ್ಯವಸ್ಥೆ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಹಳೆಯದಾಗಿದೆ. ಎಲ್ಲೆಂದರಲ್ಲಿ ಸೋರುತ್ತಿದೆ. ಕಟ್ಟಡದ ತುಂಬ ವಿದ್ಯುತ್ ಪರಿಕರಗಳಿವೆ. ನೀರು ಸೋರಿ ಯಾವಾಗ ಬೇಕಾದರೂ ಅವಘಡ ಸಂಭವಿಸಬಹುದು. ಇದೆಲ್ಲವನ್ನೂ ಅಧಿಕಾರಿಗಳು ಗಮನಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯ ಕಾರ್ಯದರ್ಶಿ, ನಿರ್ದೇಶಕ, ಆಸ್ಪತ್ರೆ ನಿರ್ದೇಶಕರನ್ನು ಭಾಗಿದಾರರನ್ನಾಗಿ ಮಾಡಿ ನೋಟಿಸ್ ನೀಡಲಾಗುವುದು’ ಎಂದರು.</p><p>‘ಔಷಧ ವಿತರಣೆಯಲ್ಲೂ ಪಾರದರ್ಶಕತೆ ಕಂಡುಬಂದಿಲ್ಲ. ರೋಗಿ ಹೆಸರು, ಯಾರಿಗೆ, ಎಷ್ಟು, ಯಾವ ಔಷಧ ಕೊಟ್ಟಿದ್ದಾರೆ ಎಂಬ ಬಗ್ಗೆ ದಾಖಲೆಗಳಿಲ್ಲ. ಈ ವ್ಯವಸ್ಥೆಯನ್ನು ಡಿಜಿಟಲೀಕರಣ ಮಾಡುವಂತೆ ಸೂಚಿಸಿದ್ದೇನೆ. ಔಷಧ ಸೋರಿಕೆ ಬಗ್ಗೆ ಸಂಬಂಧಿಸಿದವರಿಗೆ ನೋಟಿಸ್ ನೀಡಿ, ಸುಧಾರಿಸಲು ಒಂದು ತಿಂಕಳ ಕಾಲಾವಕಾಶ ನೀಡಲಾಗುವುದು’ ಎಂದರು.</p><p>‘ಜಿಲ್ಲೆಯ 250 ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದೇನೆ. ಅಧಿಕಾರಿಗಳು ಮತ್ತು ಇಲಾಖೆಗಳ ಮೇಲೆ ದಾಖಲಾದ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಎಂಟು ತಂಡಗಳಾಗಿ ಸಾರಿಗೆ ಇಲಾಖೆ, ಅಬಕಾರಿ, ಮಹಾನಗರ ಪಾಲಿಕೆ, ಉಪನೋಂದಣಾಧಿಕಾರಿ ಕಚೇರಿ, ಎಡಿಎಲ್ಆರ್ ಮುಂತಾದ ಕಚೇರಿಗಳಿಗೂ ಭೇಟಿ ನೀಡಿದ್ದೇವೆ’ ಎಂದೂ ತಿಳಿಸಿದರು.</p><p><strong>‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿಳಂಬ: ತನಿಖೆ’</strong></p><p>‘ಬೆಳಗಾವಿಯಲ್ಲಿ ಸಿದ್ಧಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೆ ವಿಳಂಬ ಮಾಡಲಾಗಿದೆ. ಕೆಲವು ಕಾಮಗಾರಿಗಳೂ ಕಳಪೆಯಾಗಿವೆ. ಇದರ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುತ್ತೇವೆ’ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಪ್ರತಿಕ್ರಿಯಿಸಿದರು.</p><p>‘ಸರ್ಕಾರದ ಹಣ ಪೋಲಾಗಲು ಯಾರು ಕಾರಣ ಎಂಬುದನ್ನು ಪತ್ತೆ ಹಚ್ಚಿ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ’ ಎಂದೂ ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>