<p><strong>ಬೆಳಗಾವಿ</strong>: ‘ಬುದ್ಧ, ಬಸವ, ಅಂಬೇಡ್ಕರ್ ಯೋಜನೆ’ಯನ್ನು ಲೋಕೋಪಯೋಗಿ ಇಲಾಖೆಯಿಂದ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಅದರಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗುತ್ತಿದೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>‘ರಾಜ್ಯದಾದ್ಯಂತ ಪರಿಶಿಷ್ಟ ಸಮುದಾಯಗಳ ಫಲಾನುಭವಿಗಳಿಗೆ ಸರ್ಕಾರ ನಿವೇಶನಗಳನ್ನು ಹಂಚಿಕೆ ಮಾಡಿದೆ. ಆದರೆ, ಪಟ್ಟಣಗಳು ಮತ್ತು ಹಳ್ಳಿಗಳ ಹೊರವಲಯದಲ್ಲಿನ ನಿವೇಶನಗಳು ಅಭಿವೃದ್ಧಿಯಾಗದ ಕಾರಣ, ಅವುಗಳಿಂದ ಫಲಾನುಭವಿಗಳು ದೂರವಿದ್ದಾರೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಲೋಕೋಪಯೋಗಿ ಇಲಾಖೆಯು ಖಾಸಗಿ ಬಡಾವಣೆಗಳಂತೆಯೇ ನಿವೇಶನಗಳನ್ನು ಅಭಿವೃದ್ಧಿಪಡಿಸುತ್ತದೆ. ಚರಂಡಿ, ರಸ್ತೆ, ಕುಡಿಯುವ ನೀರು ಸರಬರಾಜು, ಉದ್ಯಾನ ಒದಗಿಸುತ್ತದೆ. ಸಾಧ್ಯವಾದರೆ ಅಂಗನವಾಡಿ ಮತ್ತು ಶಾಲಾ ಕಟ್ಟಡಗಳನ್ನು ನಿರ್ಮಿಸುತ್ತದೆ’ ಎಂದು ಹೇಳಿದರು.</p>.<p>‘ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಿಂದ ಬರುವ ₹20 ಕೋಟಿ ಯನ್ನು ಪ್ರಾಯೋಗಿಕವಾಗಿ ನಿವೇಶನಗಳ ಅಭಿವೃದ್ಧಿಗೆ ಬಳಸಲಾಗುವುದು’ ಎಂದರು.</p>.<p>‘ಮೊದಲ ಹಂತದಲ್ಲಿ 42 ಎಕರೆಯಲ್ಲಿ ಬೆಳಗಾವಿ ಜಿಲ್ಲೆಯ ಗುಮಚನಮರಡಿ, ಹುಕ್ಕೇರಿ ತಾಲ್ಲೂಕಿನ ಹರಗಾಪುರ, ಮೂಡಲಗಿ ತಾಲ್ಲೂಕಿನ ಅರಭಾವಿ, ಸವದತ್ತಿ, ಬಳ್ಳಾರಿ ಜಿಲ್ಲೆಯ ಕುರುಗೋಡು ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಪ್ರಾಯೋಗಿಕ ಯೋಜನೆಯ ಸಾಧಕ-ಬಾಧಕ ಅಂಶಗಳನ್ನು ಪರಿಶೀಲಿಸಿ, ರಾಜ್ಯದಾದ್ಯಂತ ಒಂದು ಸಾವಿರ ಎಕರೆ ಜಾಗದಲ್ಲಿ ಬಡಾವಣೆ ಅಭಿವೃದ್ಧಿಪಡಿಸಲಾಗುವುದು’ ಎಂದರು.</p>.<p>‘ನಗರಸಭೆ, ಪಟ್ಟಣ ಪಂಚಾಯಿತಿ,ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಠಾನಕ್ಕೆ ಕ್ರಮವಹಿಸಲಾಗಿದೆ. ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಎರಡನೇ ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖಾಸಗಿ ಜಮೀನು ಖರೀದಿಸಿ ಬಡಾವಣೆ ನಿರ್ಮಾಣ ಮಾಡಲಾಗುವುದು’ ಎಂದು ವಿವರಿಸಿದರು.</p>.<p>ಶಾಸಕ ಆಸಿಫ್ ಸೇಠ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಬುದ್ಧ, ಬಸವ, ಅಂಬೇಡ್ಕರ್ ಯೋಜನೆ’ಯನ್ನು ಲೋಕೋಪಯೋಗಿ ಇಲಾಖೆಯಿಂದ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಅದರಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗುತ್ತಿದೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>‘ರಾಜ್ಯದಾದ್ಯಂತ ಪರಿಶಿಷ್ಟ ಸಮುದಾಯಗಳ ಫಲಾನುಭವಿಗಳಿಗೆ ಸರ್ಕಾರ ನಿವೇಶನಗಳನ್ನು ಹಂಚಿಕೆ ಮಾಡಿದೆ. ಆದರೆ, ಪಟ್ಟಣಗಳು ಮತ್ತು ಹಳ್ಳಿಗಳ ಹೊರವಲಯದಲ್ಲಿನ ನಿವೇಶನಗಳು ಅಭಿವೃದ್ಧಿಯಾಗದ ಕಾರಣ, ಅವುಗಳಿಂದ ಫಲಾನುಭವಿಗಳು ದೂರವಿದ್ದಾರೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಲೋಕೋಪಯೋಗಿ ಇಲಾಖೆಯು ಖಾಸಗಿ ಬಡಾವಣೆಗಳಂತೆಯೇ ನಿವೇಶನಗಳನ್ನು ಅಭಿವೃದ್ಧಿಪಡಿಸುತ್ತದೆ. ಚರಂಡಿ, ರಸ್ತೆ, ಕುಡಿಯುವ ನೀರು ಸರಬರಾಜು, ಉದ್ಯಾನ ಒದಗಿಸುತ್ತದೆ. ಸಾಧ್ಯವಾದರೆ ಅಂಗನವಾಡಿ ಮತ್ತು ಶಾಲಾ ಕಟ್ಟಡಗಳನ್ನು ನಿರ್ಮಿಸುತ್ತದೆ’ ಎಂದು ಹೇಳಿದರು.</p>.<p>‘ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಿಂದ ಬರುವ ₹20 ಕೋಟಿ ಯನ್ನು ಪ್ರಾಯೋಗಿಕವಾಗಿ ನಿವೇಶನಗಳ ಅಭಿವೃದ್ಧಿಗೆ ಬಳಸಲಾಗುವುದು’ ಎಂದರು.</p>.<p>‘ಮೊದಲ ಹಂತದಲ್ಲಿ 42 ಎಕರೆಯಲ್ಲಿ ಬೆಳಗಾವಿ ಜಿಲ್ಲೆಯ ಗುಮಚನಮರಡಿ, ಹುಕ್ಕೇರಿ ತಾಲ್ಲೂಕಿನ ಹರಗಾಪುರ, ಮೂಡಲಗಿ ತಾಲ್ಲೂಕಿನ ಅರಭಾವಿ, ಸವದತ್ತಿ, ಬಳ್ಳಾರಿ ಜಿಲ್ಲೆಯ ಕುರುಗೋಡು ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಪ್ರಾಯೋಗಿಕ ಯೋಜನೆಯ ಸಾಧಕ-ಬಾಧಕ ಅಂಶಗಳನ್ನು ಪರಿಶೀಲಿಸಿ, ರಾಜ್ಯದಾದ್ಯಂತ ಒಂದು ಸಾವಿರ ಎಕರೆ ಜಾಗದಲ್ಲಿ ಬಡಾವಣೆ ಅಭಿವೃದ್ಧಿಪಡಿಸಲಾಗುವುದು’ ಎಂದರು.</p>.<p>‘ನಗರಸಭೆ, ಪಟ್ಟಣ ಪಂಚಾಯಿತಿ,ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಠಾನಕ್ಕೆ ಕ್ರಮವಹಿಸಲಾಗಿದೆ. ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಎರಡನೇ ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖಾಸಗಿ ಜಮೀನು ಖರೀದಿಸಿ ಬಡಾವಣೆ ನಿರ್ಮಾಣ ಮಾಡಲಾಗುವುದು’ ಎಂದು ವಿವರಿಸಿದರು.</p>.<p>ಶಾಸಕ ಆಸಿಫ್ ಸೇಠ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>