<p><strong>ರಾಮದುರ್ಗ</strong>: ‘ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಓದಿದ ಎಲ್ಲರಿಗೂ ಸರ್ಕಾರಿ ನೌಕರಿ ಸಿಗುವುದು ಕಷ್ಟಸಾಧ್ಯ. ಇಂತದ್ದರಲ್ಲಿ ಖಾಸಗಿ ಸಂಸ್ಥೆಗಳು ಉದ್ಯೋಗ ಮೇಳ ನಡೆಸುತ್ತಿವೆ. ಅವುಗಳ ಲಾಭ ಪಡೆದುಕೊಳ್ಳಬೇಕು’ ಎಂದು ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.</p>.<p>ರಾಮದುರ್ಗದ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಅತಿಯಾಗುತ್ತಿದೆ. ಸರ್ಕಾರಿ ಕೆಲಸಕ್ಕೆ ಜೀವನವನ್ನು ಮುಡುಪಾಗಿಡದೇ ಸ್ವಯಂ ಉದ್ಯೋಗಕ್ಕೆ ಮುಂದಾಗಬೇಕು ಎಂದು ತಿಳಿಸಿದರು.</p>.<p>ಹಲವು ದಿನಗಳಿಂದ ರಾಮದುರ್ಗ ಪಟ್ಟಣದಲ್ಲಿ ಗಾರ್ಮೆಂಟ್ಸ್ ಆರಂಭಿಸುವುದಾಗಿ ಹೇಳಿದ್ದೆ. ಆದರೆ, ಕೆಲ ಕಾರಣಗಳಿಂದಾಗಿ ಅದು ಕಾರ್ಯರೂಪಕ್ಕೆ ಬಂದಿಲ್ಲ. ಮುಂದಿನ ವರ್ಷದೊಳಗಾಗಿ ರಾಮದುರ್ಗದಲ್ಲಿ ಗಾರ್ಮೆಂಟ್ಸ್ ಆರಂಭಿಸಿ ಸುಮಾರು 2 ಸಾವಿರ ಉದ್ಯೋಗ ದೊರಕಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.</p>.<p>ಎಸ್.ಜಿ. ಚಿಕ್ಕನರಗುಂದ, ಜಿ.ಬಿ.ರಂಗನಗೌಡರ, ಜಯರಾಮ್ ಕೋಣಿ, ಪ್ರಾಚಾರ್ಯ ಕಮತಗಿ ಸೇರಿದಂತೆ ಕಾಲೇಜಿನ ಸಿಬ್ಬಂದಿ, ಮಕ್ಕಳು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ</strong>: ‘ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಓದಿದ ಎಲ್ಲರಿಗೂ ಸರ್ಕಾರಿ ನೌಕರಿ ಸಿಗುವುದು ಕಷ್ಟಸಾಧ್ಯ. ಇಂತದ್ದರಲ್ಲಿ ಖಾಸಗಿ ಸಂಸ್ಥೆಗಳು ಉದ್ಯೋಗ ಮೇಳ ನಡೆಸುತ್ತಿವೆ. ಅವುಗಳ ಲಾಭ ಪಡೆದುಕೊಳ್ಳಬೇಕು’ ಎಂದು ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.</p>.<p>ರಾಮದುರ್ಗದ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಅತಿಯಾಗುತ್ತಿದೆ. ಸರ್ಕಾರಿ ಕೆಲಸಕ್ಕೆ ಜೀವನವನ್ನು ಮುಡುಪಾಗಿಡದೇ ಸ್ವಯಂ ಉದ್ಯೋಗಕ್ಕೆ ಮುಂದಾಗಬೇಕು ಎಂದು ತಿಳಿಸಿದರು.</p>.<p>ಹಲವು ದಿನಗಳಿಂದ ರಾಮದುರ್ಗ ಪಟ್ಟಣದಲ್ಲಿ ಗಾರ್ಮೆಂಟ್ಸ್ ಆರಂಭಿಸುವುದಾಗಿ ಹೇಳಿದ್ದೆ. ಆದರೆ, ಕೆಲ ಕಾರಣಗಳಿಂದಾಗಿ ಅದು ಕಾರ್ಯರೂಪಕ್ಕೆ ಬಂದಿಲ್ಲ. ಮುಂದಿನ ವರ್ಷದೊಳಗಾಗಿ ರಾಮದುರ್ಗದಲ್ಲಿ ಗಾರ್ಮೆಂಟ್ಸ್ ಆರಂಭಿಸಿ ಸುಮಾರು 2 ಸಾವಿರ ಉದ್ಯೋಗ ದೊರಕಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.</p>.<p>ಎಸ್.ಜಿ. ಚಿಕ್ಕನರಗುಂದ, ಜಿ.ಬಿ.ರಂಗನಗೌಡರ, ಜಯರಾಮ್ ಕೋಣಿ, ಪ್ರಾಚಾರ್ಯ ಕಮತಗಿ ಸೇರಿದಂತೆ ಕಾಲೇಜಿನ ಸಿಬ್ಬಂದಿ, ಮಕ್ಕಳು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>