<p><strong>ಬೆಳಗಾವಿ:</strong> ‘ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂಬ ನಿರ್ಣಯ ಅಂಗೀಕರಿಸಲು ವಿಳಂಬ ನೀತಿ ಅನುಸರಿಸಿದರೆ, ಮೇಯರ್ ಹಾಗೂ ಉಪಮೇಯರ್ ಭಾಗವಹಿಸುವ ಎಲ್ಲ ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಗುವುದು’ ಎಂದು ಎಚ್ಚರಿಕೆ ಕೊಡಲಾಯಿತು.</p><p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. </p><p>ಕರ್ನಾಟಕದ ಪರ ಗೊತ್ತುವಳಿ ಅಂಗೀಕರಿಸುವವರೆಗೆ ಹಂತ–ಹಂತವಾಗಿ ಹೋರಾಟ ಮುಂದುವರಿಸಲು ನಿರ್ಧರಿಸಲಾಯಿತು.</p><p>ಜತೆಗೆ, ‘ಈ ನಿರ್ಣಯ ಅಂಗೀಕರಿಸಲು ಅವಕಾಶವಿದೆಯೇ ಎಂದು ತಿಳಿಯಲು ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆಯಲಾಗುವುದು’ ಎಂದು ಮೇ 13ರಂದು ನಡೆದ ಪಾಲಿಕೆ ಪರಿಷತ್ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ತಿರಸ್ಕರಿಸಲು ತೀರ್ಮಾನಿಸಲಾಯಿತು. </p><p>‘ರಾಜ್ಯದ ಪರ ನಿರ್ಣಯ ಅಂಗೀಕರಿಸುವುದಾಗಿ ಕನ್ನಡ ಸಂಘಟನೆಗಳಿಗೆ ನೀಡಿದ ಭರವಸೆಯಂತೆ ನಡೆದುಕೊಳ್ಳದ ಮೇಯರ್ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಹನುಮಂತ ಕೊಂಗಾಲಿ ಅವರು, ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ’ ಎಂದು ಸಭೆ ಅಭಿಪ್ರಾಯಪಟ್ಟಿತು.</p><p>ರಾಜ್ಯದ ಪರ ನಿರ್ಣಯ ಅಂಗೀಕಾರಕ್ಕಾಗಿ ನಗರಾಭಿವೃದ್ಧಿ ಕಾರ್ಯದರ್ಶಿಗೆ ಪತ್ರ ಬರೆಯುವ ನಿರ್ಣಯ ಕೈಗೊಂಡ ಮೇಯರ್ ಕ್ರಮದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಲಾಯಿತು. </p><p>ನಿರ್ಣಯ ಅಂಗೀಕಾರ ಬೇಗ ಆಗದಿದ್ದರೆ, ಗಡಿ ವಿವಾದ ಕುರಿತಾಗಿ ಖಚಿತವಾದ ನಿಲವು ತಿಳಿಸುವಂತೆ ಆಗ್ರಹಿಸಿ, ಬಿಜೆಪಿ ಹಾಗೂ ಕಾಂಗ್ರೆಸ್ನ ಶಾಸಕರಿಗೆ ಪತ್ರ ಬರೆಯಲು ನಿರ್ಧರಿಸಲಾಯಿತು. </p><p>ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಕಿತ್ತೂರು ಕರ್ನಾಟಕ ಸೇನೆ ರಾಜ್ಯ ಘಟಕದ ಅಧ್ಯಕ್ಷ ಮಹಾದೇವ ತಳವಾರ, ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ವಾಜೀದ್ ಹಿರೇಕೊಡಿ, ಗಡಿನಾಡು ಕನ್ನಡಿಗರ ಸೇನೆ ರಾಜ್ಯ ಘಟಕದ ಅಧ್ಯಕ್ಷ ಬಲರಾಮ ಮಾಸೇನಟ್ಟಿ, ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಹಿರಿಯ ಉಪಾಧ್ಯಕ್ಷ ಮೈನೋದ್ದೀನ್ ಮಕಾನಾದಾರ, ಆನಂದ ಬಿಲಾವರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂಬ ನಿರ್ಣಯ ಅಂಗೀಕರಿಸಲು ವಿಳಂಬ ನೀತಿ ಅನುಸರಿಸಿದರೆ, ಮೇಯರ್ ಹಾಗೂ ಉಪಮೇಯರ್ ಭಾಗವಹಿಸುವ ಎಲ್ಲ ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಗುವುದು’ ಎಂದು ಎಚ್ಚರಿಕೆ ಕೊಡಲಾಯಿತು.</p><p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. </p><p>ಕರ್ನಾಟಕದ ಪರ ಗೊತ್ತುವಳಿ ಅಂಗೀಕರಿಸುವವರೆಗೆ ಹಂತ–ಹಂತವಾಗಿ ಹೋರಾಟ ಮುಂದುವರಿಸಲು ನಿರ್ಧರಿಸಲಾಯಿತು.</p><p>ಜತೆಗೆ, ‘ಈ ನಿರ್ಣಯ ಅಂಗೀಕರಿಸಲು ಅವಕಾಶವಿದೆಯೇ ಎಂದು ತಿಳಿಯಲು ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆಯಲಾಗುವುದು’ ಎಂದು ಮೇ 13ರಂದು ನಡೆದ ಪಾಲಿಕೆ ಪರಿಷತ್ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ತಿರಸ್ಕರಿಸಲು ತೀರ್ಮಾನಿಸಲಾಯಿತು. </p><p>‘ರಾಜ್ಯದ ಪರ ನಿರ್ಣಯ ಅಂಗೀಕರಿಸುವುದಾಗಿ ಕನ್ನಡ ಸಂಘಟನೆಗಳಿಗೆ ನೀಡಿದ ಭರವಸೆಯಂತೆ ನಡೆದುಕೊಳ್ಳದ ಮೇಯರ್ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಹನುಮಂತ ಕೊಂಗಾಲಿ ಅವರು, ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ’ ಎಂದು ಸಭೆ ಅಭಿಪ್ರಾಯಪಟ್ಟಿತು.</p><p>ರಾಜ್ಯದ ಪರ ನಿರ್ಣಯ ಅಂಗೀಕಾರಕ್ಕಾಗಿ ನಗರಾಭಿವೃದ್ಧಿ ಕಾರ್ಯದರ್ಶಿಗೆ ಪತ್ರ ಬರೆಯುವ ನಿರ್ಣಯ ಕೈಗೊಂಡ ಮೇಯರ್ ಕ್ರಮದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಲಾಯಿತು. </p><p>ನಿರ್ಣಯ ಅಂಗೀಕಾರ ಬೇಗ ಆಗದಿದ್ದರೆ, ಗಡಿ ವಿವಾದ ಕುರಿತಾಗಿ ಖಚಿತವಾದ ನಿಲವು ತಿಳಿಸುವಂತೆ ಆಗ್ರಹಿಸಿ, ಬಿಜೆಪಿ ಹಾಗೂ ಕಾಂಗ್ರೆಸ್ನ ಶಾಸಕರಿಗೆ ಪತ್ರ ಬರೆಯಲು ನಿರ್ಧರಿಸಲಾಯಿತು. </p><p>ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಕಿತ್ತೂರು ಕರ್ನಾಟಕ ಸೇನೆ ರಾಜ್ಯ ಘಟಕದ ಅಧ್ಯಕ್ಷ ಮಹಾದೇವ ತಳವಾರ, ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ವಾಜೀದ್ ಹಿರೇಕೊಡಿ, ಗಡಿನಾಡು ಕನ್ನಡಿಗರ ಸೇನೆ ರಾಜ್ಯ ಘಟಕದ ಅಧ್ಯಕ್ಷ ಬಲರಾಮ ಮಾಸೇನಟ್ಟಿ, ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಹಿರಿಯ ಉಪಾಧ್ಯಕ್ಷ ಮೈನೋದ್ದೀನ್ ಮಕಾನಾದಾರ, ಆನಂದ ಬಿಲಾವರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>