<p><strong>ಬೆಳಗಾವಿ</strong>: ‘ಇಲ್ಲಿನ ಮಹಾನಗರ ಪಾಲಿಕೆ ಪರಿಷತ್ ಸಭೆಯಲ್ಲಿ ಕರ್ನಾಟಕ ಪರವಾದ ನಿರ್ಣಯ ಅಂಗೀಕರಿಸಬೇಕು’ ಎಂದು ಆಗ್ರಹಿಸಿ ಮೇ 26ರಂದು ವಿವಿಧ ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ಪಾಲಿಕೆಗೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ.</p>.<p>ಅಂದಿನ ಹೋರಾಟದಲ್ಲಿ ಭಾಗವಹಿಸಲು ಕನ್ನಡ ಹೋರಾಟಗಾರರಾದ ವಾಟಾಳ್ ನಾಗರಾಜ, ಸಾ.ರಾ. ಗೋವಿಂದು, ಕೆ.ಆರ್. ಕುಮಾರ ಹಾಗೂ ಮಂಜುನಾಥ ದೇವ ಅವರು ಬೆಳಗಾವಿಗೆ ಆಗಮಿಸುವರು.</p>.<p>ಬೆಳಿಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪುನರ್ ಸ್ಥಾಪನೆಗೊಂಡ ಹಲ್ಮಿಡಿ ಶಾಸನದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಅವರ ನೇತೃತ್ವದಲ್ಲಿ 20 ಕನ್ನಡ ಸಂಘಟನೆಗಳ ಪ್ರಮುಖರು ಮತ್ತು ಕಾರ್ಯಕರ್ತರು ಪಾಲಿಕೆಗೆ ಮುತ್ತಿಗೆ ಹಾಕುವರು.</p>.<p>‘ಹಲ್ಮಿಡಿ ಶಾಸನದ ಪ್ರತಿಕೃತಿಗೆ ಮಲಪ್ರಭಾ, ಘಟಪ್ರಭಾ, ದೂಧಗಂಗಾ, ಹಿರಣ್ಯಕೇಶಿ ಹಾಗೂ ಕೃಷ್ಣಾ ನದಿಗಳ ನೀರಿನ ಅಭಿಷೇಕ, ಕ್ಷೀರಾಭಿಷೇಕ ನಡೆಯಲಿದೆ. ಈ ಕಾರ್ಯಕ್ರಮ ಹಾಗೂ ಪಾಲಿಕೆಗೆ ಮುತ್ತಿಗೆ ಹೋರಾಟದಲ್ಲಿ ಕನ್ನಡಿಗರು ಮತ್ತು ನಾನಾ ಸಂಘ–ಸಂಸ್ಥೆಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-21-1038137874</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಇಲ್ಲಿನ ಮಹಾನಗರ ಪಾಲಿಕೆ ಪರಿಷತ್ ಸಭೆಯಲ್ಲಿ ಕರ್ನಾಟಕ ಪರವಾದ ನಿರ್ಣಯ ಅಂಗೀಕರಿಸಬೇಕು’ ಎಂದು ಆಗ್ರಹಿಸಿ ಮೇ 26ರಂದು ವಿವಿಧ ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ಪಾಲಿಕೆಗೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ.</p>.<p>ಅಂದಿನ ಹೋರಾಟದಲ್ಲಿ ಭಾಗವಹಿಸಲು ಕನ್ನಡ ಹೋರಾಟಗಾರರಾದ ವಾಟಾಳ್ ನಾಗರಾಜ, ಸಾ.ರಾ. ಗೋವಿಂದು, ಕೆ.ಆರ್. ಕುಮಾರ ಹಾಗೂ ಮಂಜುನಾಥ ದೇವ ಅವರು ಬೆಳಗಾವಿಗೆ ಆಗಮಿಸುವರು.</p>.<p>ಬೆಳಿಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪುನರ್ ಸ್ಥಾಪನೆಗೊಂಡ ಹಲ್ಮಿಡಿ ಶಾಸನದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಅವರ ನೇತೃತ್ವದಲ್ಲಿ 20 ಕನ್ನಡ ಸಂಘಟನೆಗಳ ಪ್ರಮುಖರು ಮತ್ತು ಕಾರ್ಯಕರ್ತರು ಪಾಲಿಕೆಗೆ ಮುತ್ತಿಗೆ ಹಾಕುವರು.</p>.<p>‘ಹಲ್ಮಿಡಿ ಶಾಸನದ ಪ್ರತಿಕೃತಿಗೆ ಮಲಪ್ರಭಾ, ಘಟಪ್ರಭಾ, ದೂಧಗಂಗಾ, ಹಿರಣ್ಯಕೇಶಿ ಹಾಗೂ ಕೃಷ್ಣಾ ನದಿಗಳ ನೀರಿನ ಅಭಿಷೇಕ, ಕ್ಷೀರಾಭಿಷೇಕ ನಡೆಯಲಿದೆ. ಈ ಕಾರ್ಯಕ್ರಮ ಹಾಗೂ ಪಾಲಿಕೆಗೆ ಮುತ್ತಿಗೆ ಹೋರಾಟದಲ್ಲಿ ಕನ್ನಡಿಗರು ಮತ್ತು ನಾನಾ ಸಂಘ–ಸಂಸ್ಥೆಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-21-1038137874</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>