ಬೆಳಗಾವಿ: ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ ಅವರ ಇಲ್ಲಿನ ವಿಜಯನಗರದ ನಿವಾಸಕ್ಕೆ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಂಗಳವಾರ ರಾತ್ರಿ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.
ಪತ್ನಿ ಜಯಶ್ರೀ ಪಾಟೀಲ ಅವರಿಗೆ ಧೈರ್ಯ ತುಂಬಿದ ಅವರು, ಮಗುವಿನ ಭವಿಷ್ಯಕ್ಕಾಗಿ ನೀನು ಧೈರ್ಯ ತಂದುಕೊಳ್ಳಬೇಕು. ಮುಂದಿನ ಜೀವನ ರೂಪಿಸಿಕೊಳ್ಳಲು ಹೋರಾಡಬೇಕು. ನಿಮ್ಮ ಕುಟುಂಬದೊಂದಿಗೆ ಕಾಂಗ್ರೆಸ್ ಪಕ್ಷ ಇರಲಿದೆ ಎಂದು ತಿಳಿಸಿದರು.