<p>ಚನ್ನಮ್ಮನ ಕಿತ್ತೂರು (ಬೆಳಗಾವಿ): ರಾಣಿ ಚನ್ನಮ್ಮನ ಕರ್ಮಭೂಮಿಯಲ್ಲಿ ಸೋಮವಾರ ನಡೆದ ಕಿತ್ತೂರು ಉತ್ಸವದ ಮೆರವಣಿಗೆಗೆ ಜನಸಾಗರವೇ ಹರಿದುಬಂತು.</p>.<p>ಬ್ಯಾಂಡ್, ಗೆಜ್ಜೆಮೇಳ, ಹುಲಿ ವೇಷ,ಗೊಂಬೆ ಕುಣಿತ, ಭಜನೆ ಸೇರಿ ವಿವಿಧ ಕಲಾತಂಡಗಳ ಮೆರುಗಿನೊಂದಿಗೆ 4 ಕಿ.ಮೀ. ದೂರದವರೆಗೆ ಅದ್ಧೂರಿ ಮೆರವಣಿಗೆ ನಡೆಯಿತು.</p>.<p>ಮಹಿಳೆಯರು ಪೂರ್ಣಕುಂಭ ಹೊತ್ತು ಸಾಗಿದರು. ಸಾರೋಟದ ಕುದುರೆಗಳು ಕೋಡಿ ಹಾಗೂ ಆನೆ ಚನ್ನಮ್ಮನ ಚಿತ್ರ ಹೊತ್ತು ಸಾಗಿದವು.</p>.<p>ಕಿತ್ತೂರು ಸೇನೆ 1824 ಅ.23ರಂದು ಬ್ರಿಟಿಷ್ ಸೇನೆಯನ್ನು ಸೋಲಿಸಿತು. ಆ ವಿಜಯದ ಸಂಕೇತವಾಗಿ ಉತ್ಸವ ಆಚರಿಸಲಾಗುತ್ತಿದೆ. ಈ ಬಾರಿ ರಾಜ್ಯ<br />ಮಟ್ಟದಲ್ಲಿ ಆಚರಿಸುತ್ತಿರುವುದು ಈ ಭಾಗದವರ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.</p>.<p>ಶಾಸಕ ಮಹಾಂತೇಶ ದೊಡ್ಡ ಗೌಡರ ಮತ್ತು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಉತ್ಸವಕ್ಕೆ ಚಾಲನೆ ನೀಡಿದರು.</p>.<p>ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಿತ್ತೂರು ಸಂಸ್ಥಾನದ ನಂದಿಧ್ವಜ ಆರೋಹಣ ಮಾಡಿದರು.</p>.<p>ನಿಚ್ಚಣಕಿವರೆಗೆ ಮೆರವಣಿಗೆ ನಡೆಯಿತು. ಮೆರವಣಿಗೆ ಉದ್ಘಾಟಿಸ ಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಬರಲಿಲ್ಲ. ಕಿತ್ತೂರು, ಬೈಲಹೊಂಗಲ ಶಾಸಕರ ಹೊರತಾಗಿ ಜಿಲ್ಲೆಯ ಇತರ ಜನಪ್ರತಿನಿಧಿಗಳೂ<br />ಇತ್ತ ಸುಳಿಯಲಿಲ್ಲ.</p>.<p>ಜನೋತ್ಸವದಲ್ಲಿ ಉತ್ಸಾಹ ಮತ್ತು ಹುಮ್ಮಸ್ಸಿಗೂ ಕೊರತೆ ಇರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಮ್ಮನ ಕಿತ್ತೂರು (ಬೆಳಗಾವಿ): ರಾಣಿ ಚನ್ನಮ್ಮನ ಕರ್ಮಭೂಮಿಯಲ್ಲಿ ಸೋಮವಾರ ನಡೆದ ಕಿತ್ತೂರು ಉತ್ಸವದ ಮೆರವಣಿಗೆಗೆ ಜನಸಾಗರವೇ ಹರಿದುಬಂತು.</p>.<p>ಬ್ಯಾಂಡ್, ಗೆಜ್ಜೆಮೇಳ, ಹುಲಿ ವೇಷ,ಗೊಂಬೆ ಕುಣಿತ, ಭಜನೆ ಸೇರಿ ವಿವಿಧ ಕಲಾತಂಡಗಳ ಮೆರುಗಿನೊಂದಿಗೆ 4 ಕಿ.ಮೀ. ದೂರದವರೆಗೆ ಅದ್ಧೂರಿ ಮೆರವಣಿಗೆ ನಡೆಯಿತು.</p>.<p>ಮಹಿಳೆಯರು ಪೂರ್ಣಕುಂಭ ಹೊತ್ತು ಸಾಗಿದರು. ಸಾರೋಟದ ಕುದುರೆಗಳು ಕೋಡಿ ಹಾಗೂ ಆನೆ ಚನ್ನಮ್ಮನ ಚಿತ್ರ ಹೊತ್ತು ಸಾಗಿದವು.</p>.<p>ಕಿತ್ತೂರು ಸೇನೆ 1824 ಅ.23ರಂದು ಬ್ರಿಟಿಷ್ ಸೇನೆಯನ್ನು ಸೋಲಿಸಿತು. ಆ ವಿಜಯದ ಸಂಕೇತವಾಗಿ ಉತ್ಸವ ಆಚರಿಸಲಾಗುತ್ತಿದೆ. ಈ ಬಾರಿ ರಾಜ್ಯ<br />ಮಟ್ಟದಲ್ಲಿ ಆಚರಿಸುತ್ತಿರುವುದು ಈ ಭಾಗದವರ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.</p>.<p>ಶಾಸಕ ಮಹಾಂತೇಶ ದೊಡ್ಡ ಗೌಡರ ಮತ್ತು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಉತ್ಸವಕ್ಕೆ ಚಾಲನೆ ನೀಡಿದರು.</p>.<p>ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಿತ್ತೂರು ಸಂಸ್ಥಾನದ ನಂದಿಧ್ವಜ ಆರೋಹಣ ಮಾಡಿದರು.</p>.<p>ನಿಚ್ಚಣಕಿವರೆಗೆ ಮೆರವಣಿಗೆ ನಡೆಯಿತು. ಮೆರವಣಿಗೆ ಉದ್ಘಾಟಿಸ ಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಬರಲಿಲ್ಲ. ಕಿತ್ತೂರು, ಬೈಲಹೊಂಗಲ ಶಾಸಕರ ಹೊರತಾಗಿ ಜಿಲ್ಲೆಯ ಇತರ ಜನಪ್ರತಿನಿಧಿಗಳೂ<br />ಇತ್ತ ಸುಳಿಯಲಿಲ್ಲ.</p>.<p>ಜನೋತ್ಸವದಲ್ಲಿ ಉತ್ಸಾಹ ಮತ್ತು ಹುಮ್ಮಸ್ಸಿಗೂ ಕೊರತೆ ಇರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>