<p>ಬೆಳಗಾವಿ: ‘ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಎದುರಿಗಿರುವ ಕೃಷಿ ಭವನವನ್ನು ಸರ್ಕಾರದ ಸುಪರ್ದಿಗೆ ಪಡೆಯಬೇಕು’ ಎಂದು ಭಾರತೀಯ ಕೃಷಿಕ ಸಮಾಜ–ಕರ್ನಾಟಕ ಅಧ್ಯಕ್ಷ ಸಿದಗೌಡ ಮೋದಗಿ ಆಗ್ರಹಿಸಿದರು.</p>.<p>‘ಕೃಷಿ ಭವನವನ್ನು 1996ರಲ್ಲಿ ಖಾಸಗಿ ವ್ಯಕ್ತಿಗೆ ಕೃಷಿಗೆ ಸಂಬಂಧಿಸಿದ ಪರಿಕರಗಳನ್ನು ಮಾರಾಟ ಮಾಡಲು ಬಾಡಿಗೆ ನೀಡಲಾಗಿದೆ. ಆದರೆ, ಇದೀಗ ಈ ಕೃಷಿ ಭವನವನ್ನು ಬಾರ್ ಮತ್ತು ರೆಸ್ಟಾರೆಂಟ್ ಆಗಿ ಪರಿವರ್ತಿಸಲಾಗಿದೆ. ಇದು ಅತ್ಯಂತ ಖಂಡನೀಯ’ ಎಂದು ಅವರು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಕಿಡಿ ಕಾರಿದರು.</p>.<p>‘ಕೃಷಿ ಬೆಳವಣಿಗೆ ಹಾಗೂ ರೈತರ ಹಿತಕ್ಕಾಗಿ ಈ ಭವನ ಕಟ್ಟಲಾಗಿದೆ. ಆದರೆ, ಮದ್ಯ ಮಾರಾಟದ ಮಳಿಗೆ ಮತ್ತು ಲಾಡ್ಜ್ ಮಾಡಿದ್ದು ದುರಂತವೇ ಸರಿ. 2016ರಿಂದ ನಿರಂತರವಾಗಿ ಭಾರತೀಯ ಕೃಷಿಕ ಸಮಾಜದ ವತಿಯಿಂದ ಈ ಬಗ್ಗೆ ಹೋರಾಟ ಮಾಡುತ್ತಿದ್ದೇವೆ. ಈ ನಡುವೆ ಭವನದ ವಿಚಾರವಾಗಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಇದಕ್ಕೆ ಸಮರ್ಪಕ ದಾಖಲೆಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಒದಗಿಸಬೇಕು. ತಡೆಯಾಜ್ಞೆ ತೆರವುಗೊಳಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>‘ಖಾಸಗಿ ವ್ಯಕ್ತಿಗಳು ಕೃಷಿ ಸಂಬಂಧಿ ಪರಿಕರಗಳ ಮಾರಾಟಕ್ಕೆಂದು ನೀಡಲಾದ ಭವನವನ್ನು ಅನ್ಯಕಾರ್ಯಕ್ಕೆ ಬಳಸಿದವರ ವಿರುದ್ಧ ಹಾಗೂ ಇದನ್ನು ನೀಡಿದವರ ವಿರುದ್ಧ ತನಿಖೆ ನಡೆಸಬೇಕು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದೂ ಒತ್ತಾಯಿಸಿದರು.</p>.<p>ಮುಖಂಡರಾದ ಸಂಜೀವ ಡೊಂಗರಗಾವಿ, ಮಲ್ಲಿಕಾರ್ಜುನ ಡೊಂಗರಗಾವಿ, ಶೇಖರ, ಶಿವಲೀಲಾ ಮೀಸಾಳೆ, ಈರಪ್ಪ ಪಟ್ಟಿಹಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-21-930828537</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಎದುರಿಗಿರುವ ಕೃಷಿ ಭವನವನ್ನು ಸರ್ಕಾರದ ಸುಪರ್ದಿಗೆ ಪಡೆಯಬೇಕು’ ಎಂದು ಭಾರತೀಯ ಕೃಷಿಕ ಸಮಾಜ–ಕರ್ನಾಟಕ ಅಧ್ಯಕ್ಷ ಸಿದಗೌಡ ಮೋದಗಿ ಆಗ್ರಹಿಸಿದರು.</p>.<p>‘ಕೃಷಿ ಭವನವನ್ನು 1996ರಲ್ಲಿ ಖಾಸಗಿ ವ್ಯಕ್ತಿಗೆ ಕೃಷಿಗೆ ಸಂಬಂಧಿಸಿದ ಪರಿಕರಗಳನ್ನು ಮಾರಾಟ ಮಾಡಲು ಬಾಡಿಗೆ ನೀಡಲಾಗಿದೆ. ಆದರೆ, ಇದೀಗ ಈ ಕೃಷಿ ಭವನವನ್ನು ಬಾರ್ ಮತ್ತು ರೆಸ್ಟಾರೆಂಟ್ ಆಗಿ ಪರಿವರ್ತಿಸಲಾಗಿದೆ. ಇದು ಅತ್ಯಂತ ಖಂಡನೀಯ’ ಎಂದು ಅವರು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಕಿಡಿ ಕಾರಿದರು.</p>.<p>‘ಕೃಷಿ ಬೆಳವಣಿಗೆ ಹಾಗೂ ರೈತರ ಹಿತಕ್ಕಾಗಿ ಈ ಭವನ ಕಟ್ಟಲಾಗಿದೆ. ಆದರೆ, ಮದ್ಯ ಮಾರಾಟದ ಮಳಿಗೆ ಮತ್ತು ಲಾಡ್ಜ್ ಮಾಡಿದ್ದು ದುರಂತವೇ ಸರಿ. 2016ರಿಂದ ನಿರಂತರವಾಗಿ ಭಾರತೀಯ ಕೃಷಿಕ ಸಮಾಜದ ವತಿಯಿಂದ ಈ ಬಗ್ಗೆ ಹೋರಾಟ ಮಾಡುತ್ತಿದ್ದೇವೆ. ಈ ನಡುವೆ ಭವನದ ವಿಚಾರವಾಗಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಇದಕ್ಕೆ ಸಮರ್ಪಕ ದಾಖಲೆಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಒದಗಿಸಬೇಕು. ತಡೆಯಾಜ್ಞೆ ತೆರವುಗೊಳಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>‘ಖಾಸಗಿ ವ್ಯಕ್ತಿಗಳು ಕೃಷಿ ಸಂಬಂಧಿ ಪರಿಕರಗಳ ಮಾರಾಟಕ್ಕೆಂದು ನೀಡಲಾದ ಭವನವನ್ನು ಅನ್ಯಕಾರ್ಯಕ್ಕೆ ಬಳಸಿದವರ ವಿರುದ್ಧ ಹಾಗೂ ಇದನ್ನು ನೀಡಿದವರ ವಿರುದ್ಧ ತನಿಖೆ ನಡೆಸಬೇಕು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದೂ ಒತ್ತಾಯಿಸಿದರು.</p>.<p>ಮುಖಂಡರಾದ ಸಂಜೀವ ಡೊಂಗರಗಾವಿ, ಮಲ್ಲಿಕಾರ್ಜುನ ಡೊಂಗರಗಾವಿ, ಶೇಖರ, ಶಿವಲೀಲಾ ಮೀಸಾಳೆ, ಈರಪ್ಪ ಪಟ್ಟಿಹಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-21-930828537</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>