<p><strong>ಬೆಳಗಾವಿ:</strong> ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಹರಿಯದ ಕಾರಣ ಕೃಷ್ಣಾ ನದಿಯೊಡಲು ಬರಿದಾಗುತ್ತ ಸಾಗಿದ್ದು, ನದಿಪಾತ್ರದ ಗ್ರಾಮಗಳ ಜನರ ಆತಂಕ ಶುರುವಾಗಿದೆ.</p>.<p>ಹಿಪ್ಪರಗಿ ಬ್ಯಾರೇಜ್ನ 22ನೇ ಗೇಟ್ ಮುರಿದ ಪರಿಣಾಮ ಅಪಾರ ಪ್ರಮಾಣದ ನೀರು ಪೋಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಹಿಪ್ಪರಗಿಯಲ್ಲಿ 1.76 ಟಿಎಂಸಿ (ಲೈವ್ ಸ್ಟೋರೇಜ್) ನೀರು ಸಂಗ್ರಹವಿತ್ತು. ಈ ವರ್ಷ ಮೇ 10ರಂದು 0.31 ಟಿಎಂಸಿ (ಲೈವ್ ಸ್ಟೋರೇಜ್) ಮಾತ್ರ ನೀರು ಸಂಗ್ರಹವಿದೆ. ಇದು ಎರಡು ವಾರಗಳ ಮಟ್ಟಿಗೆ ಸಾಕಾಗಲಿದೆ.</p>.<p>ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಹರಿಯದಿದ್ದರೆ, ಬೆಳಗಾವಿ ಜಿಲ್ಲೆಯ 130ಕ್ಕೂ ಅಧಿಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದೆ. ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಹಳ್ಳಿಗಳು ಸಹ ನೀರಿನ ಸಮಸ್ಯೆಯಿಂದ ತತ್ತರಿಸಲಿವೆ.</p>.<p>‘ಮಹಾರಾಷ್ಟ್ರದ ಜಲಾಶಯಗಳಿಂದ ಕೃಷ್ಣೆಗೆ ನೀರು ಹರಿಸುವಂತೆ ಒತ್ತಾಯಿಸಲು ಸರ್ವಪಕ್ಷಗಳ ನಿಯೋಗವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಬಳಿ ಕೊಂಡೊಯ್ಯುತ್ತೇವೆ’ ಎಂದು ಸಚಿವರು ಹೇಳಿಕೆ ನೀಡುತ್ತಲೇ ಇದ್ದಾರೆ. ಆದರೆ, ಈವರೆಗೂ ನಿಯೋಗ ಮಹಾರಾಷ್ಟ್ರಕ್ಕೆ ಹೋಗಿಲ್ಲ.</p>.<p>2 ಟಿಎಂಸಿ ಅಡಿ ನೀರು ಬಿಡುವಂತೆ ಪತ್ರ: ‘ಉತ್ತರ ಕರ್ನಾಟಕದ ಜಿಲ್ಲೆಗಳ ಜನರ ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯತೆ ಪೂರೈಸುವ ದೃಷ್ಟಿಯಿಂದ ಮಹಾರಾಷ್ಟ್ರದ ಕೊಯ್ನಾ ಅಥವಾ ವಾರಣಾ ಜಲಾಶಯಗಳಿಂದ ಕೃಷ್ಣಾ ನದಿಗೆ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ತಲಾ 2 ಟಿಎಂಸಿ ಅಡಿ ನೀರು ಬಿಡುಗಡೆಗೊಳಿಸಬೇಕು’ ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026ರ ಏಪ್ರಿಲ್ 22ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಪತ್ರ ಬರೆದಿದ್ದಾರೆ. ಆದರೆ, ಸ್ಪಂದನೆಯಿಲ್ಲ.</p>.<p><strong>ಸ್ಥಗಿತದ ಆತಂಕ</strong>: ಹಿಪ್ಪರಗಿ ಬ್ಯಾರೇಜ್ ಮೇಲ್ಭಾಗದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 13 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿವೆ. ಅವು ಅಥಣಿ, ರಾಯಬಾಗ ಮತ್ತು ಚಿಕ್ಕೋಡಿ ತಾಲ್ಲೂಕುಗಳ 120 ಗ್ರಾಮಗಳ ಜನರ ದಾಹ ನೀಗಿಸುತ್ತಿವೆ.</p>.<p>ಬ್ಯಾರೇಜ್ ಕೆಳಭಾಗದಲ್ಲಿ ಇರುವ ಕಕಮರಿ ಬಹುಗ್ರಾಮ ಯೋಜನೆ 14 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುತ್ತಿದೆ. ಸವದಿ, ಝುಂಜರವಾಡ, ಶಿರಹಟ್ಟಿ, ಬಳವಾಡ ಏಕಗ್ರಾಮ ಕುಡಿಯುವ ನೀರು ಯೋಜನೆಗಳಿವೆ. ಈಗಾಗಲೇ ಇವೆಲ್ಲ ಯೋಜನೆಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿವೆ. ಮಹಾರಾಷ್ಟ್ರದಿಂದ ಬೇಗ ನೀರು ಬಾರದಿದ್ದರೆ, ಈ ಯೋಜನೆಗಳು ಸ್ಥಗಿತವಾಗುವ ಆತಂಕ ಎದುರಾಗಿದೆ.</p>.<div><blockquote>ಹಿಪ್ಪರಗಿ ಬ್ಯಾರೇಜ್ನಲ್ಲಿ ಈಗ ಲಭ್ಯವಿರುವ ನೀರು 15 ದಿನಗಳವರೆಗೆ ಸಾಕಾಗಲಿದೆ. ಮಹಾರಾಷ್ಟ್ರದಿಂದ ಬೇಗ ನೀರು ಹರಿದರೆ ತೊಂದರೆಯಿಲ್ಲ </blockquote><span class="attribution">ಪಾಂಡುರಂಗರಾವ್, ಕಾರ್ಯನಿರ್ವಾಹಕ ಎಂಜಿನಿಯರ್, ಚಿಕ್ಕೋಡಿ ಉಪವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-21-1202017480</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಹರಿಯದ ಕಾರಣ ಕೃಷ್ಣಾ ನದಿಯೊಡಲು ಬರಿದಾಗುತ್ತ ಸಾಗಿದ್ದು, ನದಿಪಾತ್ರದ ಗ್ರಾಮಗಳ ಜನರ ಆತಂಕ ಶುರುವಾಗಿದೆ.</p>.<p>ಹಿಪ್ಪರಗಿ ಬ್ಯಾರೇಜ್ನ 22ನೇ ಗೇಟ್ ಮುರಿದ ಪರಿಣಾಮ ಅಪಾರ ಪ್ರಮಾಣದ ನೀರು ಪೋಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಹಿಪ್ಪರಗಿಯಲ್ಲಿ 1.76 ಟಿಎಂಸಿ (ಲೈವ್ ಸ್ಟೋರೇಜ್) ನೀರು ಸಂಗ್ರಹವಿತ್ತು. ಈ ವರ್ಷ ಮೇ 10ರಂದು 0.31 ಟಿಎಂಸಿ (ಲೈವ್ ಸ್ಟೋರೇಜ್) ಮಾತ್ರ ನೀರು ಸಂಗ್ರಹವಿದೆ. ಇದು ಎರಡು ವಾರಗಳ ಮಟ್ಟಿಗೆ ಸಾಕಾಗಲಿದೆ.</p>.<p>ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಹರಿಯದಿದ್ದರೆ, ಬೆಳಗಾವಿ ಜಿಲ್ಲೆಯ 130ಕ್ಕೂ ಅಧಿಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದೆ. ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಹಳ್ಳಿಗಳು ಸಹ ನೀರಿನ ಸಮಸ್ಯೆಯಿಂದ ತತ್ತರಿಸಲಿವೆ.</p>.<p>‘ಮಹಾರಾಷ್ಟ್ರದ ಜಲಾಶಯಗಳಿಂದ ಕೃಷ್ಣೆಗೆ ನೀರು ಹರಿಸುವಂತೆ ಒತ್ತಾಯಿಸಲು ಸರ್ವಪಕ್ಷಗಳ ನಿಯೋಗವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಬಳಿ ಕೊಂಡೊಯ್ಯುತ್ತೇವೆ’ ಎಂದು ಸಚಿವರು ಹೇಳಿಕೆ ನೀಡುತ್ತಲೇ ಇದ್ದಾರೆ. ಆದರೆ, ಈವರೆಗೂ ನಿಯೋಗ ಮಹಾರಾಷ್ಟ್ರಕ್ಕೆ ಹೋಗಿಲ್ಲ.</p>.<p>2 ಟಿಎಂಸಿ ಅಡಿ ನೀರು ಬಿಡುವಂತೆ ಪತ್ರ: ‘ಉತ್ತರ ಕರ್ನಾಟಕದ ಜಿಲ್ಲೆಗಳ ಜನರ ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯತೆ ಪೂರೈಸುವ ದೃಷ್ಟಿಯಿಂದ ಮಹಾರಾಷ್ಟ್ರದ ಕೊಯ್ನಾ ಅಥವಾ ವಾರಣಾ ಜಲಾಶಯಗಳಿಂದ ಕೃಷ್ಣಾ ನದಿಗೆ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ತಲಾ 2 ಟಿಎಂಸಿ ಅಡಿ ನೀರು ಬಿಡುಗಡೆಗೊಳಿಸಬೇಕು’ ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026ರ ಏಪ್ರಿಲ್ 22ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಪತ್ರ ಬರೆದಿದ್ದಾರೆ. ಆದರೆ, ಸ್ಪಂದನೆಯಿಲ್ಲ.</p>.<p><strong>ಸ್ಥಗಿತದ ಆತಂಕ</strong>: ಹಿಪ್ಪರಗಿ ಬ್ಯಾರೇಜ್ ಮೇಲ್ಭಾಗದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 13 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿವೆ. ಅವು ಅಥಣಿ, ರಾಯಬಾಗ ಮತ್ತು ಚಿಕ್ಕೋಡಿ ತಾಲ್ಲೂಕುಗಳ 120 ಗ್ರಾಮಗಳ ಜನರ ದಾಹ ನೀಗಿಸುತ್ತಿವೆ.</p>.<p>ಬ್ಯಾರೇಜ್ ಕೆಳಭಾಗದಲ್ಲಿ ಇರುವ ಕಕಮರಿ ಬಹುಗ್ರಾಮ ಯೋಜನೆ 14 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುತ್ತಿದೆ. ಸವದಿ, ಝುಂಜರವಾಡ, ಶಿರಹಟ್ಟಿ, ಬಳವಾಡ ಏಕಗ್ರಾಮ ಕುಡಿಯುವ ನೀರು ಯೋಜನೆಗಳಿವೆ. ಈಗಾಗಲೇ ಇವೆಲ್ಲ ಯೋಜನೆಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿವೆ. ಮಹಾರಾಷ್ಟ್ರದಿಂದ ಬೇಗ ನೀರು ಬಾರದಿದ್ದರೆ, ಈ ಯೋಜನೆಗಳು ಸ್ಥಗಿತವಾಗುವ ಆತಂಕ ಎದುರಾಗಿದೆ.</p>.<div><blockquote>ಹಿಪ್ಪರಗಿ ಬ್ಯಾರೇಜ್ನಲ್ಲಿ ಈಗ ಲಭ್ಯವಿರುವ ನೀರು 15 ದಿನಗಳವರೆಗೆ ಸಾಕಾಗಲಿದೆ. ಮಹಾರಾಷ್ಟ್ರದಿಂದ ಬೇಗ ನೀರು ಹರಿದರೆ ತೊಂದರೆಯಿಲ್ಲ </blockquote><span class="attribution">ಪಾಂಡುರಂಗರಾವ್, ಕಾರ್ಯನಿರ್ವಾಹಕ ಎಂಜಿನಿಯರ್, ಚಿಕ್ಕೋಡಿ ಉಪವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-21-1202017480</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>