ಸರ್ಕಾರದ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ ಸೋಮವಾರ ಬೆಳಿಗ್ಗೆ ಬಸ್ ನಿಲ್ದಾಣಕ್ಕೆ ಬಂದು ಕೆಲವು ನೌಕರರು ಕೆಲಸಕ್ಕೆ ಹಾಜರಾಗುವಂತೆ ಮಾಡಿದ್ದಾರೆ. ಬಸ್ ಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗುವುದು. ಪ್ರಯಾಣಿಕರು ಆತಂಕವಿಲ್ಲದೆ ಬಸ್ ಗಳಲ್ಲಿ ಪ್ರಯಾಣಿಸಬಹುದು ಎಂದು ಧೈರ್ಯ ತುಂಬಿದರು. ಪೊಲೀಸ್ ಎಸ್ಕಾರ್ಟ್ ನಲ್ಲಿ ಬಸ್ಸೊಂದು ರಾಮದುರ್ಗ ಮಾರ್ಗದತ್ತ ಸಂಚರಿಸಿತು. ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿ ಭದ್ರತೆ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.