<p>ಬೆಳಗಾವಿ: ‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯವರು ಮೆಟ್ರಿಕ್ ನಂತರದ ಹಾಸ್ಟೆಲ್ ಜತೆಗೆ, ಒಳಚರಂಡಿ ಸಂಸ್ಕರಣಾ ಘಟಕದ ಟ್ಯಾಂಕ್ ನಿರ್ಮಾಣಕ್ಕಾಗಿ ಮೀಸಲಿಟ್ಟ ಜಾಗವನ್ನೂ ಅತಿಕ್ರಮಣ ಮಾಡಿದ್ದಾರೆ’ ಎಂದು ಆಪಾದಿಸಿ ರಾಮತೀರ್ಥ ನಗರದ ನಿವಾಸಿಗಳು ಮಂಗಳವಾರ ಪ್ರತಿಭಟನೆ ಮಾಡಿದರು.</p>.<p>ಪ್ರತಿಭಟನೆ ಹಿನ್ನೆಲೆಯಲ್ಲಿ ಆವರಣ ಗೋಡೆ ನಿರ್ಮಾಣ ಕೆಲಸ ಸ್ಥಗಿತಗೊಳಿಸಿದ್ದು, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದವರು (ಬುಡಾ) ಎರಡು ಸ್ಥಳಗಳನ್ನು ಬೇರ್ಪಡಿಸಲು ಕಂದಕ ಅಗೆದಿದ್ದಾರೆ.</p>.<p>ಉಪಮೇಯರ್ ಹನುಮಂತ ಕೊಂಗಾಲಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೇರಿದ್ದ ನಿವಾಸಿಗಳು ಅತಿಕ್ರಮಣದಾರರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಗರದ ಮುಖ್ಯ ಸ್ಥಳದಲ್ಲೇ ಇರುವ ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಸ್ತಿಯನ್ನು ಬುಡಾ ಗಮನಕ್ಕೆ ತಾರದೆಯೇ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ತಮ್ಮ ಸುಪರ್ದಿಗೆ ಪಡೆದಿರುವುದು ಎಷ್ಟರಮಟ್ಟಿಗೆ ಸರಿ’ ಎಂದು ಪ್ರಶ್ನಿಸಿದರು.</p>.<p>‘ತ್ವರಿತವಾಗಿ ಅತಿಕ್ರಮಣ ತೆರವಾಗದಿದ್ದರೆ ಉಗ್ರಹೋರಾಟ ಅನಿವಾರ್ಯ’ ಎಂದು ಎಚ್ಚರಿಕೆ ಕೊಟ್ಟರು.</p>.<p>‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಬೇರೆ ಯೋಜನೆಗೆ ಮೀಸಲಿಟ್ಟ ಭೂಮಿಯಲ್ಲಿ ಅತಿಕ್ರಮಣ ಮಾಡಿರುವುದು ಸರಿಯಲ್ಲ. ಈ ವಿದ್ಯಮಾನ ಗಮನಿಸಿದರೆ, ಬುಡಾ ಹಿರಿಯ ಅಧಿಕಾರಿಗಳು ಸಹ ಇದಕ್ಕೆ ಸಹಕರಿಸುತ್ತಿರುವಂತೆ ತೋರುತ್ತಿದೆ. ಆದರೆ, ಅತಿಕ್ರಮಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಹನುಮಂತ ಕೊಂಗಾಲಿ ಆಗ್ರಹಿಸಿದರು.</p>.<p>‘ಈ ಪ್ರಕರಣದಲ್ಲಿ ತಪ್ಪು ಮಾಡಿರುವ ಸಂಬಂಧಿತ ಅಧಿಕಾರಿಗಳ ವಿರುದ್ಧ ಕೂಡ ಲೋಕಾಯುಕ್ತ ತನಿಖೆ ನಡೆಸಬೇಕು’ ಎಂದೂ ಆಗ್ರಹಿಸಿದರು.</p>.<p>ಪ್ರತಿಭಟನೆ ಕಾವೇರುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬುಡಾ ಅಧಿಕಾರಿಗಳು, ಹಾಸ್ಟೆಲ್ ಮತ್ತು ಒಳಚರಂಡಿ ಸಂಸ್ಕರಣಾ ಘಟಕದ ಟ್ಯಾಂಕ್ ನಿರ್ಮಾಣಕ್ಕಾಗಿ ಮೀಸಲಿಟ್ಟ ಜಾಗ ಬೇರ್ಪಡಿಸಿದರು.</p>.<p>ಮಾಜಿ ಮೇಯರ್ ಎನ್.ಬಿ.ನಿರ್ವಾಣಿ, ಮುರುಘೇಂದ್ರಗೌಡ ಪಾಟೀಲ, ಮಹಾಂತೇಶ ವಕ್ಕುಂದ, ಸುರೇಶ ಯಾದವ, ಚಂದ್ರಶೇಖರ ಯಾದವ, ಸುರೇಶ ಉರಬಿನಹಟ್ಟಿ ಇದ್ದರು. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-21-1437129779</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯವರು ಮೆಟ್ರಿಕ್ ನಂತರದ ಹಾಸ್ಟೆಲ್ ಜತೆಗೆ, ಒಳಚರಂಡಿ ಸಂಸ್ಕರಣಾ ಘಟಕದ ಟ್ಯಾಂಕ್ ನಿರ್ಮಾಣಕ್ಕಾಗಿ ಮೀಸಲಿಟ್ಟ ಜಾಗವನ್ನೂ ಅತಿಕ್ರಮಣ ಮಾಡಿದ್ದಾರೆ’ ಎಂದು ಆಪಾದಿಸಿ ರಾಮತೀರ್ಥ ನಗರದ ನಿವಾಸಿಗಳು ಮಂಗಳವಾರ ಪ್ರತಿಭಟನೆ ಮಾಡಿದರು.</p>.<p>ಪ್ರತಿಭಟನೆ ಹಿನ್ನೆಲೆಯಲ್ಲಿ ಆವರಣ ಗೋಡೆ ನಿರ್ಮಾಣ ಕೆಲಸ ಸ್ಥಗಿತಗೊಳಿಸಿದ್ದು, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದವರು (ಬುಡಾ) ಎರಡು ಸ್ಥಳಗಳನ್ನು ಬೇರ್ಪಡಿಸಲು ಕಂದಕ ಅಗೆದಿದ್ದಾರೆ.</p>.<p>ಉಪಮೇಯರ್ ಹನುಮಂತ ಕೊಂಗಾಲಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೇರಿದ್ದ ನಿವಾಸಿಗಳು ಅತಿಕ್ರಮಣದಾರರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಗರದ ಮುಖ್ಯ ಸ್ಥಳದಲ್ಲೇ ಇರುವ ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಸ್ತಿಯನ್ನು ಬುಡಾ ಗಮನಕ್ಕೆ ತಾರದೆಯೇ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ತಮ್ಮ ಸುಪರ್ದಿಗೆ ಪಡೆದಿರುವುದು ಎಷ್ಟರಮಟ್ಟಿಗೆ ಸರಿ’ ಎಂದು ಪ್ರಶ್ನಿಸಿದರು.</p>.<p>‘ತ್ವರಿತವಾಗಿ ಅತಿಕ್ರಮಣ ತೆರವಾಗದಿದ್ದರೆ ಉಗ್ರಹೋರಾಟ ಅನಿವಾರ್ಯ’ ಎಂದು ಎಚ್ಚರಿಕೆ ಕೊಟ್ಟರು.</p>.<p>‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಬೇರೆ ಯೋಜನೆಗೆ ಮೀಸಲಿಟ್ಟ ಭೂಮಿಯಲ್ಲಿ ಅತಿಕ್ರಮಣ ಮಾಡಿರುವುದು ಸರಿಯಲ್ಲ. ಈ ವಿದ್ಯಮಾನ ಗಮನಿಸಿದರೆ, ಬುಡಾ ಹಿರಿಯ ಅಧಿಕಾರಿಗಳು ಸಹ ಇದಕ್ಕೆ ಸಹಕರಿಸುತ್ತಿರುವಂತೆ ತೋರುತ್ತಿದೆ. ಆದರೆ, ಅತಿಕ್ರಮಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಹನುಮಂತ ಕೊಂಗಾಲಿ ಆಗ್ರಹಿಸಿದರು.</p>.<p>‘ಈ ಪ್ರಕರಣದಲ್ಲಿ ತಪ್ಪು ಮಾಡಿರುವ ಸಂಬಂಧಿತ ಅಧಿಕಾರಿಗಳ ವಿರುದ್ಧ ಕೂಡ ಲೋಕಾಯುಕ್ತ ತನಿಖೆ ನಡೆಸಬೇಕು’ ಎಂದೂ ಆಗ್ರಹಿಸಿದರು.</p>.<p>ಪ್ರತಿಭಟನೆ ಕಾವೇರುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬುಡಾ ಅಧಿಕಾರಿಗಳು, ಹಾಸ್ಟೆಲ್ ಮತ್ತು ಒಳಚರಂಡಿ ಸಂಸ್ಕರಣಾ ಘಟಕದ ಟ್ಯಾಂಕ್ ನಿರ್ಮಾಣಕ್ಕಾಗಿ ಮೀಸಲಿಟ್ಟ ಜಾಗ ಬೇರ್ಪಡಿಸಿದರು.</p>.<p>ಮಾಜಿ ಮೇಯರ್ ಎನ್.ಬಿ.ನಿರ್ವಾಣಿ, ಮುರುಘೇಂದ್ರಗೌಡ ಪಾಟೀಲ, ಮಹಾಂತೇಶ ವಕ್ಕುಂದ, ಸುರೇಶ ಯಾದವ, ಚಂದ್ರಶೇಖರ ಯಾದವ, ಸುರೇಶ ಉರಬಿನಹಟ್ಟಿ ಇದ್ದರು. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-21-1437129779</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>