ಸಿ.ಡಿ. ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಅವರು, ಚುನಾವಣೆ ಪ್ರಚಾರದಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ನಡುವೆ ಅವರಿಗೆ ಕೋವಿಡ್- 19 ದೃಢಪಟ್ಟಿತ್ತು. ಗೋಕಾಕ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು, ಬಿಡುಗಡೆಯಾಗಿ ಮನೆಯಲ್ಲಿದ್ದಾರೆ. ಅವರು ಇನ್ನೂ ಗುಣಮುಖವಾಗಿದ್ದಾರೋ ಇಲ್ಲವೋ ಎನ್ನುವ ಮಾಹಿತಿ ಇಲ್ಲ. ಹೀಗಾಗಿ ಅವರು ಹಕ್ಕು ಚಲಾಯಿಸುತ್ತಾರೋ ಇಲ್ಲವೋ ಖಚಿತವಾಗಿಲ್ಲ.