<p><strong>ಬೆಳಗಾವಿ:</strong> ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ನಯಾನಗರ ಸೇತುವೆ ಬಳಿ ಬುಧವಾರ, ಮಲಪ್ರಭಾ ನದಿ ನೀರಿನಲ್ಲಿ ಮೂರು ಬೈಕುಗಳು ಪತ್ತೆಯಾಗಿವೆ. ಇವುಗಳನ್ನು ಕದ್ದು, ಚಿನ್ನದಂಗಡಿ ದರೋಡೆಗೆ ಬಳಸಿ, ಸಾಕ್ಷ್ಯ ನಾಶಕ್ಕೆ ನದಿಗೆ ಬಿಸಾಕಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.</p><p>KA25 G-1459, KA24 J-7907 ಎಂಬ ಸಂಖ್ಯೆಯ ಎರಡು ಬೈಕ್ ಹಾಗೂ ನಂಬರ್ ಪ್ಲೇಟ್ ಇಲ್ಲದ ಇನ್ನೊಂದು ಬೈಕ್ ಪತ್ತೆಯಾಗಿದೆ. ಬುಧವಾರ ನದಿ ಸೇತುವೆ ಮೇಲೆ ಹೊರಟವರಿಗೆ ಇವು ಕಂಡಿವೆ. ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಧಾವಿಸಿ, ಅವುಗಳನ್ನು ಹೊರಕ್ಕೆ ತಂದರು.</p><p>ಸವದತ್ತಿ ಪಟ್ಟಣದಲ್ಲಿ 2025ರ ಡಿಸೆಂಬರ್ 22ರಂದು ಚಿನ್ನದ ಅಂಗಡಿ ದರೋಡೆ ಮಾಡಲಾಗಿತ್ತು. ₹12 ಲಕ್ಷ ಮೌಲ್ಯದ ಚಿನ್ನಾಭರಣ ಕದಿಯಲಾಗಿತ್ತು. ಮೂರು ಬೈಕುಗಳ ಮೇಲೆ ಬಂದಿದ್ದ 9 ಆರೋಪಿಗಳು ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು. ಇದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.</p><p>ಬಹುಶಃ ಈ ಮೂರೂ ಬೈಕುಗಳನ್ನು ಕದ್ದು, ಚಿನ್ನಾಭರಣ ದರೋಡೆಗೆ ಬಳಸಿದ್ದಾರೆ. ಸಾಕ್ಷ್ಯ ನಾಶಕ್ಕಾಗಿ ಮಲಪ್ರಭಾ ನದಿಯಲ್ಲಿ ಎಸೆದು ಹೋದ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ನಯಾನಗರ ಸೇತುವೆ ಬಳಿ ಬುಧವಾರ, ಮಲಪ್ರಭಾ ನದಿ ನೀರಿನಲ್ಲಿ ಮೂರು ಬೈಕುಗಳು ಪತ್ತೆಯಾಗಿವೆ. ಇವುಗಳನ್ನು ಕದ್ದು, ಚಿನ್ನದಂಗಡಿ ದರೋಡೆಗೆ ಬಳಸಿ, ಸಾಕ್ಷ್ಯ ನಾಶಕ್ಕೆ ನದಿಗೆ ಬಿಸಾಕಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.</p><p>KA25 G-1459, KA24 J-7907 ಎಂಬ ಸಂಖ್ಯೆಯ ಎರಡು ಬೈಕ್ ಹಾಗೂ ನಂಬರ್ ಪ್ಲೇಟ್ ಇಲ್ಲದ ಇನ್ನೊಂದು ಬೈಕ್ ಪತ್ತೆಯಾಗಿದೆ. ಬುಧವಾರ ನದಿ ಸೇತುವೆ ಮೇಲೆ ಹೊರಟವರಿಗೆ ಇವು ಕಂಡಿವೆ. ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಧಾವಿಸಿ, ಅವುಗಳನ್ನು ಹೊರಕ್ಕೆ ತಂದರು.</p><p>ಸವದತ್ತಿ ಪಟ್ಟಣದಲ್ಲಿ 2025ರ ಡಿಸೆಂಬರ್ 22ರಂದು ಚಿನ್ನದ ಅಂಗಡಿ ದರೋಡೆ ಮಾಡಲಾಗಿತ್ತು. ₹12 ಲಕ್ಷ ಮೌಲ್ಯದ ಚಿನ್ನಾಭರಣ ಕದಿಯಲಾಗಿತ್ತು. ಮೂರು ಬೈಕುಗಳ ಮೇಲೆ ಬಂದಿದ್ದ 9 ಆರೋಪಿಗಳು ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು. ಇದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.</p><p>ಬಹುಶಃ ಈ ಮೂರೂ ಬೈಕುಗಳನ್ನು ಕದ್ದು, ಚಿನ್ನಾಭರಣ ದರೋಡೆಗೆ ಬಳಸಿದ್ದಾರೆ. ಸಾಕ್ಷ್ಯ ನಾಶಕ್ಕಾಗಿ ಮಲಪ್ರಭಾ ನದಿಯಲ್ಲಿ ಎಸೆದು ಹೋದ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>