<p><strong>ಬೆಳಗಾವಿ:</strong> ಇಲ್ಲಿನ ಹುತಾತ್ಮ ಚೌಕ್ನಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಶುಕ್ರವಾರ ಆಯೋಜಿಸಿದ್ದ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ–ಮಹಾರಾಷ್ಟ್ರ ಗಡಿ ಹೋರಾಟದಲ್ಲಿ ಮಡಿದವರಿಗೆ ಗೌರವ ಸಲ್ಲಿಸಲಾಯಿತು.</p><p>ಎಂಇಎಸ್ ಮುಖಂಡರು ಮತ್ತು ಕಾರ್ಯಕರ್ತರು ಈ ವೃತ್ತದಲ್ಲಿ ಸಮಾವೇಶಗೊಂಡು, ಹುತಾತ್ಮ ಯೋಧರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಮೌನಾಚರಣೆ ಮಾಡಿ ಗೌರವ ಸೂಚಿಸಿದರು. ವಿವಿಧ ಮಾರ್ಗಗಳಲ್ಲಿ ಮೆರವಣಿಗೆ ಸಹ ನಡೆಸಿದರು.</p><p>ಎಂಇಎಸ್ ಪ್ರಧಾನ ಕಾರ್ಯದರ್ಶಿ ಮಾಲೋಜಿ ಅಷ್ಟೇಕರ, ರಂಜೀತ್ ಚವ್ಹಾಣಪಾಟೀಲ, ಮಾಜಿ ಮೇಯರ್ ಸರಿತಾ ಪಾಟೀಲ, ಮಾಜಿ ಉಪಮೇಯರ್ ರೇಣು ಕಿಲ್ಲೇಕರ, ಪ್ರಕಾಶ ಶಿರೋಳಕರ, ರಮಾಕಾಂತ ಕೊಂಡೂಸ್ಕರ, ಮಹಾನಗರ ಪಾಲಿಕೆ ಸದಸ್ಯ ರವಿ ಸಾಳುಂಕೆ ಇತರರಿದ್ದರು. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.</p><p>ನಂತರ ಇಲ್ಲಿಂದ ಮಹಾರಾಷ್ಟ್ರದ ಕೊಲ್ಹಾಪುರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದ ವ್ಯಾಜ್ಯವನ್ನು ಬೇಗ ಇತ್ಯರ್ಥಪಡಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ಹುತಾತ್ಮ ಚೌಕ್ನಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಶುಕ್ರವಾರ ಆಯೋಜಿಸಿದ್ದ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ–ಮಹಾರಾಷ್ಟ್ರ ಗಡಿ ಹೋರಾಟದಲ್ಲಿ ಮಡಿದವರಿಗೆ ಗೌರವ ಸಲ್ಲಿಸಲಾಯಿತು.</p><p>ಎಂಇಎಸ್ ಮುಖಂಡರು ಮತ್ತು ಕಾರ್ಯಕರ್ತರು ಈ ವೃತ್ತದಲ್ಲಿ ಸಮಾವೇಶಗೊಂಡು, ಹುತಾತ್ಮ ಯೋಧರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಮೌನಾಚರಣೆ ಮಾಡಿ ಗೌರವ ಸೂಚಿಸಿದರು. ವಿವಿಧ ಮಾರ್ಗಗಳಲ್ಲಿ ಮೆರವಣಿಗೆ ಸಹ ನಡೆಸಿದರು.</p><p>ಎಂಇಎಸ್ ಪ್ರಧಾನ ಕಾರ್ಯದರ್ಶಿ ಮಾಲೋಜಿ ಅಷ್ಟೇಕರ, ರಂಜೀತ್ ಚವ್ಹಾಣಪಾಟೀಲ, ಮಾಜಿ ಮೇಯರ್ ಸರಿತಾ ಪಾಟೀಲ, ಮಾಜಿ ಉಪಮೇಯರ್ ರೇಣು ಕಿಲ್ಲೇಕರ, ಪ್ರಕಾಶ ಶಿರೋಳಕರ, ರಮಾಕಾಂತ ಕೊಂಡೂಸ್ಕರ, ಮಹಾನಗರ ಪಾಲಿಕೆ ಸದಸ್ಯ ರವಿ ಸಾಳುಂಕೆ ಇತರರಿದ್ದರು. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.</p><p>ನಂತರ ಇಲ್ಲಿಂದ ಮಹಾರಾಷ್ಟ್ರದ ಕೊಲ್ಹಾಪುರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದ ವ್ಯಾಜ್ಯವನ್ನು ಬೇಗ ಇತ್ಯರ್ಥಪಡಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>