<p>ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಸೋಮವಾರ ನಡೆದ ಮೇಯರ್, ಉಪಮೇಯರ್ ಚುನಾವಣೆಗೆ ಬಂದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಂಬಲಿತ ಮೂವರು ಸದಸ್ಯರು ಮತ್ತೆ ನಾಡದ್ರೋಹಿ ಘೋಷಣೆ ಕೂಗಿದರು. </p>.<p>ಎಂಇಎಸ್ ಮುಖಂಡರೂ ಆಗಿರುವ ವೈಶಾಲಿ ಭಾತಖಾಂಡೆ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಬಂದರು. ಪಾಲಿಕೆ ಆವರಣ ಪ್ರವೇಶಿಸುತ್ತಿದ್ದಂತೆಯೇ ‘ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿ, ಖಾನಾಪುರ’ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದರು. ಅವರೊಂದಿಗೆ ಬಂದ ಇನ್ನಿಬ್ಬರು ಎಂಇಎಸ್ ಬೆಂಬಲಿತ ಸದಸ್ಯರೂ ಧ್ವನಿಗೂಡಿಸಿದರು.</p>.<p>ಕೇಸರಿ ಬಣ್ಣದ ‘ಕೊಲ್ಹಾಪುರಿ ಪೇಟಾ‘ ಧರಿಸಿ ಬಂದ ಮೂವರೂ ಘೋಷಣೆ ಮೊಳಗಿಸುತ್ತಲೇ ಪಾಲಿಕೆ ಪ್ರವೇಶಿಸಿದರು.</p>.<p>ಬಿಗಿ ಭದ್ರತೆ: ಪಾಲಿಕೆ ಚುನಾವಣೆ ನಡೆದ ಒಂದೂವರೆ ವರ್ಷದ ಬಳಿಕ ಮೇಯರ್, ಉಪಮೇಯರ್ ಆಯ್ಕೆ ಚುನಾವಣೆ ನಡೆಯುತ್ತಿದೆ. ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದರಿಂದ ಸದಸ್ಯರ ಬೆಂಬಲಿಗರು ಪಾಲಿಕೆ ಸುತ್ತ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದಾರೆ. <br />ಬಿಗಿ ಭದ್ರತೆ ಏರ್ಪಡಿಸಿರುವ ಪೊಲೀಸರು 200 ಮೀಟರ್ ವ್ಯಾಪ್ತಿಯಲ್ಲಿ 144 ಕಲಂ ಜಾರಿ ಮಾಡಿದ್ದಾರೆ. ನಾಲ್ಕಕ್ಕೂ ಹೆಚ್ಚು ಜನ ನಿಷೇಧಾಜ್ಞೆ ಇರುವ ಸ್ಥಳದಲ್ಲಿ ಸೇರದಂತೆ ಧ್ವನಿವರ್ಧಕ ಮೂಲಕ ಎಚ್ಚರಿಕೆ ನೀಡುತ್ತಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಸೋಮವಾರ ನಡೆದ ಮೇಯರ್, ಉಪಮೇಯರ್ ಚುನಾವಣೆಗೆ ಬಂದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಂಬಲಿತ ಮೂವರು ಸದಸ್ಯರು ಮತ್ತೆ ನಾಡದ್ರೋಹಿ ಘೋಷಣೆ ಕೂಗಿದರು. </p>.<p>ಎಂಇಎಸ್ ಮುಖಂಡರೂ ಆಗಿರುವ ವೈಶಾಲಿ ಭಾತಖಾಂಡೆ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಬಂದರು. ಪಾಲಿಕೆ ಆವರಣ ಪ್ರವೇಶಿಸುತ್ತಿದ್ದಂತೆಯೇ ‘ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿ, ಖಾನಾಪುರ’ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದರು. ಅವರೊಂದಿಗೆ ಬಂದ ಇನ್ನಿಬ್ಬರು ಎಂಇಎಸ್ ಬೆಂಬಲಿತ ಸದಸ್ಯರೂ ಧ್ವನಿಗೂಡಿಸಿದರು.</p>.<p>ಕೇಸರಿ ಬಣ್ಣದ ‘ಕೊಲ್ಹಾಪುರಿ ಪೇಟಾ‘ ಧರಿಸಿ ಬಂದ ಮೂವರೂ ಘೋಷಣೆ ಮೊಳಗಿಸುತ್ತಲೇ ಪಾಲಿಕೆ ಪ್ರವೇಶಿಸಿದರು.</p>.<p>ಬಿಗಿ ಭದ್ರತೆ: ಪಾಲಿಕೆ ಚುನಾವಣೆ ನಡೆದ ಒಂದೂವರೆ ವರ್ಷದ ಬಳಿಕ ಮೇಯರ್, ಉಪಮೇಯರ್ ಆಯ್ಕೆ ಚುನಾವಣೆ ನಡೆಯುತ್ತಿದೆ. ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದರಿಂದ ಸದಸ್ಯರ ಬೆಂಬಲಿಗರು ಪಾಲಿಕೆ ಸುತ್ತ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದಾರೆ. <br />ಬಿಗಿ ಭದ್ರತೆ ಏರ್ಪಡಿಸಿರುವ ಪೊಲೀಸರು 200 ಮೀಟರ್ ವ್ಯಾಪ್ತಿಯಲ್ಲಿ 144 ಕಲಂ ಜಾರಿ ಮಾಡಿದ್ದಾರೆ. ನಾಲ್ಕಕ್ಕೂ ಹೆಚ್ಚು ಜನ ನಿಷೇಧಾಜ್ಞೆ ಇರುವ ಸ್ಥಳದಲ್ಲಿ ಸೇರದಂತೆ ಧ್ವನಿವರ್ಧಕ ಮೂಲಕ ಎಚ್ಚರಿಕೆ ನೀಡುತ್ತಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>