<p><strong>ಬೆಳಗಾವಿ</strong>: ‘ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ನ ಅಭ್ಯರ್ಥಿಗಳು ನಿರೀಕ್ಷೆಯಷ್ಟು ಗೆಲುವು ಸಾಧಿಸಿದ್ದಾರೆ. ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಹಾಗೂ ಮರಾಠಿಗರ ಒಳಜಗಳದಿಂದ ಬಿಜೆಪಿಗೆ ಲಾಭವಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ಲೇಷಿಸಿದರು.</p>.<p>ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಮೋಡಿಯಿಂದ ಬಿಜೆಪಿಯವರು ಇಲ್ಲಿ ಗೆದ್ದಿಲ್ಲ. ಚುನಾವಣೆ ಫಲಿತಾಂಶದ ಬಗ್ಗೆ ಆಶ್ಚರ್ಯ ಪಡೆಬೇಕಿಲ್ಲ. ಕಾಂಗ್ರೆಸ್ನಲ್ಲಿರುವ ಹೊಂದಾಣಿಕೆ ಕೊರತೆಯಿಂದ ಬಿಜೆಪಿ ಸ್ಥಾನ ಪಡೆದುಕೊಂಡಿದೆ’ ಎಂದು ಹೇಳಿದರು.</p>.<p>‘ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಗೆದ್ದಂತೆ ಬೊಬ್ಬೆ ಹೊಡೆಯುತ್ತಿದ್ದಾರೆ. ಲೆಕ್ಕಾಚಾರದ ಕ್ಷೇತ್ರಗಳು ಕೈ ವಶವಾಗಿವೆ. ಇನ್ನೂ 8 ಸೀಟುಗಳು ಬರಬೇಕಿತ್ತು. ಆದರೆ, ಸ್ವಲ್ಪ ಹಿನ್ನಡೆಯಾಗಿದೆ. ಕಾಂಗ್ರೆಸ್ ವೈಫಲ್ಯಗಳಿಲ್ಲ; ನಮ್ಮ ಶಕ್ತಿ ಪ್ರದರ್ಶನ ಮಾಡಿದ್ದೇವೆ. ಗೆಲ್ಲುವ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ’ ಎಂದರು.</p>.<p>‘ಬಿಜೆಪಿಯವರು ಮರಾಠಿಗರನ್ನು ಬಳಸಿಕೊಂಡಿದ್ದಾರೆ. ಅವರಿಂದ ಬಿಜೆಪಿ ಹೆಚ್ಚು ಸ್ಥಾನ ಪಡೆಯಲು ಸಾಧ್ಯವಾಗಿದೆ. ನಮ್ಮ ಗೆಲುವು ನಮಗೆ ತೃಪ್ತಿ ತಂದಿದೆ. 15 ಸ್ಥಾನಗಳಲ್ಲಿ ಗೆಲುವು ಪಡೆಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಹೇಳಿದ್ದೆವು. ಆ ಸಂಖ್ಯೆಯ ಸಮೀಪಕ್ಕೆ ಬಂದಿದ್ದೇವೆ. ಪಕ್ಷೇತರರಲ್ಲಿ ಗೆದ್ದ ಐವರು ಸದಸ್ಯರು ನಮ್ಮೊಂದಿಗೆ ಇದ್ದಾರೆ. ದಕ್ಷಿಣದಲ್ಲಿ ಮೂರು ಮತ್ತು ಉತ್ತರದಲ್ಲಿ 5 ಸ್ಥಾನ ನೇರವಾಗಿ ಕಳೆದುಕೊಂಡಿದ್ದೇವೆ’ ಎಂದು ಹೇಳಿದರು.</p>.<p>‘ಗೆಲುವು ನಿರೀಕ್ಷಿಸಿದ್ದ ವಾರ್ಡ್ಗಳಲ್ಲಿ ಸೋಲಿಗೆ ಕಾರಣ ತಿಳಿದು, ಅದನ್ನು ತಿದ್ದುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ’ ಎಂದರು.</p>.<p>‘ಕಳೆದ ಲೋಕಸಭೆ ಉಪ ಚುನಾವಣೆಯಲ್ಲಿ ನಗರದಲ್ಲಿ ನಮಗೆ ಬಂದಿದ್ದಷ್ಟೆ ಮತಗಳು ಈಗಲೂ ಬಂದಿವೆ. ಇದರಲ್ಲೇನೂ ವ್ಯತ್ಯಾಸವಾಗಿಲ್ಲ. ಆದರೆ, ಬಿಜೆಪಿಯ ಜಯ ಕಾಂಗ್ರೆಸ್ನ ವೈಫಲ್ಯ ಎಂದಾಗಬಾರದು. ಒಂದೇ ವಾರ್ಡ್ನಲ್ಲಿ ಎಂಇಎಸ್ನಿಂದ ಮೂರ್ನಾಲ್ಕು ಅಭ್ಯರ್ಥಿಗಳು ಕಣಕ್ಕಿಳಿದರು. ಈ ಗೊಂದಲದಿಂದ ಬಿಜೆಪಿಗೆ ಅನಿರೀಕ್ಷಿತ ಲಾಭವಾಯಿತು. ಇದನ್ನೇ ಅವರು ತಮ್ಮ ಶಕ್ತಿ ಎನ್ನುತ್ತಿದ್ದಾರೆ. ಇದರಲ್ಲಿ ಬಿಜೆಪಿ ಶಕ್ತಿ ಏನಿಲ್ಲ’ ಎಂದು ತಿಳಿಸಿದರು.</p>.<p>‘ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಸಿಗದಿರುವುದಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಹೊಣೆ ಮಾಡಲಾಗದು. ಕೆಲವು ವಾರ್ಡ್ಗಳಲ್ಲಿ ಕಾಂಗ್ರೆಸ್ ಅಲೆ ಸೃಷ್ಟಿಯಾಗಿದೆ. ಇದನ್ನೇ ಅಡಿಪಾಯ ಆಗಿಟ್ಟುಕೊಂಡು ಇಡೀ ನಗರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುತ್ತೇವೆ. ಏನೇ ಲೋಪ-ದೋಷಗಳಿದ್ದರೂ ತಿದ್ದಿಕೊಳ್ಳುತ್ತೇವೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಇಲ್ಲಿ ಪಕ್ಷದ ನಾಯಕರ ಮಧ್ಯೆ ಹೊಂದಾಣಿಕೆ ಕೊರತೆ ಇದ್ದಿದ್ದು ನಿಜ’ ಎಂದರು. ಯಾವ ನಾಯಕರ ಮಧ್ಯೆ ಹೊಂದಾಣಿಕೆ ಕೊರತೆ ಇತ್ತು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ನ ಅಭ್ಯರ್ಥಿಗಳು ನಿರೀಕ್ಷೆಯಷ್ಟು ಗೆಲುವು ಸಾಧಿಸಿದ್ದಾರೆ. ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಹಾಗೂ ಮರಾಠಿಗರ ಒಳಜಗಳದಿಂದ ಬಿಜೆಪಿಗೆ ಲಾಭವಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ಲೇಷಿಸಿದರು.</p>.<p>ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಮೋಡಿಯಿಂದ ಬಿಜೆಪಿಯವರು ಇಲ್ಲಿ ಗೆದ್ದಿಲ್ಲ. ಚುನಾವಣೆ ಫಲಿತಾಂಶದ ಬಗ್ಗೆ ಆಶ್ಚರ್ಯ ಪಡೆಬೇಕಿಲ್ಲ. ಕಾಂಗ್ರೆಸ್ನಲ್ಲಿರುವ ಹೊಂದಾಣಿಕೆ ಕೊರತೆಯಿಂದ ಬಿಜೆಪಿ ಸ್ಥಾನ ಪಡೆದುಕೊಂಡಿದೆ’ ಎಂದು ಹೇಳಿದರು.</p>.<p>‘ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಗೆದ್ದಂತೆ ಬೊಬ್ಬೆ ಹೊಡೆಯುತ್ತಿದ್ದಾರೆ. ಲೆಕ್ಕಾಚಾರದ ಕ್ಷೇತ್ರಗಳು ಕೈ ವಶವಾಗಿವೆ. ಇನ್ನೂ 8 ಸೀಟುಗಳು ಬರಬೇಕಿತ್ತು. ಆದರೆ, ಸ್ವಲ್ಪ ಹಿನ್ನಡೆಯಾಗಿದೆ. ಕಾಂಗ್ರೆಸ್ ವೈಫಲ್ಯಗಳಿಲ್ಲ; ನಮ್ಮ ಶಕ್ತಿ ಪ್ರದರ್ಶನ ಮಾಡಿದ್ದೇವೆ. ಗೆಲ್ಲುವ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ’ ಎಂದರು.</p>.<p>‘ಬಿಜೆಪಿಯವರು ಮರಾಠಿಗರನ್ನು ಬಳಸಿಕೊಂಡಿದ್ದಾರೆ. ಅವರಿಂದ ಬಿಜೆಪಿ ಹೆಚ್ಚು ಸ್ಥಾನ ಪಡೆಯಲು ಸಾಧ್ಯವಾಗಿದೆ. ನಮ್ಮ ಗೆಲುವು ನಮಗೆ ತೃಪ್ತಿ ತಂದಿದೆ. 15 ಸ್ಥಾನಗಳಲ್ಲಿ ಗೆಲುವು ಪಡೆಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಹೇಳಿದ್ದೆವು. ಆ ಸಂಖ್ಯೆಯ ಸಮೀಪಕ್ಕೆ ಬಂದಿದ್ದೇವೆ. ಪಕ್ಷೇತರರಲ್ಲಿ ಗೆದ್ದ ಐವರು ಸದಸ್ಯರು ನಮ್ಮೊಂದಿಗೆ ಇದ್ದಾರೆ. ದಕ್ಷಿಣದಲ್ಲಿ ಮೂರು ಮತ್ತು ಉತ್ತರದಲ್ಲಿ 5 ಸ್ಥಾನ ನೇರವಾಗಿ ಕಳೆದುಕೊಂಡಿದ್ದೇವೆ’ ಎಂದು ಹೇಳಿದರು.</p>.<p>‘ಗೆಲುವು ನಿರೀಕ್ಷಿಸಿದ್ದ ವಾರ್ಡ್ಗಳಲ್ಲಿ ಸೋಲಿಗೆ ಕಾರಣ ತಿಳಿದು, ಅದನ್ನು ತಿದ್ದುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ’ ಎಂದರು.</p>.<p>‘ಕಳೆದ ಲೋಕಸಭೆ ಉಪ ಚುನಾವಣೆಯಲ್ಲಿ ನಗರದಲ್ಲಿ ನಮಗೆ ಬಂದಿದ್ದಷ್ಟೆ ಮತಗಳು ಈಗಲೂ ಬಂದಿವೆ. ಇದರಲ್ಲೇನೂ ವ್ಯತ್ಯಾಸವಾಗಿಲ್ಲ. ಆದರೆ, ಬಿಜೆಪಿಯ ಜಯ ಕಾಂಗ್ರೆಸ್ನ ವೈಫಲ್ಯ ಎಂದಾಗಬಾರದು. ಒಂದೇ ವಾರ್ಡ್ನಲ್ಲಿ ಎಂಇಎಸ್ನಿಂದ ಮೂರ್ನಾಲ್ಕು ಅಭ್ಯರ್ಥಿಗಳು ಕಣಕ್ಕಿಳಿದರು. ಈ ಗೊಂದಲದಿಂದ ಬಿಜೆಪಿಗೆ ಅನಿರೀಕ್ಷಿತ ಲಾಭವಾಯಿತು. ಇದನ್ನೇ ಅವರು ತಮ್ಮ ಶಕ್ತಿ ಎನ್ನುತ್ತಿದ್ದಾರೆ. ಇದರಲ್ಲಿ ಬಿಜೆಪಿ ಶಕ್ತಿ ಏನಿಲ್ಲ’ ಎಂದು ತಿಳಿಸಿದರು.</p>.<p>‘ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಸಿಗದಿರುವುದಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಹೊಣೆ ಮಾಡಲಾಗದು. ಕೆಲವು ವಾರ್ಡ್ಗಳಲ್ಲಿ ಕಾಂಗ್ರೆಸ್ ಅಲೆ ಸೃಷ್ಟಿಯಾಗಿದೆ. ಇದನ್ನೇ ಅಡಿಪಾಯ ಆಗಿಟ್ಟುಕೊಂಡು ಇಡೀ ನಗರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುತ್ತೇವೆ. ಏನೇ ಲೋಪ-ದೋಷಗಳಿದ್ದರೂ ತಿದ್ದಿಕೊಳ್ಳುತ್ತೇವೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಇಲ್ಲಿ ಪಕ್ಷದ ನಾಯಕರ ಮಧ್ಯೆ ಹೊಂದಾಣಿಕೆ ಕೊರತೆ ಇದ್ದಿದ್ದು ನಿಜ’ ಎಂದರು. ಯಾವ ನಾಯಕರ ಮಧ್ಯೆ ಹೊಂದಾಣಿಕೆ ಕೊರತೆ ಇತ್ತು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>