<p><strong>ಬೆಳಗಾವಿ</strong>: ‘ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡ ಶುಭಂ ಶೆಳಕೆ ಬೆಳಗಾವಿಯ ಭಯೋತ್ಪಾದಕ. ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಕಿಡಿ ಕಾರಿದ್ದಾರೆ.</p><p>ಮಂಗಳವಾರ ವಿಡಿಯೊ ಹೇಳಿಕೆ ಬಿಡುಗಡೆಗೊಳಿಸಿದ ಅವರು, ‘ಗಡಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರು ಅನ್ಯೋನ್ಯವಾಗಿ ಬದುಕುತ್ತಿದ್ದಾರೆ. ಆದರೆ, ಶುಭಂ ಶೆಳಕೆ ಅವರು ಭಾಷಾ ಸಾಮರಸ್ಯ ಕದಡಲು ಯತ್ನಿಸುತ್ತಿದ್ದಾರೆ. ನಮ್ಮ ಹೋರಾಟವೇನಿದ್ದರೂ ಎಂಇಎಸ್ ವಿರುದ್ಧವೇ ಹೊರತು, ಬೆಳಗಾವಿಯಲ್ಲಿನ ಮರಾಠಿ ಭಾಷಿಕರ ವಿರುದ್ಧವಲ್ಲ’ ಎಂದು ಹೇಳಿದ್ದಾರೆ.</p><p>‘ಶುಭಂ ಶೆಳಕೆ ಸಾಮಾಜಿಕ ಕಿಡಿ ಇದ್ದಂತೆ. ಅವರ ವಿರುದ್ಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು. ಇಂಥ ಹೇಳಿಕೆ ನೀಡುವ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸುವ ಕೆಲಸ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p><p>‘ಯಾವುದೋ ಮೂಲೆಯಲ್ಲಿ ಕುಳಿತು ನಾರಾಯಣಗೌಡ ಅವರ ಬಗ್ಗೆ ಹಗುರವಾಗಿ ಮಾತನಾಡಿದರೆ ಸಾಲದು. ನಿಜವಾಗಿ ತಾಕತ್ತಿದ್ದರೆ ಬೆಳಗಾವಿಗೆ ಬನ್ನಿ’ ಎಂದು ಸವಾಲು ಹಾಕಿದ್ದಾರೆ.</p><p><strong>‘ಕರಾಳ ದಿನ ಆಚರಿಸುವುದು ಶತಸಿದ್ಧ’</strong></p><p>‘ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ನ.1ರಂದು ನಾವು ಕರಾಳ ದಿನ ಆಚರಿಸುವುದು ಶತಸಿದ್ಧ’ ಎಂದು ಎಂಇಎಸ್ ಕಾರ್ಯಾಧ್ಯಕ್ಷ ಮನೋಹರ ಕಿಣೇಕರ ಹೇಳಿದರು.</p><p>ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ಇಲ್ಲಿ ಮಂಗಳವಾರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p><p>‘ನಾವು ಮರಾಠಿ ಭಾಷಿಕರಿದ್ದರೂ ನಮ್ಮನ್ನು ಮಹಾರಾಷ್ಟ್ರಕ್ಕೆ ಸೇರಿಸದೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ಹಾಗಾಗಿ ಹಲವು ವರ್ಷಗಳಿಂದ ನವೆಂಬರ್ 1ರಂದು ಕರಾಳ ದಿನ ಆಚರಿಸುತ್ತ ಬಂದಿದ್ದೇವೆ. ಈಚೆಗೆ ಜಿಲ್ಲಾಧಿಕಾರಿ, ನಗರ ಪೊಲೀಸ್ ಕಮಿಷನರ್ ಭೇಟಿಯಾಗಿ ಅನುಮತಿ ಕೋರಿದ್ದೇವೆ. ಅನುಮತಿ ಸಿಗಲಿ, ಸಿಗದಿರಲಿ. ಕರಾಳ ದಿನ ಆಚರಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡ ಶುಭಂ ಶೆಳಕೆ ಬೆಳಗಾವಿಯ ಭಯೋತ್ಪಾದಕ. ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಕಿಡಿ ಕಾರಿದ್ದಾರೆ.</p><p>ಮಂಗಳವಾರ ವಿಡಿಯೊ ಹೇಳಿಕೆ ಬಿಡುಗಡೆಗೊಳಿಸಿದ ಅವರು, ‘ಗಡಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರು ಅನ್ಯೋನ್ಯವಾಗಿ ಬದುಕುತ್ತಿದ್ದಾರೆ. ಆದರೆ, ಶುಭಂ ಶೆಳಕೆ ಅವರು ಭಾಷಾ ಸಾಮರಸ್ಯ ಕದಡಲು ಯತ್ನಿಸುತ್ತಿದ್ದಾರೆ. ನಮ್ಮ ಹೋರಾಟವೇನಿದ್ದರೂ ಎಂಇಎಸ್ ವಿರುದ್ಧವೇ ಹೊರತು, ಬೆಳಗಾವಿಯಲ್ಲಿನ ಮರಾಠಿ ಭಾಷಿಕರ ವಿರುದ್ಧವಲ್ಲ’ ಎಂದು ಹೇಳಿದ್ದಾರೆ.</p><p>‘ಶುಭಂ ಶೆಳಕೆ ಸಾಮಾಜಿಕ ಕಿಡಿ ಇದ್ದಂತೆ. ಅವರ ವಿರುದ್ಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು. ಇಂಥ ಹೇಳಿಕೆ ನೀಡುವ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸುವ ಕೆಲಸ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p><p>‘ಯಾವುದೋ ಮೂಲೆಯಲ್ಲಿ ಕುಳಿತು ನಾರಾಯಣಗೌಡ ಅವರ ಬಗ್ಗೆ ಹಗುರವಾಗಿ ಮಾತನಾಡಿದರೆ ಸಾಲದು. ನಿಜವಾಗಿ ತಾಕತ್ತಿದ್ದರೆ ಬೆಳಗಾವಿಗೆ ಬನ್ನಿ’ ಎಂದು ಸವಾಲು ಹಾಕಿದ್ದಾರೆ.</p><p><strong>‘ಕರಾಳ ದಿನ ಆಚರಿಸುವುದು ಶತಸಿದ್ಧ’</strong></p><p>‘ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ನ.1ರಂದು ನಾವು ಕರಾಳ ದಿನ ಆಚರಿಸುವುದು ಶತಸಿದ್ಧ’ ಎಂದು ಎಂಇಎಸ್ ಕಾರ್ಯಾಧ್ಯಕ್ಷ ಮನೋಹರ ಕಿಣೇಕರ ಹೇಳಿದರು.</p><p>ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ಇಲ್ಲಿ ಮಂಗಳವಾರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p><p>‘ನಾವು ಮರಾಠಿ ಭಾಷಿಕರಿದ್ದರೂ ನಮ್ಮನ್ನು ಮಹಾರಾಷ್ಟ್ರಕ್ಕೆ ಸೇರಿಸದೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ಹಾಗಾಗಿ ಹಲವು ವರ್ಷಗಳಿಂದ ನವೆಂಬರ್ 1ರಂದು ಕರಾಳ ದಿನ ಆಚರಿಸುತ್ತ ಬಂದಿದ್ದೇವೆ. ಈಚೆಗೆ ಜಿಲ್ಲಾಧಿಕಾರಿ, ನಗರ ಪೊಲೀಸ್ ಕಮಿಷನರ್ ಭೇಟಿಯಾಗಿ ಅನುಮತಿ ಕೋರಿದ್ದೇವೆ. ಅನುಮತಿ ಸಿಗಲಿ, ಸಿಗದಿರಲಿ. ಕರಾಳ ದಿನ ಆಚರಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>