<p><strong>ಬೆಳಗಾವಿ:</strong> ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಸೋಮವಾರ ಮಿನಿ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಓಡಿಸುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಸಂಭವಿಸಿದೆ.</p>.<p>ಅನಗೋಳದ ಬಾಬಲೆ ಗಲ್ಲಿಯ ಶೀಬಾ ವಾಸೀಮ್ ಇನಾಮದಾರ(30) ಮೃತರು.</p>.<p>‘ಶಾಲೆಯಿಂದ ಇಬ್ಬರು ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದರು. ಮಿನಿ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯುವ ಮುನ್ನ ಶೀಬಾ ಮೃತಪಟ್ಟಿದ್ದಾರೆ. ಒಂದು ಮಗುವಿಗೆ ಸಣ್ಣ–ಪುಟ್ಟ ಗಾಯವಾಗಿವೆ’ ಎಂದು ಪೊಲೀಸರು ತಿಳಿಸಿದ್ದಾರೆ. ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead">ಚಾಲಕನ ಬಂಧನ: ಬೆಳಗಾವಿ ತಾಲ್ಲೂಕಿನ ಅಷ್ಠೆ ಗ್ರಾಮದಲ್ಲಿ ಬೆಳಗಾವಿ–ಗೋಕಾಕ ರಸ್ತೆಯಲ್ಲಿ ಶನಿವಾರ ಪಾದಚಾರಿಯೊಬ್ಬರಿಗೆ ವಾಹನ ಹಾಯಿಸಿ ಪರಾರಿಯಾಗಿದ್ದ ಗೂಡ್ಸ್ ವಾಹನ ಚಾಲಕನನ್ನು ಮಾರಿಹಾಳ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. </p>.<p>ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ತಡೋಲಾ ಗ್ರಾಮದ ಸಂಜೀವಕುಮಾರ ಮಲ್ಲಿನಾಥ ಜಿಡಗೆ ಬಂಧಿತ. ಅಪಘಾತದಲ್ಲಿ ಪಾದಚಾರಿ ಸಾವನ್ನಪ್ಪಿದ್ದಾರೆ.</p>.<p>‘ಶನಿವಾರ ರಾತ್ರಿ 8ಕ್ಕೆ ಅಷ್ಠೆಯಲ್ಲಿ ಮಹಾದೇವ ಲೋಹಾರ(82) ನಡೆದುಕೊಂಡು ಹೋಗುತ್ತಿದ್ದರು. ಅವರಿಗೆ ಸಂಜೀವಕುಮಾರ ಡಿಕ್ಕಿ ಹೊಡೆದು, 1 ಕಿ.ಮೀ ದೂರದಲ್ಲಿ ಸಿದ್ಧೇಶ್ವರ ದೇವಸ್ಥಾನದ ಕಿರಿದಾದ ರಸ್ತೆಯಲ್ಲಿ ವಾಹನ ನಿಲ್ಲಿಸಿ ಪರಾರಿಯಾಗಿದ್ದ. ಕೆಲ ಸುಳಿವು ಆಧರಿಸಿ ಒಂದೇ ದಿನದಲ್ಲಿ ಆತನನ್ನು ಬಂಧಿಸಿದ್ದೇವೆ. ವಾಹನದ ಮಾಲೀಕರಾದ ಹೊನಗಾದ ಶಂಕರ ಪರಸುಚೆ ವಿರುದ್ಧ ದೂರು ದಾಖಲಿಸಿದ್ದೇವೆ’ ಎಂದು ಮಾರಿಹಾಳ ಠಾಣೆ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಸೋಮವಾರ ಮಿನಿ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಓಡಿಸುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಸಂಭವಿಸಿದೆ.</p>.<p>ಅನಗೋಳದ ಬಾಬಲೆ ಗಲ್ಲಿಯ ಶೀಬಾ ವಾಸೀಮ್ ಇನಾಮದಾರ(30) ಮೃತರು.</p>.<p>‘ಶಾಲೆಯಿಂದ ಇಬ್ಬರು ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದರು. ಮಿನಿ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯುವ ಮುನ್ನ ಶೀಬಾ ಮೃತಪಟ್ಟಿದ್ದಾರೆ. ಒಂದು ಮಗುವಿಗೆ ಸಣ್ಣ–ಪುಟ್ಟ ಗಾಯವಾಗಿವೆ’ ಎಂದು ಪೊಲೀಸರು ತಿಳಿಸಿದ್ದಾರೆ. ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead">ಚಾಲಕನ ಬಂಧನ: ಬೆಳಗಾವಿ ತಾಲ್ಲೂಕಿನ ಅಷ್ಠೆ ಗ್ರಾಮದಲ್ಲಿ ಬೆಳಗಾವಿ–ಗೋಕಾಕ ರಸ್ತೆಯಲ್ಲಿ ಶನಿವಾರ ಪಾದಚಾರಿಯೊಬ್ಬರಿಗೆ ವಾಹನ ಹಾಯಿಸಿ ಪರಾರಿಯಾಗಿದ್ದ ಗೂಡ್ಸ್ ವಾಹನ ಚಾಲಕನನ್ನು ಮಾರಿಹಾಳ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. </p>.<p>ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ತಡೋಲಾ ಗ್ರಾಮದ ಸಂಜೀವಕುಮಾರ ಮಲ್ಲಿನಾಥ ಜಿಡಗೆ ಬಂಧಿತ. ಅಪಘಾತದಲ್ಲಿ ಪಾದಚಾರಿ ಸಾವನ್ನಪ್ಪಿದ್ದಾರೆ.</p>.<p>‘ಶನಿವಾರ ರಾತ್ರಿ 8ಕ್ಕೆ ಅಷ್ಠೆಯಲ್ಲಿ ಮಹಾದೇವ ಲೋಹಾರ(82) ನಡೆದುಕೊಂಡು ಹೋಗುತ್ತಿದ್ದರು. ಅವರಿಗೆ ಸಂಜೀವಕುಮಾರ ಡಿಕ್ಕಿ ಹೊಡೆದು, 1 ಕಿ.ಮೀ ದೂರದಲ್ಲಿ ಸಿದ್ಧೇಶ್ವರ ದೇವಸ್ಥಾನದ ಕಿರಿದಾದ ರಸ್ತೆಯಲ್ಲಿ ವಾಹನ ನಿಲ್ಲಿಸಿ ಪರಾರಿಯಾಗಿದ್ದ. ಕೆಲ ಸುಳಿವು ಆಧರಿಸಿ ಒಂದೇ ದಿನದಲ್ಲಿ ಆತನನ್ನು ಬಂಧಿಸಿದ್ದೇವೆ. ವಾಹನದ ಮಾಲೀಕರಾದ ಹೊನಗಾದ ಶಂಕರ ಪರಸುಚೆ ವಿರುದ್ಧ ದೂರು ದಾಖಲಿಸಿದ್ದೇವೆ’ ಎಂದು ಮಾರಿಹಾಳ ಠಾಣೆ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>