ನಿಷೇಧಾಜ್ಞೆ ಜಾರಿಯಲ್ಲಿದ್ದು, ಮೆರವಣಿಗೆ ಅಥವಾ ವಿಜಯೋತ್ಸವ ಆಚರಿಸಲು ಅವಕಾಶವಿಲ್ಲ ಎಂದು ಪೊಲೀಸ್ ಇಲಾಖೆ ತಿಳಿಸಿತ್ತು. ಆದರೆ, ಇದಕ್ಕೆ ಬಹುತೇಕರು ಮಣೆ ಹಾಕಲಿಲ್ಲ. ರಾತ್ರಿವರೆಗೂ ಅಲ್ಲಲ್ಲಿ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಕಾರ್ಯಕ್ರಮಗಳು ಮುಂದುವರಿದಿದ್ದವು. ಗೆದ್ದ ಕಡೆಯವರು ಗುಲಾಲು ಎರಚಿ, ಪರಸ್ಪರ ಹಚ್ಚಿ ಸಂಭ್ರಮಿಸಿದರು. ಈ ವೇಳೆ ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಕಾಯ್ದುಕೊಳ್ಳುವುದು ಮೊದಲಾದ ಕೋವಿಡ್ ಮಾರ್ಗಸೂಚಿಯನ್ನು ಗಾಳಿಗೆ ತೂರಿದರು!