<p><strong>ಬೆಳಗಾವಿ:</strong> ತಾಲ್ಲೂಕಿನ ಯಳ್ಳೂರು ಗ್ರಾಮದಲ್ಲಿ ಸೋಮವಾರ ಕೇವಲ ₹500 ಹಣಕ್ಕಾಗಿ ಸ್ನೇಹಿತನನ್ನು ಹೊಡೆದು ಕೊಲೆ ಮಾಡಲಾಗಿದೆ.</p>.ಗವಿಸಿದ್ಧಪ್ಪ ನಾಯಕ ಕೊಲೆ ಖಂಡಿಸಿ ಪ್ರತಿಭಟನೆ: ಕೊಪ್ಪಳದಲ್ಲಿ ಸ್ವಯಂಪ್ರೇರಿತ ಬಂದ್.<p>ಯಳ್ಳೂರು ನಿವಾಸಿ ಹುಸೇನ್ ತಾಸೇವಾಲೆ (45) ಕೊಲೆಯಾದವರು. ಇದೇ ಊರಿನ ಮಿಥುನ್ ತುಬಚಿ ಹಾಗೂ ವಿನೋದ್ ಇಂಗಳೆ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.</p><p>ಈ ಮೂವರೂ ಸ್ನೇಹಿತರಾಗಿದ್ದು, ಕೆಲವು ವರ್ಷಗಳಿಂದ ಗುಜರಿ ವ್ಯಾಪಾರ ಮಾಡುತ್ತಿದ್ದರು. ಕೊಲೆಯಾದ ಹುಸೇನ್ ₹500 ಬಾಕಿ ಕೊಡುವುದಿತ್ತು. ಇದೇ ಕಾರಣಕ್ಕೆ ಜಗಳ ತೆಗೆದು ಇಬ್ಬರೂ ಹಿಂದಿನ ದಿನ ಹುಸೇನ್ ಮನೆಗೆ ನುಗ್ಗಿ ಮನಸೋ ಇಚ್ಚೆ ಥಳಿಸಿದ್ದರು. ಮನೆಯಲ್ಲಿದ್ದ ಹುಸೇನ್ ಅವರ ತಾಯಿ ಬಿಡಿಸಿಕೊಳ್ಳಲು ಬಂದರೂ ಅವರನ್ನು ತಳ್ಳಿ ಮಾರಣಾಂತಿಕ ಹಲ್ಲೆ ಮಾಡಿದ್ದರು.</p><p>ಗಾಯಗೊಂಡ ಹುಸೇನ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಕೊನೆಯುಸಿರೆಳೆದರು. ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p> .ಕೊರಟಗೆರೆ | ಮಹಿಳೆ ಕೊಲೆ: ಅಳಿಯ ಸೇರಿ ನಾಲ್ವರ ವಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾಲ್ಲೂಕಿನ ಯಳ್ಳೂರು ಗ್ರಾಮದಲ್ಲಿ ಸೋಮವಾರ ಕೇವಲ ₹500 ಹಣಕ್ಕಾಗಿ ಸ್ನೇಹಿತನನ್ನು ಹೊಡೆದು ಕೊಲೆ ಮಾಡಲಾಗಿದೆ.</p>.ಗವಿಸಿದ್ಧಪ್ಪ ನಾಯಕ ಕೊಲೆ ಖಂಡಿಸಿ ಪ್ರತಿಭಟನೆ: ಕೊಪ್ಪಳದಲ್ಲಿ ಸ್ವಯಂಪ್ರೇರಿತ ಬಂದ್.<p>ಯಳ್ಳೂರು ನಿವಾಸಿ ಹುಸೇನ್ ತಾಸೇವಾಲೆ (45) ಕೊಲೆಯಾದವರು. ಇದೇ ಊರಿನ ಮಿಥುನ್ ತುಬಚಿ ಹಾಗೂ ವಿನೋದ್ ಇಂಗಳೆ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.</p><p>ಈ ಮೂವರೂ ಸ್ನೇಹಿತರಾಗಿದ್ದು, ಕೆಲವು ವರ್ಷಗಳಿಂದ ಗುಜರಿ ವ್ಯಾಪಾರ ಮಾಡುತ್ತಿದ್ದರು. ಕೊಲೆಯಾದ ಹುಸೇನ್ ₹500 ಬಾಕಿ ಕೊಡುವುದಿತ್ತು. ಇದೇ ಕಾರಣಕ್ಕೆ ಜಗಳ ತೆಗೆದು ಇಬ್ಬರೂ ಹಿಂದಿನ ದಿನ ಹುಸೇನ್ ಮನೆಗೆ ನುಗ್ಗಿ ಮನಸೋ ಇಚ್ಚೆ ಥಳಿಸಿದ್ದರು. ಮನೆಯಲ್ಲಿದ್ದ ಹುಸೇನ್ ಅವರ ತಾಯಿ ಬಿಡಿಸಿಕೊಳ್ಳಲು ಬಂದರೂ ಅವರನ್ನು ತಳ್ಳಿ ಮಾರಣಾಂತಿಕ ಹಲ್ಲೆ ಮಾಡಿದ್ದರು.</p><p>ಗಾಯಗೊಂಡ ಹುಸೇನ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಕೊನೆಯುಸಿರೆಳೆದರು. ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p> .ಕೊರಟಗೆರೆ | ಮಹಿಳೆ ಕೊಲೆ: ಅಳಿಯ ಸೇರಿ ನಾಲ್ವರ ವಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>