<p><strong>ಬೆಳಗಾವಿ</strong>: ‘ಬಾಲ್ಯವಿವಾಹ ಪದ್ಧತಿ ಮತ್ತು ಭ್ರೂಣಹತ್ಯೆ ಸಮಾಜಕ್ಕೆ ಕಂಟಕವಾಗಿವೆ. ಇವುಗಳ ನಿರ್ಮೂಲನೆಗೆ ಶ್ರಮಿಸೋಣ. ಲಿಂಗ ತಾರತಮ್ಯದ ವಿರುದ್ಧ ಹೋರಾಡೋಣ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.</p>.<p>ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ನವರು ಹಮ್ಮಿಕೊಂಡಿದ್ದ ‘ಸ್ಫೂರ್ತಿ’ ಹದಿಹರೆಯದ ಹೆಣ್ಣು ಮಕ್ಕಳೊಂದಿಗೆ ನೇರ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಹೆಣ್ಣು ಸಂಸಾರದ ಕಣ್ಣು. ಈ ದೇಶಕ್ಕೆ ಅತಿಹೆಚ್ಚು ಒಲಿಂಪಿಕ್ಸ್ ಪದಕ ತಂದುಕೊಟ್ಟಿರುವುದು ಹೆಣ್ಣು ಮಕ್ಕಳೇ. ಹೆಚ್ಚಿನ ಐಎಎಸ್ ಅಧಿಕಾರಿಗಳೂ ಮಹಿಳೆಯರೇ ಇದ್ದಾರೆ. ಪ್ರತಿವರ್ಷ ಎಸ್ಸೆಸ್ಸೆಲ್ಸಿ ಮತ್ತು ಪಿಯು ದ್ವಿತೀಯ ವರ್ಷದ ಪರೀಕ್ಷೆಯಲ್ಲೂ ಬಾಲಕಿಯರೇ ಸಾಧನೆ ಮೆರೆಯುತ್ತ ಬಂದಿದ್ದಾರೆ’ ಎಂದು ಶ್ಲಾಘಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಟ್ರಸ್ಟ್ನ ನಿರ್ದೇಶಕಿ ಶೋಭಾ ಡಿ.ಕೆ., ಸತ್ಯನಾರಾಯಣ ಜಿ., ಅಶೋಕ ಕೋಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಬಾಲ್ಯವಿವಾಹ ಪದ್ಧತಿ ಮತ್ತು ಭ್ರೂಣಹತ್ಯೆ ಸಮಾಜಕ್ಕೆ ಕಂಟಕವಾಗಿವೆ. ಇವುಗಳ ನಿರ್ಮೂಲನೆಗೆ ಶ್ರಮಿಸೋಣ. ಲಿಂಗ ತಾರತಮ್ಯದ ವಿರುದ್ಧ ಹೋರಾಡೋಣ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.</p>.<p>ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ನವರು ಹಮ್ಮಿಕೊಂಡಿದ್ದ ‘ಸ್ಫೂರ್ತಿ’ ಹದಿಹರೆಯದ ಹೆಣ್ಣು ಮಕ್ಕಳೊಂದಿಗೆ ನೇರ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಹೆಣ್ಣು ಸಂಸಾರದ ಕಣ್ಣು. ಈ ದೇಶಕ್ಕೆ ಅತಿಹೆಚ್ಚು ಒಲಿಂಪಿಕ್ಸ್ ಪದಕ ತಂದುಕೊಟ್ಟಿರುವುದು ಹೆಣ್ಣು ಮಕ್ಕಳೇ. ಹೆಚ್ಚಿನ ಐಎಎಸ್ ಅಧಿಕಾರಿಗಳೂ ಮಹಿಳೆಯರೇ ಇದ್ದಾರೆ. ಪ್ರತಿವರ್ಷ ಎಸ್ಸೆಸ್ಸೆಲ್ಸಿ ಮತ್ತು ಪಿಯು ದ್ವಿತೀಯ ವರ್ಷದ ಪರೀಕ್ಷೆಯಲ್ಲೂ ಬಾಲಕಿಯರೇ ಸಾಧನೆ ಮೆರೆಯುತ್ತ ಬಂದಿದ್ದಾರೆ’ ಎಂದು ಶ್ಲಾಘಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಟ್ರಸ್ಟ್ನ ನಿರ್ದೇಶಕಿ ಶೋಭಾ ಡಿ.ಕೆ., ಸತ್ಯನಾರಾಯಣ ಜಿ., ಅಶೋಕ ಕೋಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>