<p>ಬೆಳಗಾವಿ: ‘ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಿನಲ್ಲಿ ಹರಿದಾಡಿದ ನಕಲಿ ಹೂಡಿಕೆ ಜಾಹೀರಾತು ನಂಬಿದ ವೃದ್ಧರೊಬ್ಬರು ₹7.38 ಲಕ್ಷ ವಂಚನೆಗೆ ಒಳಗಾಗಿದ್ದಾರೆ.</p>.<p>ವಂಟಮುರಿ ಕಾಲೊನಿಯ ಪ್ರಕಾಶ ಗುಬ್ಬಿ (76) ವಂಚನೆಗೊಳಗಾದವರು. ಕೊಲ್ಹಾಪುರ ಮೂಲದ ಆದರ್ಶ ಹಾಗೂ ಬುಲ್ಡಾಣಾದ ದಾಮೋರ ಎಂಬುವರ ವಿರುದ್ಧ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರು ತಿಂಗಳ ಬಳಿಕ ಘಟನೆ ಬೆಳಕಿಗೆ ಬಂದಿದೆ.</p>.<p>‘ವಂಚಕರು ನಕಲಿ ಜಾಹೀರಾತು ಸಿದ್ಧಪಡಿಸಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿದ್ದರು. ಜಾಹೀರಾತಿನಲ್ಲಿದ್ದ ಲಿಂಕ್ ಮೇಲೆ ಕ್ಲಿಕ್ ಮಾಡಿದ ಪ್ರಕಾಶ ಅವರು ತಮ್ಮ ವಿವರಗಳನ್ನು ನೋಂದಾಯಿಸಿಕೊಂಡಿದ್ದರು. ಬಳಿಕ ವಂಚಕರು ಸಂಪರ್ಕಿಸಿ ಮೊದಲು ಫೋನ್ಪೇ ಮೂಲಕ ₹16,500 ಪಾವತಿಸಲು ಸೂಚಿಸಿದ್ದರು. ಮತ್ತೆ ಕರೆ ಮಾಡಿ, ಹೂಡಿಕೆಗೆ ಲಾಭ ಬಂದಿಲ್ಲ ಎಂದು ಹೇಳಿ ಇನ್ನಷ್ಟು ಹಣ ಹೂಡಿಕೆ ಮಾಡುವಂತೆ ಒತ್ತಾಯಿಸಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಪ್ರಕಾಶ ಅವರು ಹಂತ ಹಂತವಾಗಿ ಒಟ್ಟು ₹7.38 ಲಕ್ಷ ಆರ್ಟಿಜಿಎಸ್ ಮೂಲಕ 2025ರ ನವೆಂಬರ್ನಲ್ಲಿ ವರ್ಗಾವಣೆ ಮಾಡಿದ್ದಾರೆ. ಈವರೆಗೂ ಯಾವುದೇ ಲಾಭದ ಹಾಣ ದೊರಕದೇ ಹೂಡಿಕೆ ಮಾಡಿದ ಹಣವೂ ವಾಪಸ್ ಸಿಗದ ಹಿನ್ನೆಲೆಯಲ್ಲಿ ತಾವು ವಂಚನೆಗೆ ಒಳಗಾಗಿರುವುದು ತಿಳಿದು ದೂರು ದಾಖಲಿಸಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-42-827203551</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಿನಲ್ಲಿ ಹರಿದಾಡಿದ ನಕಲಿ ಹೂಡಿಕೆ ಜಾಹೀರಾತು ನಂಬಿದ ವೃದ್ಧರೊಬ್ಬರು ₹7.38 ಲಕ್ಷ ವಂಚನೆಗೆ ಒಳಗಾಗಿದ್ದಾರೆ.</p>.<p>ವಂಟಮುರಿ ಕಾಲೊನಿಯ ಪ್ರಕಾಶ ಗುಬ್ಬಿ (76) ವಂಚನೆಗೊಳಗಾದವರು. ಕೊಲ್ಹಾಪುರ ಮೂಲದ ಆದರ್ಶ ಹಾಗೂ ಬುಲ್ಡಾಣಾದ ದಾಮೋರ ಎಂಬುವರ ವಿರುದ್ಧ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರು ತಿಂಗಳ ಬಳಿಕ ಘಟನೆ ಬೆಳಕಿಗೆ ಬಂದಿದೆ.</p>.<p>‘ವಂಚಕರು ನಕಲಿ ಜಾಹೀರಾತು ಸಿದ್ಧಪಡಿಸಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿದ್ದರು. ಜಾಹೀರಾತಿನಲ್ಲಿದ್ದ ಲಿಂಕ್ ಮೇಲೆ ಕ್ಲಿಕ್ ಮಾಡಿದ ಪ್ರಕಾಶ ಅವರು ತಮ್ಮ ವಿವರಗಳನ್ನು ನೋಂದಾಯಿಸಿಕೊಂಡಿದ್ದರು. ಬಳಿಕ ವಂಚಕರು ಸಂಪರ್ಕಿಸಿ ಮೊದಲು ಫೋನ್ಪೇ ಮೂಲಕ ₹16,500 ಪಾವತಿಸಲು ಸೂಚಿಸಿದ್ದರು. ಮತ್ತೆ ಕರೆ ಮಾಡಿ, ಹೂಡಿಕೆಗೆ ಲಾಭ ಬಂದಿಲ್ಲ ಎಂದು ಹೇಳಿ ಇನ್ನಷ್ಟು ಹಣ ಹೂಡಿಕೆ ಮಾಡುವಂತೆ ಒತ್ತಾಯಿಸಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಪ್ರಕಾಶ ಅವರು ಹಂತ ಹಂತವಾಗಿ ಒಟ್ಟು ₹7.38 ಲಕ್ಷ ಆರ್ಟಿಜಿಎಸ್ ಮೂಲಕ 2025ರ ನವೆಂಬರ್ನಲ್ಲಿ ವರ್ಗಾವಣೆ ಮಾಡಿದ್ದಾರೆ. ಈವರೆಗೂ ಯಾವುದೇ ಲಾಭದ ಹಾಣ ದೊರಕದೇ ಹೂಡಿಕೆ ಮಾಡಿದ ಹಣವೂ ವಾಪಸ್ ಸಿಗದ ಹಿನ್ನೆಲೆಯಲ್ಲಿ ತಾವು ವಂಚನೆಗೆ ಒಳಗಾಗಿರುವುದು ತಿಳಿದು ದೂರು ದಾಖಲಿಸಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-42-827203551</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>