ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀವ್ರ ಕುತೂಹಲ ಮೂಡಿಸಿರುವ ಬೆಳಗಾವಿ ಪಿಎಲ್‌ಡಿ ಬ್ಯಾಂಕ್‌ ಚುನಾವಣೆಗೆ ಕ್ಷಣಗಣನೆ

Last Updated 7 ಸೆಪ್ಟೆಂಬರ್ 2018, 4:54 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಮಹಾದ್ವಾರ ರಸ್ತೆಯಲ್ಲಿರುವ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿ ಎಲ್ ಡಿ) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

ಬ್ಯಾಂಕ್ ಸುತ್ತಮುತ್ತ ಹಾಗೂ ಮಹಾದ್ವಾರ ರಸ್ತೆ ಸೇರುವ ಮಾರ್ಗಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಮಹಾದ್ವಾರ ರಸ್ತೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಂಗಡಿಗಳನ್ನು ಮುಚ್ಚಲಾಗಿದೆ.

ಬೆಳಿಗ್ಗೆ 10ರಿಂದ 11ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಚುನಾವಣಾ ಅಧಿಕಾರಿಯೂ ಆದ ತಹಶೀಲ್ದಾರ್ ಮಂಜುಳಾ ನಾಯಕ ಕಚೇರಿಗೆ ಬಂದಿದ್ದಾರೆ. ಆದರೆ, ನಿರ್ದೇಶಕರ ಸುಳಿವಿಲ್ಲ.

ಜಾರಕಿಹೊಳಿ ಸಹೋದರರು ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ನಡುವೆ ಉಂಟಾಗಿರುವ ವೈಮನಸ್ಸು ಬಗೆಹರಿಸಲು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ ಸೂಚನೆ ಮೇರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬೆಳಗಾವಿಯ ಪ್ರವಾಸಿ ಮಂದಿರಕ್ಕೆ ಬಂದಿದ್ದಾರೆ. ಎರಡೂ ಬಣಗಳ ನಡುವೆ ಒಮ್ಮತ ಮೂಡಿಸಲು ಯತ್ನಿಸುತ್ತಿದ್ದಾರೆ. ಇದರಿಂದಾಗಿ ಚುನಾವಣೆಯು ತೀವ್ರ ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT