<p>ಬೆಳಗಾವಿ: ನಗರಕ್ಕೆ ಬಂದ ಮೂರು ಬಸ್ಗಳಲ್ಲಿ ಬಾಂಗ್ಲಾದ ವಲಸಿಗರು ಇದ್ದಾರೆ ಎಂಬ ಸಂದೇಹದಿಂದ ಪೊಲೀಸರು ಎಲ್ಲರ ವಿಚಾರಣೆ ನಡೆಸಿದರು. ಅವರ ದಾಖಲೆಗಳನ್ನು ಪರಿಶೀಲಿಸಿದರು. ಇವರೆಲ್ಲರೂ ಪಶ್ಚಿಮ ಬಂಗಳಾದ ಕಾರ್ಮಿಕರು ಎಂದು ಗೊತ್ತಾದ ಬಳಿಕ ಕಳುಹಿಸಲಾಯಿತು.</p>.<p>ಹುಬ್ಬಳ್ಳಿಯಿಂದ ಮೂರು ಬಸ್ಗಳಲ್ಲಿ ಬೆಳಗಾವಿಗೆ ಬಂದಿದ್ದ ಜನರನ್ನು ವಶಕ್ಕೆ ಪಡೆದು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಡಿಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು. ಹಿಂದೂ ಸಂಘಟನೆಗಳ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ಈ ಪರಿಶೀಲನೆ ನಡೆಸಲಾಯಿತು.</p>.<p>ಶಂಕಿತರೆಲ್ಲರೂ ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಕಳೆದ ಏಳೆಂಟು ವರ್ಷಗಳಿಂದ ಬೆಳಗಾವಿ ನಗರದ ಶಹಾಪುರ ಪ್ರದೇಶದಲ್ಲಿ ವಾಸವಿದ್ದಾರೆ. ಅಕ್ಕಸಾಲಿಗರ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಮತದಾನ ಮಾಡಲು ತೆರಳಿದ್ದ ಅವರು ಇದೀಗ ವಾಪಸ್ಸಾಗಿರುವುದು ದೃಢಪಟ್ಟಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-21-150023972</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ನಗರಕ್ಕೆ ಬಂದ ಮೂರು ಬಸ್ಗಳಲ್ಲಿ ಬಾಂಗ್ಲಾದ ವಲಸಿಗರು ಇದ್ದಾರೆ ಎಂಬ ಸಂದೇಹದಿಂದ ಪೊಲೀಸರು ಎಲ್ಲರ ವಿಚಾರಣೆ ನಡೆಸಿದರು. ಅವರ ದಾಖಲೆಗಳನ್ನು ಪರಿಶೀಲಿಸಿದರು. ಇವರೆಲ್ಲರೂ ಪಶ್ಚಿಮ ಬಂಗಳಾದ ಕಾರ್ಮಿಕರು ಎಂದು ಗೊತ್ತಾದ ಬಳಿಕ ಕಳುಹಿಸಲಾಯಿತು.</p>.<p>ಹುಬ್ಬಳ್ಳಿಯಿಂದ ಮೂರು ಬಸ್ಗಳಲ್ಲಿ ಬೆಳಗಾವಿಗೆ ಬಂದಿದ್ದ ಜನರನ್ನು ವಶಕ್ಕೆ ಪಡೆದು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಡಿಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು. ಹಿಂದೂ ಸಂಘಟನೆಗಳ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ಈ ಪರಿಶೀಲನೆ ನಡೆಸಲಾಯಿತು.</p>.<p>ಶಂಕಿತರೆಲ್ಲರೂ ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಕಳೆದ ಏಳೆಂಟು ವರ್ಷಗಳಿಂದ ಬೆಳಗಾವಿ ನಗರದ ಶಹಾಪುರ ಪ್ರದೇಶದಲ್ಲಿ ವಾಸವಿದ್ದಾರೆ. ಅಕ್ಕಸಾಲಿಗರ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಮತದಾನ ಮಾಡಲು ತೆರಳಿದ್ದ ಅವರು ಇದೀಗ ವಾಪಸ್ಸಾಗಿರುವುದು ದೃಢಪಟ್ಟಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-21-150023972</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>