ಜಿಲ್ಲೆಯ 18 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಆದರೆ, ಟಿಕೆಟ್ ಸಿಗದ ಪರಿಣಾಮ ಹಲವರು ಅಸಮಾಧಾನಗೊಂಡಿದ್ದಾರೆ. ಕೆಲವರು ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಅವರೊಂದಿಗೆ ಪ್ರಧಾನ್ ಎರಡು ಗಂಟೆಗೂ ಹೆಚ್ಚು ಪ್ರತ್ಯೇಕವಾಗಿ ಮಾತುಕತೆ ನಡೆಸಿ, ಬಂಡಾಯ ಶಮನಕ್ಕೆ ಯತ್ನಿಸಿದರು. ಆದರೆ, ಎಲ್ಲರ ಮನವೊಲಿಸುವಲ್ಲಿ ವಿಫಲವಾದರು. ಕೆಲವರು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು ಎನ್ನಲಾಗಿದೆ.