ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ 2017ರಲ್ಲಿ ಮುರುಗೇಶನಿಗೆ ಮರಣದಂಡನೆ ವಿಧಿಸಿತ್ತು. 2018ರಲ್ಲಿ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು. ನಂತರ ಆತನನ್ನು ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿತ್ತು. ಇದೇ ಏಪ್ರಿಲ್ 22ರಂದು ಪೊಲೀಸರ ಕಣ್ತಪ್ಪಿಸಿ, ಜೈಲಿನ ಗೋಡೆಯಿಂದ ಜಿಗಿದು ಸಿನಿಮೀಯ ಮಾದರಿಯಲ್ಲಿ ಪರಾರಿಯಾಗಿದ್ದ.