ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ನಡುರಸ್ತೆಯಲ್ಲಿ ನೂಪುರ್ ಪ್ರತಿಕೃತಿ ಗಲ್ಲಿಗೇರಿಸಿದ ಅಣಕು

Last Updated 10 ಜೂನ್ 2022, 5:59 IST
ಅಕ್ಷರ ಗಾತ್ರ

ಬೆಳಗಾವಿ: ಪ್ರವಾದಿ ಮಹಮ್ಮದ ಪೈಗಂಬರ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು, ಕೆಲವರು ನಡುರಸ್ತೆಯಲ್ಲಿ ಗಲ್ಲಿಗೇರಿಸಿರಿದ ರೀತಿಯಲ್ಲಿ ನೇತುಹಾಕಿ ಪ್ರತಿಭರಿಸಿದರು. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು.

ನೂಪುರ್ ಶರ್ಮಾ ಅವರ ಭಾವಚಿತ್ರದ ಸಮೇತ ಅವರ ಪ್ರತಿಕೃತಿಯನ್ನು ನಗರದ ಫೋರ್ಟ್ ರಸ್ತೆಯಲ್ಲಿ ಹಗ್ಗ ಕಟ್ಟಿ, ಗುರುವಾರ ತಡರಾತ್ರಿ ನೇತುಹಾಕಿದ್ದರು.

ಶುಕ್ರವಾರ ಬೆಳಿಗ್ಗೆ ಇದನ್ನು ಕಂಡು ಹಿಂದೂ ಜಾಗರಣ, ಶ್ರೀರಾಮ ಸೇನೆ, ಕೆಲ ಪಾಲಿಕೆ ಸದಸ್ಯರು ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಹೆಚ್ಚು ಜನ ಜಮಾಯಿಸಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು.

'ಪೊಲೀಸರು ಈ ಪ್ರತಿಕೃತಿಯನ್ನು ತಕ್ಷಣ ತೆರವುಗೊಳಿಸಬೇಕು.‌ ಇಲ್ಲದಿದ್ದರೆ ನಾವೇ ಅದನ್ನು ತೆರವು ಮಾಡಬೇಕಾಗುತ್ತದೆ. ಹೊಸ ವಿವಾದಕ್ಕೆ ಅವಕಾಶ ಕೊಡಬಾರದು' ಎಂದು ಕೆಲ ಮುಖಂಡರು ಆಗ್ರಹಿಸಿದರು.

'ಇದು ಪ್ರಜಾಪ್ರಭುತ್ವ ದೇಶ, ತಾಲಿಬಾನ್ ಅಲ್ಲ. ಇಲ್ಲಿ ನಡುರಸ್ತೆಯಲ್ಲಿ ಗಲ್ಲಿಗೇರಿಸುವ ಪದ್ಧತಿ ಇಲ್ಲ. ಗಲ್ಲಿಗೇರಿಸುವ ಶಿಕ್ಷೆ ನೀಡುವ ಅಧಿಕಾರ ಇರುವುದು ನ್ಯಾಯಾಂಗಕ್ಕೆ ಮಾತ್ರ. ಅದರ ಅಣಕು ಮಾಡುವುದು ಸರಿಯಲ್ಲ. ನೂಪುರ್ ಶರ್ಮಾ ಅವರ ಹೇಳಿಕೆ‌ಯಲ್ಲಿ ತಪ್ಪಿದ್ದರೆ ಕಾನೂನು ಪ್ರಕಾರ ಕ್ರಮವಹಿಸಬೇಕು. ಕೇಸ್ ದಾಖಲಿಸಿ ಬಂಧಿಸಲಿ. ಆದರೆ ಈ ತರಹ ಗಲ್ಲಿಗೇರಿಸುವ ಮೂಲಕ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ಹುನ್ನಾರ ನಡೆದಿದೆ. ಇಂಥ ವ್ಯವಸ್ಥೆ ಸಹಿಸುವುದಿಲ್ಲ' ಎಂದು ಮಹಾನಗರ ಪಾಲಿಕೆ ಸದಸ್ಯ ಶಂಕರ ಪಾಟೀಲ ಕಿಡಿಕಾರಿದರು.

ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಕೃತಿ ತೆರವು ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT