<p><strong>ಬೆಳಗಾವಿ:</strong> ಜೈ ಕಿಸಾನ್ ಖಾಸಗಿ ತರಕಾರಿ ಸಗಟು ಮಾರುಕಟ್ಟೆಯ ಪರವಾನಗಿ ರುದ್ದು ಮಾಡಿದ್ದನ್ನು ತೆರವುಗೊಳಿಸಬೇಕು, ಇಲ್ಲವೇ ಪ್ರತ್ಯೇಕ ಸ್ಥಳ ನೀಡಿ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿ ಮಾರುಕಟ್ಟೆಯ ವ್ಯಾಪಾರಿಗಳು ಹಾಗೂ ರೈತರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.</p>.<p>ಮಾರುಕಟ್ಟೆ ಬಂದ್ ಮಾಡುವಂತೆ ನಗರದಲ್ಲಿ ಮಂಗಳವಾರ ಭಾರತೀಯ ಕೃಷಿಕ ಸಮಾಜದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಇದಕ್ಕೆ ವಿರುದ್ಧವಾಗಿ ಮಾರುಕಟ್ಟೆಯ ವ್ಯಾಪಾರಿಗಳ ಸಂಘದವರು ಹಾಗೂ ರೈತರು ಪ್ರತಿಭಟನೆ ನಡೆಸಿದರು.</p>.<p>ಬುಧವಾರ ಎಂದಿನಿಂತೆ ರದ್ದು ಮಾಡಲಾದ ಸ್ಥಳದಲ್ಲೇ ಸಗಟು ವ್ಯಾಪಾರ ಆರಂಭಿಸಿದರು. ಇದಕ್ಕೆ ಅಧಿಕಾರಿಗಳು ಆಸ್ಪದ ನೀಡಲಿಲ್ಲ. ಆಗ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಧಿಕ್ಕಾರ ಕೂಗಿದರು.</p>.<p>10 ವರ್ಷಗಳ ವಾಣಿಜ್ಯ ಪರವಾನಗಿ ಪಡೆದಿದ್ದೇವೆ. ನಿಯಮದ ಪ್ರಕಾರ ವ್ಯಾಪಾರ ಮಾಡುತ್ತಿದ್ದೇವೆ. ಈಗ ಕುತಂತ್ರ ಬಳಸಿ ಮಾರುಕಟ್ಟೆಯನ್ನು ಏಕಾಏಕಿ ಬಂದ್ ಮಾಡುತ್ತಿದ್ದಾರೆ. ಇದಿರಂದ 300 ಮಳಿಗೆಗಳ ಕುಟುಂಬಗಳು ಬೀದಿಗೆ ಬೀಳುತ್ತವೆ ಎಂದು ಘೋಷಣೆ ಕೂಗಿದರು.</p>.<p>ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ರೈತರನ್ನು ಸಮಾಧಾನ ಮಾಡಲು ಯತ್ನಿಸಿದರು. ನ್ಯಾಯಾಲಯದ ನಿಯಮದಂತೆ ಈ ಮಾರುಕಟ್ಟೆ ಬಂದ್ ಮಾಡಬೇಕಾಗುತ್ತದೆ. ಪರ್ಯಾಯ ಮಾರ್ಗ ಏನು ಎಂದು ನಿಮಗೆ ತಿಳಿಸಲಾಗುವುದು. ರೈತರು, ವ್ಯಾಪಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಬಳಿಕ ಪ್ರತಿಭಟನೆ ಕೈಬಿಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜೈ ಕಿಸಾನ್ ಖಾಸಗಿ ತರಕಾರಿ ಸಗಟು ಮಾರುಕಟ್ಟೆಯ ಪರವಾನಗಿ ರುದ್ದು ಮಾಡಿದ್ದನ್ನು ತೆರವುಗೊಳಿಸಬೇಕು, ಇಲ್ಲವೇ ಪ್ರತ್ಯೇಕ ಸ್ಥಳ ನೀಡಿ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿ ಮಾರುಕಟ್ಟೆಯ ವ್ಯಾಪಾರಿಗಳು ಹಾಗೂ ರೈತರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.</p>.<p>ಮಾರುಕಟ್ಟೆ ಬಂದ್ ಮಾಡುವಂತೆ ನಗರದಲ್ಲಿ ಮಂಗಳವಾರ ಭಾರತೀಯ ಕೃಷಿಕ ಸಮಾಜದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಇದಕ್ಕೆ ವಿರುದ್ಧವಾಗಿ ಮಾರುಕಟ್ಟೆಯ ವ್ಯಾಪಾರಿಗಳ ಸಂಘದವರು ಹಾಗೂ ರೈತರು ಪ್ರತಿಭಟನೆ ನಡೆಸಿದರು.</p>.<p>ಬುಧವಾರ ಎಂದಿನಿಂತೆ ರದ್ದು ಮಾಡಲಾದ ಸ್ಥಳದಲ್ಲೇ ಸಗಟು ವ್ಯಾಪಾರ ಆರಂಭಿಸಿದರು. ಇದಕ್ಕೆ ಅಧಿಕಾರಿಗಳು ಆಸ್ಪದ ನೀಡಲಿಲ್ಲ. ಆಗ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಧಿಕ್ಕಾರ ಕೂಗಿದರು.</p>.<p>10 ವರ್ಷಗಳ ವಾಣಿಜ್ಯ ಪರವಾನಗಿ ಪಡೆದಿದ್ದೇವೆ. ನಿಯಮದ ಪ್ರಕಾರ ವ್ಯಾಪಾರ ಮಾಡುತ್ತಿದ್ದೇವೆ. ಈಗ ಕುತಂತ್ರ ಬಳಸಿ ಮಾರುಕಟ್ಟೆಯನ್ನು ಏಕಾಏಕಿ ಬಂದ್ ಮಾಡುತ್ತಿದ್ದಾರೆ. ಇದಿರಂದ 300 ಮಳಿಗೆಗಳ ಕುಟುಂಬಗಳು ಬೀದಿಗೆ ಬೀಳುತ್ತವೆ ಎಂದು ಘೋಷಣೆ ಕೂಗಿದರು.</p>.<p>ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ರೈತರನ್ನು ಸಮಾಧಾನ ಮಾಡಲು ಯತ್ನಿಸಿದರು. ನ್ಯಾಯಾಲಯದ ನಿಯಮದಂತೆ ಈ ಮಾರುಕಟ್ಟೆ ಬಂದ್ ಮಾಡಬೇಕಾಗುತ್ತದೆ. ಪರ್ಯಾಯ ಮಾರ್ಗ ಏನು ಎಂದು ನಿಮಗೆ ತಿಳಿಸಲಾಗುವುದು. ರೈತರು, ವ್ಯಾಪಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಬಳಿಕ ಪ್ರತಿಭಟನೆ ಕೈಬಿಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>