<p><strong>ಬೆಳಗಾವಿ:</strong> ‘ಕೊರೊನಾ ಭೀತಿ ನಡುವೆಯೂ ಇಲ್ಲಿನ ಆರ್ಎಲ್ಎಸ್ ಕಾಲೇಜಿನ ಕೇಂದ್ರದಲ್ಲಿ ನಡೆದ ದ್ವಿತೀಯ ಪಿಯುಸಿ ಕನ್ನಡ ವಿಷಯದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಯಶಸ್ವಿಯಾಗಿದೆ’ ಎಂದು ಡಿಡಿಪಿಯು ರಾಜಶೇಖರ ಪಟ್ಟಣಶೆಟ್ಟಿ ತಿಳಿಸಿದರು.</p>.<p>ಮೌಲ್ಯಮಾಪನ ಕೇಂದ್ರದಲ್ಲಿ ಗುರುವಾರ ನಡೆದ ನಿವೃತ್ತ ಉಪನ್ಯಾಸಕರಿಗೆ ಸನ್ಮಾನ, ವಿವಿಧ ಉಪನ್ಯಾಸಕ ಕವಿಗಳಿಂದ ರಚಿತವಾದ ‘ನಮ್ಮೊಳಗಿನ ನಾವು’ ಸಂಪಾದಿತ ಕವನಸಂಕಲನ ಮತ್ತು ದ್ವಿತೀಯ ಪಿಯುಸಿ ಪಠ್ಯಕ್ರಮ ಕೈಪಿಡಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕೊರೊನಾಕ್ಕೆ ಹೆದರಿ ಅನೇಕ ಉಪನ್ಯಾಸಕರು ಮೌಲ್ಯಮಾಪನಕ್ಕೆ ಬರಲು ಹಿಂದೇಟು ಹಾಕಿದ್ದಾರೆ. ಆದರೆ, ಕನ್ನಡ ಉಪನ್ಯಾಸಕರು ವಿದ್ಯಾರ್ಥಿಗಳ ಹಿತಾಸಕ್ತಿಯ ಕಾಳಜಿ ವಹಿಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದರು. ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಎದೆಗಾರಿಕೆ ಬೆಳೆಸಿಕೊಳ್ಳಬೇಕೆ ಹೊರತು ಪಲಾಯನ ಮಾಡಬಾರದು’ ಎಂದರು.</p>.<p>ಈ ವರ್ಷ ನಿವೃತ್ತಿ ಆಗಲಿರುವ ಚಿಂಚಲಿ ಮಹಾಕಾಳಿ ಪಿಯು ಕಾಲೇಜು ಉಪನ್ಯಾಸಕ ರಾಮಪ್ಪ ಹೊಸಳ್ಳಿ ಹಾಗೂ ಮಾಲ್ಯಮಾಪನಕ್ಕೆ ಸಹಕರಿಸಿದ ಹಿರಿಯ ಅಧ್ಯಾಪಕರನ್ನು ಸನ್ಮಾನಿಸಿದರು.</p>.<p>ಡಾ.ಮೈನುದ್ದೀನ ರೇವಡಿಗಾರ ಕವಿತೆ ವಾಚಿಸಿದರು. ಶ್ರೀಕಾಂತ ಕೆಂಧೂಳಿ ಹಾಗೂ ಸಿದ್ದು ಚೌಗಲಾ ಹಾಡಿದರು.</p>.<p>ಪ್ರಾಚಾರ್ಯ ಹಾಗೂ ಮೌಲ್ಯಮಾಪನ ಕೇಂದ್ರದ ನಿರೀಕ್ಷಕ ಕಾಪಸೆ ಪಠ್ಯ ಕೈಪಿಡಿ ಬಿಡುಗಡೆ ಮಾಡಿದರು. ಪ್ರಾಚಾರ್ಯ ಹಾಗೂ ಕೇಂದ್ರದ ಮುಖ್ಯಸ್ಥ ಡಾ.ವೈ.ಎಂ. ಯಾಕೊಳ್ಳಿ, ಆರ್.ಎಲ್.ಎಸ್. ಕಾಲೇಜಿನ ಪ್ರಾಚಾರ್ಯ ಎಸ್.ಜಿ. ನಂಜಪ್ಪನವರ ಇದ್ದರು.</p>.<p>ಪ್ರಾಚಾರ್ಯ ಪಿ.ಬಿ. ಅವಲಕ್ಕಿ ಸ್ವಾಗತಿಸಿದರು. ಡಾ.ಕಟ್ಟೀಕರ ಪರಿಚಯಿಸಿದರು. ಡಾ.ಕೆ.ಎನ್. ದೊಡ್ಡಮನಿ ನಿರೂಪಿಸಿದರು. ಡಾ.ನಾಗರಾಜ ನಾಡಗೌಡ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಕೊರೊನಾ ಭೀತಿ ನಡುವೆಯೂ ಇಲ್ಲಿನ ಆರ್ಎಲ್ಎಸ್ ಕಾಲೇಜಿನ ಕೇಂದ್ರದಲ್ಲಿ ನಡೆದ ದ್ವಿತೀಯ ಪಿಯುಸಿ ಕನ್ನಡ ವಿಷಯದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಯಶಸ್ವಿಯಾಗಿದೆ’ ಎಂದು ಡಿಡಿಪಿಯು ರಾಜಶೇಖರ ಪಟ್ಟಣಶೆಟ್ಟಿ ತಿಳಿಸಿದರು.</p>.<p>ಮೌಲ್ಯಮಾಪನ ಕೇಂದ್ರದಲ್ಲಿ ಗುರುವಾರ ನಡೆದ ನಿವೃತ್ತ ಉಪನ್ಯಾಸಕರಿಗೆ ಸನ್ಮಾನ, ವಿವಿಧ ಉಪನ್ಯಾಸಕ ಕವಿಗಳಿಂದ ರಚಿತವಾದ ‘ನಮ್ಮೊಳಗಿನ ನಾವು’ ಸಂಪಾದಿತ ಕವನಸಂಕಲನ ಮತ್ತು ದ್ವಿತೀಯ ಪಿಯುಸಿ ಪಠ್ಯಕ್ರಮ ಕೈಪಿಡಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕೊರೊನಾಕ್ಕೆ ಹೆದರಿ ಅನೇಕ ಉಪನ್ಯಾಸಕರು ಮೌಲ್ಯಮಾಪನಕ್ಕೆ ಬರಲು ಹಿಂದೇಟು ಹಾಕಿದ್ದಾರೆ. ಆದರೆ, ಕನ್ನಡ ಉಪನ್ಯಾಸಕರು ವಿದ್ಯಾರ್ಥಿಗಳ ಹಿತಾಸಕ್ತಿಯ ಕಾಳಜಿ ವಹಿಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದರು. ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಎದೆಗಾರಿಕೆ ಬೆಳೆಸಿಕೊಳ್ಳಬೇಕೆ ಹೊರತು ಪಲಾಯನ ಮಾಡಬಾರದು’ ಎಂದರು.</p>.<p>ಈ ವರ್ಷ ನಿವೃತ್ತಿ ಆಗಲಿರುವ ಚಿಂಚಲಿ ಮಹಾಕಾಳಿ ಪಿಯು ಕಾಲೇಜು ಉಪನ್ಯಾಸಕ ರಾಮಪ್ಪ ಹೊಸಳ್ಳಿ ಹಾಗೂ ಮಾಲ್ಯಮಾಪನಕ್ಕೆ ಸಹಕರಿಸಿದ ಹಿರಿಯ ಅಧ್ಯಾಪಕರನ್ನು ಸನ್ಮಾನಿಸಿದರು.</p>.<p>ಡಾ.ಮೈನುದ್ದೀನ ರೇವಡಿಗಾರ ಕವಿತೆ ವಾಚಿಸಿದರು. ಶ್ರೀಕಾಂತ ಕೆಂಧೂಳಿ ಹಾಗೂ ಸಿದ್ದು ಚೌಗಲಾ ಹಾಡಿದರು.</p>.<p>ಪ್ರಾಚಾರ್ಯ ಹಾಗೂ ಮೌಲ್ಯಮಾಪನ ಕೇಂದ್ರದ ನಿರೀಕ್ಷಕ ಕಾಪಸೆ ಪಠ್ಯ ಕೈಪಿಡಿ ಬಿಡುಗಡೆ ಮಾಡಿದರು. ಪ್ರಾಚಾರ್ಯ ಹಾಗೂ ಕೇಂದ್ರದ ಮುಖ್ಯಸ್ಥ ಡಾ.ವೈ.ಎಂ. ಯಾಕೊಳ್ಳಿ, ಆರ್.ಎಲ್.ಎಸ್. ಕಾಲೇಜಿನ ಪ್ರಾಚಾರ್ಯ ಎಸ್.ಜಿ. ನಂಜಪ್ಪನವರ ಇದ್ದರು.</p>.<p>ಪ್ರಾಚಾರ್ಯ ಪಿ.ಬಿ. ಅವಲಕ್ಕಿ ಸ್ವಾಗತಿಸಿದರು. ಡಾ.ಕಟ್ಟೀಕರ ಪರಿಚಯಿಸಿದರು. ಡಾ.ಕೆ.ಎನ್. ದೊಡ್ಡಮನಿ ನಿರೂಪಿಸಿದರು. ಡಾ.ನಾಗರಾಜ ನಾಡಗೌಡ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>