ಖಾನಾಪುರ ಅರಣ್ಯದಲ್ಲಿ ಶನಿವಾರಕ್ಕಿಂತ ಭಾನುವಾರ ಮಳೆಯ ಪ್ರಮಾಣ ಹೆಚ್ಚಾಗಿದೆ. ಮೂಲಗಳ ಪ್ರಕಾರ ಖಾನಾಪುರ ಅರಣ್ಯದಲ್ಲಿ ಸುರಿದ ಮಳೆಯಿಂದ ಮಲಪ್ರಭಾ ನದಿಗೆ ಹರಿದುಬರುವ ನೀರು ಕಣಕುಂಬಿಯಿಂದ 12೦ ಕಿಮೀ ದೂರದ ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಜಲಾಶಯ ತಲುಪಲು 18 ಗಂಟೆ ಸಮಯ ಬೇಕು. ಹೀಗಾಗಿ ಇಂದು ಮುಂಜಾನೆವರೆಗೆ ಖಾನಾಪುರ ತಾಲ್ಲೂಕಿನ ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ಸುರಿದ ಮಳೆಯಿಂದ ಸಂಗ್ರಹಗೊಂಡ ನೀರು ಸೋಮವಾರ ನವಿಲುತೀರ್ಥ ತಲುಪಲಿದೆ.