ಅಥಣಿ ತಾಲ್ಲೂಕಿನ ಪೂರ್ವ ಭಾಗದಲ್ಲಿ ಭಾನುವಾರ ಸಂಜೆ ಸುರಿದ ಅಕಾಲಿಕ ಮಳೆ, ಬಿರುಗಾಳಿಯಿಂದ ದ್ರಾಕ್ಷಿ ಬೆಳೆಗಾರರಿಗೆ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಐಗಳಿಯ ಕಲ್ಯಾಣ ನಗರದಲ್ಲಿರುವ ಒಣ ದ್ರಾಕ್ಷಿ ಸಂಸ್ಕರಣಾ ಘಟಕದ ಬಳಿ ಅಡಹಳ್ಳಿ, ಕೋಹಳ್ಳಿ, ಕಕಮರಿ, ಅಡಹಳಟ್ಟಿ, ಸುಟಟ್ಟಿ, ಕೊಕಟನೂರ, ಯಲಹಡಗಿ ಮೊದಲಾದ ಗ್ರಾಮಗಳ ಬೆಳೆಗಾರರು ದ್ರಾಕ್ಷಿಯನ್ನು ಒಣಗಲು ಹಾಕಿದ್ದರು. ಏಕಾಏಕಿ ಸುರಿದ ಮಳೆಯಿಂದಾಗಿ ಅಂದಾಜು 50 ಟನ್ ದ್ರಾಕ್ಷಿ ನೀರು ಪಾಲಾಗಿದೆ.