<p><strong>ಬೆಳಗಾವಿ:</strong> ಬೆಳಗಾವಿಯಲ್ಲಿ ಆಚರಿಸಲಾಗುವ ಕರ್ನಾಟಕ ರಾಜ್ಯೋತ್ಸವಕ್ಕೆ ಇದೇ ಮೊದಲ ಬಾರಿಗೆ ಸರ್ಕಾರದಿಂದ ₹50 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ.</p><p>ಕಾನೂನು, ಪ್ರವಾಸೋದ್ಯಮ ಹಾಗೂ ಗಡಿ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರ ವಿಶೇಷ ಪ್ರಯತ್ನದ ಫಲವಾಗಿ ಪ್ರವಾಸೋದ್ಯಮ ಇಲಾಖೆಯಿಂದ, ವಿಶೇಷ ಪ್ರಕರಣವೆಂದು ಪರಿಗಣಿಸಿ ಈ ಅನುದಾನ ಬಿಡುಗಡೆ ಮಾಡಲಾಗಿದೆ.</p><p>ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಹಾಗೂ ಇತರ ವಿವಿಧ ಕನ್ನಡ ಸಂಘಟನೆಗಳ 25ಕ್ಕೂ ಹೆಚ್ಚು ಪ್ರಮುಖರು ಬೆಂಗಳೂರಿನಲ್ಲಿ ಈಚೆಗೆ ಸಚಿವ ಎಚ್.ಕೆ.ಪಾಟೀಲ ಅವರಿಗೆ ಮನವಿ ಮಾಡಿದ್ದರು.</p><p>‘ಅಖಂಡ ಕರ್ನಾಟಕ ರಚನೆಯಾಗಿ 70 ವರ್ಷಗಳ ಅವಧಿಯಲ್ಲಿ ಯಾವುದೇ ಸರ್ಕಾರ ರಾಜ್ಯೋತ್ಸವಕ್ಕೆ ಅನುದಾನ ನೀಡಿರಲಿಲ್ಲ. ಸಂಪ್ರದಾಯದಂತೆ ₹1 ಲಕ್ಷ ಮಾತ್ರ ಜಿಲ್ಲಾಡಳಿತ ನೀಡುತ್ತಿತ್ತು. ಬೆಳಗಾವಿಯಲ್ಲಿ ಆಚರಿಸುವ ರಾಜ್ಯೋತ್ಸವ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಇದಕ್ಕೆ ಮತ್ತಷ್ಟು ಇಂಬು ನೀಡಿದ ಸಚಿವರ ನಡೆಯಿಂದ ಗಡಿ ಕನ್ನಡಿಗರಲ್ಲಿ ಚೈತನ್ಯ ಮೂಡಿದೆ’ ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.</p>.ರಾಜ್ಯೋತ್ಸವ: ಎಲ್ಲೆಡೆ ರಾರಾಜಿಸುತ್ತಿರುವ ಕನ್ನಡ ಬಾವುಟಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಬೆಳಗಾವಿಯಲ್ಲಿ ಆಚರಿಸಲಾಗುವ ಕರ್ನಾಟಕ ರಾಜ್ಯೋತ್ಸವಕ್ಕೆ ಇದೇ ಮೊದಲ ಬಾರಿಗೆ ಸರ್ಕಾರದಿಂದ ₹50 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ.</p><p>ಕಾನೂನು, ಪ್ರವಾಸೋದ್ಯಮ ಹಾಗೂ ಗಡಿ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರ ವಿಶೇಷ ಪ್ರಯತ್ನದ ಫಲವಾಗಿ ಪ್ರವಾಸೋದ್ಯಮ ಇಲಾಖೆಯಿಂದ, ವಿಶೇಷ ಪ್ರಕರಣವೆಂದು ಪರಿಗಣಿಸಿ ಈ ಅನುದಾನ ಬಿಡುಗಡೆ ಮಾಡಲಾಗಿದೆ.</p><p>ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಹಾಗೂ ಇತರ ವಿವಿಧ ಕನ್ನಡ ಸಂಘಟನೆಗಳ 25ಕ್ಕೂ ಹೆಚ್ಚು ಪ್ರಮುಖರು ಬೆಂಗಳೂರಿನಲ್ಲಿ ಈಚೆಗೆ ಸಚಿವ ಎಚ್.ಕೆ.ಪಾಟೀಲ ಅವರಿಗೆ ಮನವಿ ಮಾಡಿದ್ದರು.</p><p>‘ಅಖಂಡ ಕರ್ನಾಟಕ ರಚನೆಯಾಗಿ 70 ವರ್ಷಗಳ ಅವಧಿಯಲ್ಲಿ ಯಾವುದೇ ಸರ್ಕಾರ ರಾಜ್ಯೋತ್ಸವಕ್ಕೆ ಅನುದಾನ ನೀಡಿರಲಿಲ್ಲ. ಸಂಪ್ರದಾಯದಂತೆ ₹1 ಲಕ್ಷ ಮಾತ್ರ ಜಿಲ್ಲಾಡಳಿತ ನೀಡುತ್ತಿತ್ತು. ಬೆಳಗಾವಿಯಲ್ಲಿ ಆಚರಿಸುವ ರಾಜ್ಯೋತ್ಸವ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಇದಕ್ಕೆ ಮತ್ತಷ್ಟು ಇಂಬು ನೀಡಿದ ಸಚಿವರ ನಡೆಯಿಂದ ಗಡಿ ಕನ್ನಡಿಗರಲ್ಲಿ ಚೈತನ್ಯ ಮೂಡಿದೆ’ ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.</p>.ರಾಜ್ಯೋತ್ಸವ: ಎಲ್ಲೆಡೆ ರಾರಾಜಿಸುತ್ತಿರುವ ಕನ್ನಡ ಬಾವುಟಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>