<p><strong>ಬೆಳಗಾವಿ</strong>: ಇಲ್ಲಿ ಶನಿವಾರ ರಾಜ್ಯೋತ್ಸವ ಮೆರವಣಿಗೆಗೆ ನುಗ್ಗಿದ ದುಷ್ಕರ್ಮಿಗಳ ಗುಂಪೊಂದು ಚಾಕು–ಜಂಬೆಗಳಿಂದ ಇರಿದ ಕಾರಣ ಗಾಯಗೊಂಡಿದ್ದ ಐವರು ಚೇತರಿಸಿಕೊಂಡಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. </p>.<p>‘ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆರೋಪಿಗಳ ಪತ್ತೆಗೆ ಕ್ರಮ ವಹಿಸಿದ್ದೇವೆ’ ಎಂದು ಎಪಿಎಂಸಿ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p><strong>ಇಬ್ಬರ ಬಂಧನ: </strong>ಬೆಳಗಾವಿಯಲ್ಲಿ ನಡೆದ ರಾಜ್ಯೋತ್ಸವ ಮೆರವಣಿಗೆಯಲ್ಲಿ ಕುಣಿಯುತ್ತಿದ್ದ ತಾಲ್ಲೂಕಿನ ಕೆ.ಕೆ.ಕೊಪ್ಪದ ಆದಿತ್ಯ ಬೆಂಡಿಗೇರಿ ಅವರನ್ನು ಅಡ್ಡಗಟ್ಟಿ, ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪದಡಿ ಇಬ್ಬರನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಕೆ.ಕೆ.ಕೊಪ್ಪದ ಕಿರಣ ಕುರುಬರ, ಅರುಣ ಕುರುಬರ ಬಂಧಿತರು. ಈ ಹಿಂದೆ ಆಗಿದ್ದ ತಂಟೆಯ ಹಳೇ ದ್ವೇಷಕ್ಕಾಗಿ ಇಬ್ಬರು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ಅವಾಚ್ಯ ಶಬ್ದ ಬಳಸಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ. ಕೃತ್ಯಕ್ಕೆ ಬಳಸಿದ ಚಾಕು ವಶಕ್ಕೆ ಪಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿ ಶನಿವಾರ ರಾಜ್ಯೋತ್ಸವ ಮೆರವಣಿಗೆಗೆ ನುಗ್ಗಿದ ದುಷ್ಕರ್ಮಿಗಳ ಗುಂಪೊಂದು ಚಾಕು–ಜಂಬೆಗಳಿಂದ ಇರಿದ ಕಾರಣ ಗಾಯಗೊಂಡಿದ್ದ ಐವರು ಚೇತರಿಸಿಕೊಂಡಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. </p>.<p>‘ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆರೋಪಿಗಳ ಪತ್ತೆಗೆ ಕ್ರಮ ವಹಿಸಿದ್ದೇವೆ’ ಎಂದು ಎಪಿಎಂಸಿ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p><strong>ಇಬ್ಬರ ಬಂಧನ: </strong>ಬೆಳಗಾವಿಯಲ್ಲಿ ನಡೆದ ರಾಜ್ಯೋತ್ಸವ ಮೆರವಣಿಗೆಯಲ್ಲಿ ಕುಣಿಯುತ್ತಿದ್ದ ತಾಲ್ಲೂಕಿನ ಕೆ.ಕೆ.ಕೊಪ್ಪದ ಆದಿತ್ಯ ಬೆಂಡಿಗೇರಿ ಅವರನ್ನು ಅಡ್ಡಗಟ್ಟಿ, ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪದಡಿ ಇಬ್ಬರನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಕೆ.ಕೆ.ಕೊಪ್ಪದ ಕಿರಣ ಕುರುಬರ, ಅರುಣ ಕುರುಬರ ಬಂಧಿತರು. ಈ ಹಿಂದೆ ಆಗಿದ್ದ ತಂಟೆಯ ಹಳೇ ದ್ವೇಷಕ್ಕಾಗಿ ಇಬ್ಬರು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ಅವಾಚ್ಯ ಶಬ್ದ ಬಳಸಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ. ಕೃತ್ಯಕ್ಕೆ ಬಳಸಿದ ಚಾಕು ವಶಕ್ಕೆ ಪಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>