<p><strong>ಬೆಳಗಾವಿ:</strong> ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದ ಕಾರಣ ಎಲ್ಲ ತಾಲ್ಲೂಕುಗಳ ಅಂಗಣವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಕಾಲೇಜುಗಳಿಗೆ ಬುಧವಾರ (ಆ.20) ಕೂಡ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.</p><p>ಸೋಮವಾರ ಹಾಗೂ ಮಂಗಳವಾರ ಕೆಲವು ತಾಲ್ಲೂಕುಗಳಲ್ಲಿ ಮಾತ್ರ ರಜೆ ನೀಡಲಾಗಿತ್ತು. ಆದರೆ, ಭಾರತೀಯ ಹವಾಮಾನ ಇಲಾಖೆಯು ಆ.19ರಿಂದ ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ಘೋಷಣೆ ಮಾಡಿದ ಕಾರಣ, ಎಲ್ಲ ತಾಲ್ಲೂಕುಗಳಲ್ಲೂ ರಜೆ ಘೋಷಣೆ ಮಾಡಲಾಗಿದೆ.</p><p>ಇನ್ನೊಂದೆಡೆ, ಬೆಳಗಾವಿ ನಗರ ಹಾಗೂ ತಾಲ್ಲೂಕಿನಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ. ಹೆಚ್ಚು ಜನರು ಹೊರಗಡೆ ಓಡಾಡದೇ ಮನೆ ಸೇರಿಕೊಂಡಿದ್ದಾರೆ.</p><p>ಬೆಳಗಾವಿ ತಾಲ್ಲೂಕಿನಾದ್ಯಂತ ಇರುವ ಭತ್ತದ ಗದ್ದೆಗಳಿಗೆ ಅಪಾರ ಪ್ರಮಾಣ ನೀರು ನುಗ್ಗಿದೆ. ನಾಲ್ಕು ದಿನಗಳಿಂದಲೂ ಭತ್ತದ ಬೆಳೆ ನೀರಿನಲ್ಲಿ ಮುಳುಗಿದ್ದು, ಹಾನಿ ಸಂಭವಿಸುವ ಆತಂಕ ಎದುರಾಗಿದೆ.</p><p>ನಿರಂತರ ಮಳೆಯ ಕಾರಣ ಕಬ್ಬು, ಸೋಯಾಬಿನ್, ಜೋಳ, ಭತ್ತ ಹಾಗೂ ಹೆಸರು ಬೆಳೆಗಳಿಗೆ ಕೀಟ ಹಾಗೂ ರೋಗಬಾಧೆ ತಾಗುವ ಆತಂಕವೂ ಹೆಚ್ಚಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದ ಕಾರಣ ಎಲ್ಲ ತಾಲ್ಲೂಕುಗಳ ಅಂಗಣವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಕಾಲೇಜುಗಳಿಗೆ ಬುಧವಾರ (ಆ.20) ಕೂಡ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.</p><p>ಸೋಮವಾರ ಹಾಗೂ ಮಂಗಳವಾರ ಕೆಲವು ತಾಲ್ಲೂಕುಗಳಲ್ಲಿ ಮಾತ್ರ ರಜೆ ನೀಡಲಾಗಿತ್ತು. ಆದರೆ, ಭಾರತೀಯ ಹವಾಮಾನ ಇಲಾಖೆಯು ಆ.19ರಿಂದ ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ಘೋಷಣೆ ಮಾಡಿದ ಕಾರಣ, ಎಲ್ಲ ತಾಲ್ಲೂಕುಗಳಲ್ಲೂ ರಜೆ ಘೋಷಣೆ ಮಾಡಲಾಗಿದೆ.</p><p>ಇನ್ನೊಂದೆಡೆ, ಬೆಳಗಾವಿ ನಗರ ಹಾಗೂ ತಾಲ್ಲೂಕಿನಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ. ಹೆಚ್ಚು ಜನರು ಹೊರಗಡೆ ಓಡಾಡದೇ ಮನೆ ಸೇರಿಕೊಂಡಿದ್ದಾರೆ.</p><p>ಬೆಳಗಾವಿ ತಾಲ್ಲೂಕಿನಾದ್ಯಂತ ಇರುವ ಭತ್ತದ ಗದ್ದೆಗಳಿಗೆ ಅಪಾರ ಪ್ರಮಾಣ ನೀರು ನುಗ್ಗಿದೆ. ನಾಲ್ಕು ದಿನಗಳಿಂದಲೂ ಭತ್ತದ ಬೆಳೆ ನೀರಿನಲ್ಲಿ ಮುಳುಗಿದ್ದು, ಹಾನಿ ಸಂಭವಿಸುವ ಆತಂಕ ಎದುರಾಗಿದೆ.</p><p>ನಿರಂತರ ಮಳೆಯ ಕಾರಣ ಕಬ್ಬು, ಸೋಯಾಬಿನ್, ಜೋಳ, ಭತ್ತ ಹಾಗೂ ಹೆಸರು ಬೆಳೆಗಳಿಗೆ ಕೀಟ ಹಾಗೂ ರೋಗಬಾಧೆ ತಾಗುವ ಆತಂಕವೂ ಹೆಚ್ಚಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>