<p>ಬೆಳಗಾವಿ: ‘ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಅಕ್ಕಿ ಅಂಗಡಿ ಮಾಡಿ ಕೊಡುವುದಾಗಿ ನಂಬಿಸಿ ₹12 ಲಕ್ಷ ಪಡೆದು ಮೋಸ ಮಾಡಿದ್ದಾರೆ. ಅವರ ಮೇಲೆ ಕ್ರಮ ಕೈಗೊಂಡು ನನ್ನ ಹಣ ಮರಳಿ ಕೊಡಿಸಬೇಕು. ಇಲ್ಲದಿದ್ದರೆ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡಬೇಕು’ ಎಂದು ಬೈಲಹೊಂಗಲದ ಮಹಾಂತೇಶ ಹೊಟಕರ್ ಎನ್ನುವವರು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.</p>.<p>‘ನಿವೃತ್ತ ಪೊಲೀಸ್ ಅಧಿಕಾರಿ ಸದಾಶಿವ ಸೋನೋನಿ ಎನ್ನುವವರು ಅಕ್ಕಿ ವ್ಯಾಪಾರ ಹಾಕಿಕೊಡುವುದಾಗಿ ನಂಬಿಸಿದರು. ಅವರಿಗೆ ಹಾಗೂ ಅವರ ಪತ್ನಿ, ಪುತ್ರನ ಖಾತೆಗೆ 2017ರಿಂದ 2019ರವರೆಗೆ ₹12 ಲಕ್ಷ ಹಾಕಿದ್ದೇನೆ. ಕೊನೆಗೆ ಸರಿಯಾಗಿ ಉದ್ಯಮ ಮಾಡಿ ಕೊಡದೇ ಮೋಸ ಮಾಡಿದ್ದಾರೆ. ನನ್ನ ಹಣವನ್ನು ಮರಳಿ ಕೇಳಿದರೂ ಕೊಡುತ್ತಿಲ್ಲ. ಇದರಿಂದ ನನಗೆ ನಷ್ಟವಾಗಿದೆ’ ಎಂದು ತಿಳಿಸಿದ್ದಾರೆ.</p>.<p>ನ್ಯಾಯ ಕೊಡಿಸುವಂತೆ ಟಿಳಕವಾಡಿ ಠಾಣೆಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಐಜಿಪಿ ಅವರಿಗೂ ಮನವಿ ಮಾಡಿದ್ದೇನೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-21-2111650189</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಅಕ್ಕಿ ಅಂಗಡಿ ಮಾಡಿ ಕೊಡುವುದಾಗಿ ನಂಬಿಸಿ ₹12 ಲಕ್ಷ ಪಡೆದು ಮೋಸ ಮಾಡಿದ್ದಾರೆ. ಅವರ ಮೇಲೆ ಕ್ರಮ ಕೈಗೊಂಡು ನನ್ನ ಹಣ ಮರಳಿ ಕೊಡಿಸಬೇಕು. ಇಲ್ಲದಿದ್ದರೆ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡಬೇಕು’ ಎಂದು ಬೈಲಹೊಂಗಲದ ಮಹಾಂತೇಶ ಹೊಟಕರ್ ಎನ್ನುವವರು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.</p>.<p>‘ನಿವೃತ್ತ ಪೊಲೀಸ್ ಅಧಿಕಾರಿ ಸದಾಶಿವ ಸೋನೋನಿ ಎನ್ನುವವರು ಅಕ್ಕಿ ವ್ಯಾಪಾರ ಹಾಕಿಕೊಡುವುದಾಗಿ ನಂಬಿಸಿದರು. ಅವರಿಗೆ ಹಾಗೂ ಅವರ ಪತ್ನಿ, ಪುತ್ರನ ಖಾತೆಗೆ 2017ರಿಂದ 2019ರವರೆಗೆ ₹12 ಲಕ್ಷ ಹಾಕಿದ್ದೇನೆ. ಕೊನೆಗೆ ಸರಿಯಾಗಿ ಉದ್ಯಮ ಮಾಡಿ ಕೊಡದೇ ಮೋಸ ಮಾಡಿದ್ದಾರೆ. ನನ್ನ ಹಣವನ್ನು ಮರಳಿ ಕೇಳಿದರೂ ಕೊಡುತ್ತಿಲ್ಲ. ಇದರಿಂದ ನನಗೆ ನಷ್ಟವಾಗಿದೆ’ ಎಂದು ತಿಳಿಸಿದ್ದಾರೆ.</p>.<p>ನ್ಯಾಯ ಕೊಡಿಸುವಂತೆ ಟಿಳಕವಾಡಿ ಠಾಣೆಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಐಜಿಪಿ ಅವರಿಗೂ ಮನವಿ ಮಾಡಿದ್ದೇನೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-21-2111650189</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>