<p><strong>ಬೆಳಗಾವಿ:</strong> ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಎನ್ಡಬ್ಲ್ಯುಕೆಆರ್ಟಿಸಿ) ಗುರುತಿಸಿದ ಅಪಘಾತ ವಲಯಗಳ ಕುರಿತು, ಇಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.</p>.<p>ರಸ್ತೆ ಹಾಳಾಗಿರುವುದು, ರಸ್ತೆ ಸುರಕ್ಷತಾ ಕ್ರಮ ಅನುಸರಿಸದಿರುವ ಹಿನ್ನೆಲೆಯಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.</p>.<p>‘ಎನ್ಡಬ್ಲ್ಯುಕೆಆರ್ಟಿಸಿ ಗುರುತಿಸಿದ 49 ಅಪಘಾತ ವಲಯಗಳ ಪಟ್ಟಿಯನ್ನು ಲೋಕೋಪಯೋಗಿ ಇಲಾಖೆಗೆ ನೀಡಬೇಕು. ಈ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವಾಲಯಕ್ಕೆ ಪತ್ರ ಬರೆದು, ಅಪಘಾತಗಳನ್ನು ತಗ್ಗಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು’ ಎಂದು ಸತೀಶ ಜಾರಕಿಹೊಳಿ ಹೇಳಿದರು.</p>.<p>ಎನ್ಡಬ್ಲ್ಯುಕೆಆರ್ಟಿಸಿ ಉಪಾಧ್ಯಕ್ಷ ಸುನೀಲ ಹನುಮಣ್ಣವರ, ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ್ ಎಂ., ಮುಖ್ಯ ಎಂಜಿನಿಯರ್(ಸಂಪರ್ಕ ಮತ್ತು ಕಟ್ಟಡಗಳು) ಶಿವಾನಂದ ನಾಯ್ಕ, ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಗಣೇಶ ರಾಥೋಡ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಎನ್ಡಬ್ಲ್ಯುಕೆಆರ್ಟಿಸಿ) ಗುರುತಿಸಿದ ಅಪಘಾತ ವಲಯಗಳ ಕುರಿತು, ಇಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.</p>.<p>ರಸ್ತೆ ಹಾಳಾಗಿರುವುದು, ರಸ್ತೆ ಸುರಕ್ಷತಾ ಕ್ರಮ ಅನುಸರಿಸದಿರುವ ಹಿನ್ನೆಲೆಯಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.</p>.<p>‘ಎನ್ಡಬ್ಲ್ಯುಕೆಆರ್ಟಿಸಿ ಗುರುತಿಸಿದ 49 ಅಪಘಾತ ವಲಯಗಳ ಪಟ್ಟಿಯನ್ನು ಲೋಕೋಪಯೋಗಿ ಇಲಾಖೆಗೆ ನೀಡಬೇಕು. ಈ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವಾಲಯಕ್ಕೆ ಪತ್ರ ಬರೆದು, ಅಪಘಾತಗಳನ್ನು ತಗ್ಗಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು’ ಎಂದು ಸತೀಶ ಜಾರಕಿಹೊಳಿ ಹೇಳಿದರು.</p>.<p>ಎನ್ಡಬ್ಲ್ಯುಕೆಆರ್ಟಿಸಿ ಉಪಾಧ್ಯಕ್ಷ ಸುನೀಲ ಹನುಮಣ್ಣವರ, ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ್ ಎಂ., ಮುಖ್ಯ ಎಂಜಿನಿಯರ್(ಸಂಪರ್ಕ ಮತ್ತು ಕಟ್ಟಡಗಳು) ಶಿವಾನಂದ ನಾಯ್ಕ, ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಗಣೇಶ ರಾಥೋಡ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>