<p>ಪ</p>.<p>ರಾಯಬಾಗ: ಗ್ರಾಮೀಣ ಪ್ರದೇಶಗಳ ನೀರಿನ ಭದ್ರತೆ ಹೆಚ್ಚಿಸುವ ಉದ್ದೇಶದಿಂದ ರಾಯಬಾಗ ತಾಲ್ಲೂಕಿನಲ್ಲಿ 39 ಕೆರೆಗಳನ್ನು ತುಂಬಿಸುವ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.</p>.<p>ತಾಲ್ಲೂಕಿನ ಮಾಡಲಗಿ, ಬೂದಿಹಾಳ, ಹುಬ್ಬರವಾಡಿ ಹಾಗೂ ಮೇಖಳಿ ಗ್ರಾಮಗಳ ಕೆರೆ ತುಂಬುವ ಕಾಮಗಾರಿಗಳನ್ನು ವೀಕ್ಷಿಸಿ ಮಾತನಾಡಿದರು.</p>.<p>ರಾಯಬಾಗ ತಾಲ್ಲೂಕಿನಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಅವಶ್ಯಕತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, 39 ಕೆರೆ ತುಂಬುವ ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಈ ಯೋಜನೆಯಿಂದ ರೈತರಿಗೆ ನೀರಾವರಿ ಸೌಲಭ್ಯ ಒದಗುವುದರ ಜತೆಗೆ ಭೂಗರ್ಭ ಜಲಮಟ್ಟ ವೃದ್ಧಿಯಾಗಲಿದ್ದು, ಪಶುಸಂಗೋಪನೆ ಹಾಗೂ ಗ್ರಾಮೀಣ ಜೀವನಕ್ಕೆ ಸ್ಥಿರತೆ ಸಿಗಲಿದೆ ಎಂದು ಸಚಿವರು ಹೇಳಿದರು.</p>.<p>ಕೆರೆ ತುಂಬುವ ಕಾಮಗಾರಿಯಲ್ಲಿ ಗುಣಮಟ್ಟ ಹಾಗೂ ತಾಂತ್ರಿಕ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನೀರು ನಷ್ಟವಾಗುವ ಸಾಧ್ಯತೆ ಇರುವೆಡೆಗಳಲ್ಲಿ ತಕ್ಷಣ ತಿದ್ದುಪಡಿ ಕ್ರಮ ಕೈಗೊಳ್ಳಬೇಕು. ಯಾವುದೇ ನಿರ್ಲಕ್ಷ್ಯ ಅಥವಾ ವಿಳಂಬವನ್ನು ಸರ್ಕಾರ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಡಿ ಎಸ್ ನಾಯಿಕ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಪ್ಪಾಸಾಬ ಕುಲಗುಡೆ, ಜ್ಯೋತಿ ಕೆಂಪಟ್ಟಿ, ಅರ್ಜುನ ನಾಯಿಕವಾಡಿ, ದಿಲೀಪ ಜಮಾದಾರ,ಅಮಿತ ಘಾಟಗೆ,ಶಿವಾನಂದ ಮರಾಯಿ, ಹಾಜಿ ಮುಲ್ಲಾ, ಜಿನೇಂದ್ರ ಖೇಮಲಾಪೂರೆ, ವಸಂತ ಕರಿಗಾರ, ವಿನಾಯಕ ಕುಂಬಾರ,ಮಾರುತಿ ( ಪಿಂಟು) ಕರಿಗಾರ, ಅಶೋಕ ನಾಯಿಕ,ನಾಮದೇವ ಕಾಂಬಳೆ, ದಿಲೀಪ ಪಾಯನ್ನವರ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ</p>.<p>ರಾಯಬಾಗ: ಗ್ರಾಮೀಣ ಪ್ರದೇಶಗಳ ನೀರಿನ ಭದ್ರತೆ ಹೆಚ್ಚಿಸುವ ಉದ್ದೇಶದಿಂದ ರಾಯಬಾಗ ತಾಲ್ಲೂಕಿನಲ್ಲಿ 39 ಕೆರೆಗಳನ್ನು ತುಂಬಿಸುವ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.</p>.<p>ತಾಲ್ಲೂಕಿನ ಮಾಡಲಗಿ, ಬೂದಿಹಾಳ, ಹುಬ್ಬರವಾಡಿ ಹಾಗೂ ಮೇಖಳಿ ಗ್ರಾಮಗಳ ಕೆರೆ ತುಂಬುವ ಕಾಮಗಾರಿಗಳನ್ನು ವೀಕ್ಷಿಸಿ ಮಾತನಾಡಿದರು.</p>.<p>ರಾಯಬಾಗ ತಾಲ್ಲೂಕಿನಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಅವಶ್ಯಕತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, 39 ಕೆರೆ ತುಂಬುವ ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಈ ಯೋಜನೆಯಿಂದ ರೈತರಿಗೆ ನೀರಾವರಿ ಸೌಲಭ್ಯ ಒದಗುವುದರ ಜತೆಗೆ ಭೂಗರ್ಭ ಜಲಮಟ್ಟ ವೃದ್ಧಿಯಾಗಲಿದ್ದು, ಪಶುಸಂಗೋಪನೆ ಹಾಗೂ ಗ್ರಾಮೀಣ ಜೀವನಕ್ಕೆ ಸ್ಥಿರತೆ ಸಿಗಲಿದೆ ಎಂದು ಸಚಿವರು ಹೇಳಿದರು.</p>.<p>ಕೆರೆ ತುಂಬುವ ಕಾಮಗಾರಿಯಲ್ಲಿ ಗುಣಮಟ್ಟ ಹಾಗೂ ತಾಂತ್ರಿಕ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನೀರು ನಷ್ಟವಾಗುವ ಸಾಧ್ಯತೆ ಇರುವೆಡೆಗಳಲ್ಲಿ ತಕ್ಷಣ ತಿದ್ದುಪಡಿ ಕ್ರಮ ಕೈಗೊಳ್ಳಬೇಕು. ಯಾವುದೇ ನಿರ್ಲಕ್ಷ್ಯ ಅಥವಾ ವಿಳಂಬವನ್ನು ಸರ್ಕಾರ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಡಿ ಎಸ್ ನಾಯಿಕ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಪ್ಪಾಸಾಬ ಕುಲಗುಡೆ, ಜ್ಯೋತಿ ಕೆಂಪಟ್ಟಿ, ಅರ್ಜುನ ನಾಯಿಕವಾಡಿ, ದಿಲೀಪ ಜಮಾದಾರ,ಅಮಿತ ಘಾಟಗೆ,ಶಿವಾನಂದ ಮರಾಯಿ, ಹಾಜಿ ಮುಲ್ಲಾ, ಜಿನೇಂದ್ರ ಖೇಮಲಾಪೂರೆ, ವಸಂತ ಕರಿಗಾರ, ವಿನಾಯಕ ಕುಂಬಾರ,ಮಾರುತಿ ( ಪಿಂಟು) ಕರಿಗಾರ, ಅಶೋಕ ನಾಯಿಕ,ನಾಮದೇವ ಕಾಂಬಳೆ, ದಿಲೀಪ ಪಾಯನ್ನವರ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>