ಕಟ್ಟಡ ದುರಸ್ತಿಗೆ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ ಅನುದಾನ ಬಳಸಲು ಅವಕಾಶವಿಲ್ಲ. ಆದಾಗ್ಯೂ ಚಿಕ್ಕೋಡಿಯಲ್ಲಿ ಶಿಕ್ಷಣ ಇಲಾಖೆಯಿಂದ ಕಟ್ಟಡ ದುರಸ್ತಿಗೆ ಬಳಸಿರುವ ಬಗ್ಗೆ ಮಾಹಿತಿ ಕೇಳಿದರು. ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ಶೇ.40ಕ್ಕೂ ಹೆಚ್ಚಿರುವ ಕಡೆಗಳಲ್ಲಿ ಕಟ್ಟಡ ದುರಸ್ತಿಗೆ ಅನುದಾನ ಬಳಸಲಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದರು.