<p><strong>ಬೆಳಗಾವಿ:</strong> ಕಲಾವಿದರ ಮಾಸಾಶನ ಸೌಲಭ್ಯಕ್ಕಾಗಿ ವಯೋಮಿತಿಯನ್ನು 50 ವರ್ಷಕ್ಕೆ ಇಳಿಸಬೇಕು, ₹5 ಸಾವಿರಕ್ಕೆ ಮಾಸಾಶನ ಹೆಚ್ಚಿಸಲು ಆಗ್ರಹಿಸಿ ಕರ್ನಾಟಕ ಬೀದಿನಾಟಕ ಕಲಾ ತಂಡಗಳ ಒಕ್ಕೂಟ ಮತ್ತು ಸಾಂಸ್ಕೃತಿಕ ಸಂಘಗಳ ಒಕ್ಕೂಟದ ಸದಸ್ಯರು, ಭಜನೆ ಮಾಡುವ ಮೂಲಕ ಭಿನ್ನವಾಗಿ ಪ್ರತಿಭಟಿಸಿದರು.</p>.<p>ಇಲ್ಲಿನ ಸುವರ್ಣ ವಿಧಾನಸೌಧ ಬಳಿಯ ಉದ್ಯಾನದಲ್ಲಿ ಸೋಮವಾರ ಬೆಳಿಗ್ಗೆಯಿಂದ ‘ಸಾಂಸ್ಕೃತಿಕ ಪ್ರತಿಭಟನೆ’ ನಡೆಸಿದ ಕಲಾವಿದರು, ನಿರಂತರ ವಚನಗಾಯನ, ಪ್ರಾರ್ಥನೆ, ಕೀರ್ತನೆ, ಜನಪದ ಗೀತೆ, ಭಜನಾ ಪದಗಳನ್ನು ಹಾಡಿದರು. ಇದರಿಂದ ಪ್ರತಿಭಟನೆಗೆ ನಿಗದಿ ಮಾಡಿದ ಟೆಂಟುಗಳಲ್ಲಿನ ಜನರ ಗಮನ ಸೆಳೆದರು.</p>.<p>ಜಾನಪದ ಅಕಾಡೆಮಿ, ಸಾಹಿತ್ಯ ಅಕಾಡೆಮಿ ಸೇರಿ ಕೆಲ ಅಕಾಡೆಮಿಗಳ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು. ಬೀದಿನಾಟಕಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪಿಸಲು ಆಗ್ರಹಿಸಿದರು.</p>.<p>ಒಕ್ಕೂಟದ ಮುಖಂಡರಾದ ಭರತ ಕಲಾಚಂದ್ರ, ಸುಜಾತಾ ಮಗದುಮ್ಮ ನೇತೃತ್ವ ವಹಿಸಿದ್ದರು.</p>.<p><strong>ಊಟ ಮಾಡಿ ಪ್ರತಿಭಟನೆ:</strong> </p><p>ಪಾರಂಪರಿಕ ವೈದ್ಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ಮತ್ತು ಸಂಘಗಳ ಒಕ್ಕೂಟದವರು ಟೆಂಟ್ನಲ್ಲಿಯೇ ಸಾಮೂಹಿಕ ಊಟ ಮಾಡಿ ಪ್ರತಿಭಟಿಸಿದರು.</p>.<p>ಪಾರಂಪರಿಕ ವೈದ್ಯ ವೃತ್ತಿಗೆ ಮಾನ್ಯತೆ ನೀಡಬೇಕು. ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಧನ್ವಂತರಿ ವನ, ವೈದ್ಯ ಭವನ ನಿರ್ಮಿಸಬೇಕು. ಹಿರಿಯ ಪಾರಂಪರಿಕ ವೈದ್ಯರನ್ನು ಗುರುತಿಸಿ, ಜಿಲ್ಲೆ, ರಾಜ್ಯಮಟ್ಟದಲ್ಲಿ ಪುರಸ್ಕರಿಸಬೇಕು ಎಂದು ಆಗ್ರಹಿಸಿದರು. ಬಸವಪ್ರಸಾದ ಸ್ವಾಮೀಜಿ, ಶರಣಪ್ಪ ಬಳ್ಳಾರಿ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಕಲಾವಿದರ ಮಾಸಾಶನ ಸೌಲಭ್ಯಕ್ಕಾಗಿ ವಯೋಮಿತಿಯನ್ನು 50 ವರ್ಷಕ್ಕೆ ಇಳಿಸಬೇಕು, ₹5 ಸಾವಿರಕ್ಕೆ ಮಾಸಾಶನ ಹೆಚ್ಚಿಸಲು ಆಗ್ರಹಿಸಿ ಕರ್ನಾಟಕ ಬೀದಿನಾಟಕ ಕಲಾ ತಂಡಗಳ ಒಕ್ಕೂಟ ಮತ್ತು ಸಾಂಸ್ಕೃತಿಕ ಸಂಘಗಳ ಒಕ್ಕೂಟದ ಸದಸ್ಯರು, ಭಜನೆ ಮಾಡುವ ಮೂಲಕ ಭಿನ್ನವಾಗಿ ಪ್ರತಿಭಟಿಸಿದರು.</p>.<p>ಇಲ್ಲಿನ ಸುವರ್ಣ ವಿಧಾನಸೌಧ ಬಳಿಯ ಉದ್ಯಾನದಲ್ಲಿ ಸೋಮವಾರ ಬೆಳಿಗ್ಗೆಯಿಂದ ‘ಸಾಂಸ್ಕೃತಿಕ ಪ್ರತಿಭಟನೆ’ ನಡೆಸಿದ ಕಲಾವಿದರು, ನಿರಂತರ ವಚನಗಾಯನ, ಪ್ರಾರ್ಥನೆ, ಕೀರ್ತನೆ, ಜನಪದ ಗೀತೆ, ಭಜನಾ ಪದಗಳನ್ನು ಹಾಡಿದರು. ಇದರಿಂದ ಪ್ರತಿಭಟನೆಗೆ ನಿಗದಿ ಮಾಡಿದ ಟೆಂಟುಗಳಲ್ಲಿನ ಜನರ ಗಮನ ಸೆಳೆದರು.</p>.<p>ಜಾನಪದ ಅಕಾಡೆಮಿ, ಸಾಹಿತ್ಯ ಅಕಾಡೆಮಿ ಸೇರಿ ಕೆಲ ಅಕಾಡೆಮಿಗಳ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು. ಬೀದಿನಾಟಕಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪಿಸಲು ಆಗ್ರಹಿಸಿದರು.</p>.<p>ಒಕ್ಕೂಟದ ಮುಖಂಡರಾದ ಭರತ ಕಲಾಚಂದ್ರ, ಸುಜಾತಾ ಮಗದುಮ್ಮ ನೇತೃತ್ವ ವಹಿಸಿದ್ದರು.</p>.<p><strong>ಊಟ ಮಾಡಿ ಪ್ರತಿಭಟನೆ:</strong> </p><p>ಪಾರಂಪರಿಕ ವೈದ್ಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ಮತ್ತು ಸಂಘಗಳ ಒಕ್ಕೂಟದವರು ಟೆಂಟ್ನಲ್ಲಿಯೇ ಸಾಮೂಹಿಕ ಊಟ ಮಾಡಿ ಪ್ರತಿಭಟಿಸಿದರು.</p>.<p>ಪಾರಂಪರಿಕ ವೈದ್ಯ ವೃತ್ತಿಗೆ ಮಾನ್ಯತೆ ನೀಡಬೇಕು. ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಧನ್ವಂತರಿ ವನ, ವೈದ್ಯ ಭವನ ನಿರ್ಮಿಸಬೇಕು. ಹಿರಿಯ ಪಾರಂಪರಿಕ ವೈದ್ಯರನ್ನು ಗುರುತಿಸಿ, ಜಿಲ್ಲೆ, ರಾಜ್ಯಮಟ್ಟದಲ್ಲಿ ಪುರಸ್ಕರಿಸಬೇಕು ಎಂದು ಆಗ್ರಹಿಸಿದರು. ಬಸವಪ್ರಸಾದ ಸ್ವಾಮೀಜಿ, ಶರಣಪ್ಪ ಬಳ್ಳಾರಿ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>