<p><strong>ಚನ್ನಮ್ಮನ ಕಿತ್ತೂರು:</strong> ಬೆಳಗಾವಿಯಲ್ಲಿ ನಡೆದಿರುವ ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸುವ ಬರುವ ಸಚಿವರುಗಳನ್ನು ಸ್ವಾಗತಿಸುವ ಭರದಲ್ಲಿ ಹೆದ್ದಾರಿ ಉದ್ದಕ್ಕೂ ಇರುವ ರಸ್ತೆ ಸೂಚನಾ ಫಲಕಗಳು ಮುಚ್ಚುವಂತೆ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸಲಾಗಿದೆ.</p>.<p>ಚಾಲಕರು ಮತ್ತು ಪ್ರಯಾಣಿಕರಿಗೆ ಇದರಿಂದ ತೊಂದರೆ ಆಗಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಾದರೂ ಇವುಗಳ ಮೇಲಿನ ಫ್ಲೆಕ್ಸ್, ಬ್ಯಾನರ್ ಮುಸುಕು ತೆಗೆಸಬೇಕು ಎಂದು ಕಿತ್ತೂರು ಕರ್ನಾಟಕ ರೈತ ಜಾಗೃತಿ ಸಂಘಟನೆ ಪ್ರಧಾನ ಕಾರ್ಯದರ್ಶಿ ಅಪ್ಪೇಶ ದಳವಾಯಿ ಆಗ್ರಹಿಸಿದ್ದಾರೆ.</p>.<p>ಗುರುವಾರ ಪತ್ರಕರ್ತರ ಜತೆ ಮಾತನಾಡಿ, ‘ಫ್ಲೆಕ್ಸ್, ಬ್ಯಾನರ್ ಅಳವಡಿಸಿರುವ ಫಲಕಗಳು ರಸ್ತೆಗಳು ರಸ್ತೆ ತಿರುವು, ಪೆಟ್ರೋಲ್ ಬಂಕ್, ಹೋಟೆಲ್, ಹೆದ್ದಾರಿ ಬದಿಗಿರುವ ಊರುಗಳನ್ನು ಪರಿಚಯಿಸುತ್ತವೆ. ದೊಡ್ಡ ಗಾತ್ರದ ಬ್ಯಾನರ್ಗಳಿಂದಾಗಿ ಪ್ರಯಾಣಿಕರಿಗೆ ಮತ್ತು ಚಾಲಕರಿಗೆ ಏನೂ ಕಾಣಿಸುತ್ತಿಲ್ಲ’ ಎಂದು ದೂರಿದರು.</p>.<p>‘ಮುಖ್ಯಮಂತ್ರಿ, ಸಚಿವರು, ಪ್ರಭಾವಿ ಶಾಸಕರ ಭಾವಚಿತ್ರ ಇರುವ ಇವುಗಳನ್ನು ತೆರವು ಮಾಡಿಸಲು ಹೆದ್ದಾರಿ ಉಸ್ತುವಾರಿ ನೋಡಿಕೊಳ್ಳುವವರು ಭಯ ಪಡುತ್ತಾರೆ. ಆರ್ಟಿಒ ಅಧಿಕಾರಿಗಳು ಮತ್ತು ಪೊಲೀಸರು ಇದರತ್ತ ಕಣ್ಣೆತ್ತಿ ನೋಡದಂತಾಗಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು:</strong> ಬೆಳಗಾವಿಯಲ್ಲಿ ನಡೆದಿರುವ ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸುವ ಬರುವ ಸಚಿವರುಗಳನ್ನು ಸ್ವಾಗತಿಸುವ ಭರದಲ್ಲಿ ಹೆದ್ದಾರಿ ಉದ್ದಕ್ಕೂ ಇರುವ ರಸ್ತೆ ಸೂಚನಾ ಫಲಕಗಳು ಮುಚ್ಚುವಂತೆ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸಲಾಗಿದೆ.</p>.<p>ಚಾಲಕರು ಮತ್ತು ಪ್ರಯಾಣಿಕರಿಗೆ ಇದರಿಂದ ತೊಂದರೆ ಆಗಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಾದರೂ ಇವುಗಳ ಮೇಲಿನ ಫ್ಲೆಕ್ಸ್, ಬ್ಯಾನರ್ ಮುಸುಕು ತೆಗೆಸಬೇಕು ಎಂದು ಕಿತ್ತೂರು ಕರ್ನಾಟಕ ರೈತ ಜಾಗೃತಿ ಸಂಘಟನೆ ಪ್ರಧಾನ ಕಾರ್ಯದರ್ಶಿ ಅಪ್ಪೇಶ ದಳವಾಯಿ ಆಗ್ರಹಿಸಿದ್ದಾರೆ.</p>.<p>ಗುರುವಾರ ಪತ್ರಕರ್ತರ ಜತೆ ಮಾತನಾಡಿ, ‘ಫ್ಲೆಕ್ಸ್, ಬ್ಯಾನರ್ ಅಳವಡಿಸಿರುವ ಫಲಕಗಳು ರಸ್ತೆಗಳು ರಸ್ತೆ ತಿರುವು, ಪೆಟ್ರೋಲ್ ಬಂಕ್, ಹೋಟೆಲ್, ಹೆದ್ದಾರಿ ಬದಿಗಿರುವ ಊರುಗಳನ್ನು ಪರಿಚಯಿಸುತ್ತವೆ. ದೊಡ್ಡ ಗಾತ್ರದ ಬ್ಯಾನರ್ಗಳಿಂದಾಗಿ ಪ್ರಯಾಣಿಕರಿಗೆ ಮತ್ತು ಚಾಲಕರಿಗೆ ಏನೂ ಕಾಣಿಸುತ್ತಿಲ್ಲ’ ಎಂದು ದೂರಿದರು.</p>.<p>‘ಮುಖ್ಯಮಂತ್ರಿ, ಸಚಿವರು, ಪ್ರಭಾವಿ ಶಾಸಕರ ಭಾವಚಿತ್ರ ಇರುವ ಇವುಗಳನ್ನು ತೆರವು ಮಾಡಿಸಲು ಹೆದ್ದಾರಿ ಉಸ್ತುವಾರಿ ನೋಡಿಕೊಳ್ಳುವವರು ಭಯ ಪಡುತ್ತಾರೆ. ಆರ್ಟಿಒ ಅಧಿಕಾರಿಗಳು ಮತ್ತು ಪೊಲೀಸರು ಇದರತ್ತ ಕಣ್ಣೆತ್ತಿ ನೋಡದಂತಾಗಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>