<p><strong>ಬೆಳಗಾವಿ</strong>: ತಾಲ್ಲೂಕಿನ ಹೊನಗಾ ಗ್ರಾಮದಲ್ಲಿ ನಾಲ್ವರು ಯುವಕರು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಧ್ವಂಸ ಮಾಡಲು ಸೋಮವಾರ ಯತ್ನಿಸಿದ್ದರಿಂದ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.</p>.<p>ಸಂಜೆ ಪ್ರತಿಮೆಯ ಕಟ್ಟೆಯೇರಿದ ಆ ಯುವಕರು ಗಲಾಟೆ ಆರಂಭಿಸಿದ್ದಾರೆ. ಪ್ರತಿಮೆ ಧ್ವಂಸ ಮಾಡಲು ಅವರು ಮುಂದಾದರು ಎನ್ನಲಾಗುತ್ತಿದೆ. ಅದನ್ನು ಗಮನಿಸಿದ ಸ್ಥಳೀಯರು ಅವರಿಗೆ ತಡೆ ಒಡ್ಡಿದ್ದಾರೆ. ಕಾಕತಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿ, ಅವರು ಬಂದ ಬಳಿಕ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>‘ಹೊನಗಾದಲ್ಲಿ ಶಿವಾಜಿ ಪ್ರತಿಮೆಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಗ್ರಾಮಸ್ಥರ ಮಾಹಿತಿ ಮೇರೆಗೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಕಾಕತಿ ಸಿಪಿಐ ಗುರುನಾಥ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಆ ಯುವಕರು, ‘ನೀವು ಕರ್ನಾಟಕದವರೋ, ಮಹಾರಾಷ್ಟ್ರದವರೋ? ಈ ಊರು ಕರ್ನಾಟಕದಲ್ಲಿದೆಯೋ, ಮಹಾರಾಷ್ಟ್ರದಲ್ಲೋ ಎಂದು ಕನ್ನಡದಲ್ಲಿ ಕೇಳುವ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಥಳೀಯರ್ಯಾರೋ ಮೊಬೈಲ್ ಫೋನ್ನಲ್ಲಿ ವಿಡಿಯೊ ಮಾಡಿ ಹರಿಬಿಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ತಾಲ್ಲೂಕಿನ ಹೊನಗಾ ಗ್ರಾಮದಲ್ಲಿ ನಾಲ್ವರು ಯುವಕರು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಧ್ವಂಸ ಮಾಡಲು ಸೋಮವಾರ ಯತ್ನಿಸಿದ್ದರಿಂದ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.</p>.<p>ಸಂಜೆ ಪ್ರತಿಮೆಯ ಕಟ್ಟೆಯೇರಿದ ಆ ಯುವಕರು ಗಲಾಟೆ ಆರಂಭಿಸಿದ್ದಾರೆ. ಪ್ರತಿಮೆ ಧ್ವಂಸ ಮಾಡಲು ಅವರು ಮುಂದಾದರು ಎನ್ನಲಾಗುತ್ತಿದೆ. ಅದನ್ನು ಗಮನಿಸಿದ ಸ್ಥಳೀಯರು ಅವರಿಗೆ ತಡೆ ಒಡ್ಡಿದ್ದಾರೆ. ಕಾಕತಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿ, ಅವರು ಬಂದ ಬಳಿಕ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>‘ಹೊನಗಾದಲ್ಲಿ ಶಿವಾಜಿ ಪ್ರತಿಮೆಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಗ್ರಾಮಸ್ಥರ ಮಾಹಿತಿ ಮೇರೆಗೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಕಾಕತಿ ಸಿಪಿಐ ಗುರುನಾಥ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಆ ಯುವಕರು, ‘ನೀವು ಕರ್ನಾಟಕದವರೋ, ಮಹಾರಾಷ್ಟ್ರದವರೋ? ಈ ಊರು ಕರ್ನಾಟಕದಲ್ಲಿದೆಯೋ, ಮಹಾರಾಷ್ಟ್ರದಲ್ಲೋ ಎಂದು ಕನ್ನಡದಲ್ಲಿ ಕೇಳುವ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಥಳೀಯರ್ಯಾರೋ ಮೊಬೈಲ್ ಫೋನ್ನಲ್ಲಿ ವಿಡಿಯೊ ಮಾಡಿ ಹರಿಬಿಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>