<p><strong>ಬೆಳಗಾವಿ</strong>: ಸಾವಿರಾರು ಕೋಟಿ ರೂಪಾಯಿ ಅನಧಿಕೃತ ಬಡ್ಡಿ ವ್ಯವಹಾರ ಮಾಡಿದ ಆರೋಪ ಎದುರಿಸುತ್ತಿರುವ ಇಲ್ಲಿನ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ತಾಲ್ಲೂಕಿನ ಐನಾಪುರ ಗ್ರಾಮದ ಕೃಷ್ಣ ಅಪ್ಪಣ್ಣ ಅಪ್ರಾಜ್ ದೂರು ದಾಖಲಿಸಿದ್ದಾರೆ.</p>.<p>‘ಶೇ 36ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ ನನ್ನಿಂದ ಇದೇ ಏಪ್ರಿಲ್ 4 ರಿಂದ ಮೇ 8ರವರೆಗೆ ₹ 5 ಲಕ್ಷ ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ. ಹಣ ಹೂಡಿಕೆ ಮಾಡಿದ ಕೆಲವೇ ದಿನಗಳಲ್ಲಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರು ಮಾಧ್ಯಮಗಳಿಗೆ ಹೇಳಿಕೆ ನೀಡಿದಾಗಲೇ ವಿಷಯ ಗೊತ್ತಾಗಿದೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>ಸಿಐಡಿ ಅಧಿಕಾರಿಗಳು ಮಂಗಳವಾರ ಶಿವಾನಂದ ಅವರನ್ನು ಬೆಂಗಳೂರಿಗೆ ಕರೆದೊಯ್ದರು ಎಂದು ಮೂಲಗಳು ಖಚಿತಪಡಿಸಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-51-177721484</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಸಾವಿರಾರು ಕೋಟಿ ರೂಪಾಯಿ ಅನಧಿಕೃತ ಬಡ್ಡಿ ವ್ಯವಹಾರ ಮಾಡಿದ ಆರೋಪ ಎದುರಿಸುತ್ತಿರುವ ಇಲ್ಲಿನ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ತಾಲ್ಲೂಕಿನ ಐನಾಪುರ ಗ್ರಾಮದ ಕೃಷ್ಣ ಅಪ್ಪಣ್ಣ ಅಪ್ರಾಜ್ ದೂರು ದಾಖಲಿಸಿದ್ದಾರೆ.</p>.<p>‘ಶೇ 36ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ ನನ್ನಿಂದ ಇದೇ ಏಪ್ರಿಲ್ 4 ರಿಂದ ಮೇ 8ರವರೆಗೆ ₹ 5 ಲಕ್ಷ ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ. ಹಣ ಹೂಡಿಕೆ ಮಾಡಿದ ಕೆಲವೇ ದಿನಗಳಲ್ಲಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರು ಮಾಧ್ಯಮಗಳಿಗೆ ಹೇಳಿಕೆ ನೀಡಿದಾಗಲೇ ವಿಷಯ ಗೊತ್ತಾಗಿದೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>ಸಿಐಡಿ ಅಧಿಕಾರಿಗಳು ಮಂಗಳವಾರ ಶಿವಾನಂದ ಅವರನ್ನು ಬೆಂಗಳೂರಿಗೆ ಕರೆದೊಯ್ದರು ಎಂದು ಮೂಲಗಳು ಖಚಿತಪಡಿಸಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-51-177721484</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>