ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಜಮಿಯತ್ ಉಲೇಮಾ–ಎ–ಹಿಂದ್ ಸಂಘಟನೆ ನೇತೃತ್ವದಲ್ಲಿ ಮುಸ್ಲಿಮರು ಹಮ್ಮಿಕೊಂಡಿದ್ದ ಮೆರವಣಿಗೆ ಬಳಿಕ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ 7 ಬಸ್, ಕಾರು, ಪೆಟ್ರೋಲ್ ಟ್ಯಾಂಕರ್ ಹಾಗೂ ಎಟಿಎಂ ಕೇಂದ್ರದ ಮೇಲೆ ಕಲ್ಲು ತೂರಲಾಗಿತ್ತು. ಇದರಿಂದ ವಾಹನಗಳು, ಎಟಿಎಂ ಬಾಗಿಲಿನ ಗಾಜು ಪುಡಿಪುಡಿಯಾಗಿತ್ತು. ಬಸ್ನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದರು.