<p><strong>ಬೆಳಗಾವಿ:</strong> ತಾಲ್ಲೂಕಿನ ಮಾರ್ಕಂಡೇಯ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ 32 ವಿದ್ಯಾರ್ಥಿಗಳ ಆರೋಗ್ಯದಲ್ಲಿ ಬುಧವಾರ ಚೇತರಿಕೆ ಕಂಡುಬಂದಿದೆ.</p><p>ಮಂಗಳವಾರ ಮಧ್ಯಾಹ್ನ ಎಂದಿನಂತೆ ವಿದ್ಯಾರ್ಥಿಗಳಿಗೆ ಬಿಸಿಯೂಟ ಉಣಬಡಿಸಲಾಗಿತ್ತು. ಆದರೆ, ಸಾಂಬಾರಿನಲ್ಲಿ ಹಲ್ಲಿ ಬಿದ್ದಿತ್ತು. ಇದನ್ನು ಸೇವಿಸಿದ ಕೆಲಹೊತ್ತಿನಲ್ಲೇ ಮಕ್ಕಳು ಅಸ್ವಸ್ಥರಾದರು. ಕೆಲವರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿತು.</p><p>ಶಿಕ್ಷಕರು ಹಂತ–ಹಂತವಾಗಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದರು. ಸಾಮೂಹಿಕವಾಗಿ ಎಲ್ಲರಿಗೂ ಹೊಟ್ಟೆ ನೋವು ಕಾಣಿಸಿಕೊಳ್ಳಲು ಆರಂಭಿಸಿದ್ದರಿಂದ ಆಂಬುಲೆನ್ಸ್ ಕರೆಯಿಸಲಾಯಿತು.</p><p>‘ಅಸ್ವಸ್ಥರಾಗಿದ್ದ 23 ಮಕ್ಕಳನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದೆವು. ನಿತ್ರಾಣಗೊಂಡಿದ್ದ 9 ಮಕ್ಕಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಖಾಸಗಿ ಆಸ್ಪತ್ರೆಯಲ್ಲಿನ ಮಕ್ಕಳು ಮಂಗಳವಾರವೇ ಮನೆಗೆ ಮರಳಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿನ ಮಕ್ಕಳು ಗುರುವಾರ ಬಿಡುಗಡೆಯಾಗಲಿದ್ದಾರೆ’ ಎಂದು ಡಿಡಿಪಿಐ ಲೀಲಾವತಿ ಹಿರೇಮಠ ‘ಪ್ರಜಾವಾಣಿ’ಗೆ ತಿಳಿಸಿದರು.</p><p>‘ಮಹಿಳಾ ಸ್ವಸಹಾಯ ಸಂಘದವರು ಅಡುಗೆ ಮಾಡಿದ್ದಾರೆ. ಘಟನೆ ಕುರಿತಾಗಿ ವಿಚಾರಣೆ ನಡೆಸುತ್ತಿದ್ದೇವೆ. ಶಾಲಾಭಿವೃದ್ಧಿ ಸಮಿತಿಯೊಂದಿಗೆ ಬುಧವಾರ ಸಭೆ ಮಾಡಿದ್ದೇವೆ. ಎಸ್ಡಿಎಂಸಿಯವರು ಕೈಗೊಳ್ಳುವ ನಿರ್ಣಯದ ಮೇಲೆ ಅಡುಗೆ ಸಿದ್ಧಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.</p><p>‘ಪಕ್ಕದಲ್ಲಿರುವ ಪ್ರಾಥಮಿಕ ಶಾಲೆ ಯಲ್ಲಿ ಬಿಸಿಯೂಟ ಸಿದ್ಧಪಡಿಸಿ, ಒಂದು ವಾರದವರೆಗೆ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾಲ್ಲೂಕಿನ ಮಾರ್ಕಂಡೇಯ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ 32 ವಿದ್ಯಾರ್ಥಿಗಳ ಆರೋಗ್ಯದಲ್ಲಿ ಬುಧವಾರ ಚೇತರಿಕೆ ಕಂಡುಬಂದಿದೆ.</p><p>ಮಂಗಳವಾರ ಮಧ್ಯಾಹ್ನ ಎಂದಿನಂತೆ ವಿದ್ಯಾರ್ಥಿಗಳಿಗೆ ಬಿಸಿಯೂಟ ಉಣಬಡಿಸಲಾಗಿತ್ತು. ಆದರೆ, ಸಾಂಬಾರಿನಲ್ಲಿ ಹಲ್ಲಿ ಬಿದ್ದಿತ್ತು. ಇದನ್ನು ಸೇವಿಸಿದ ಕೆಲಹೊತ್ತಿನಲ್ಲೇ ಮಕ್ಕಳು ಅಸ್ವಸ್ಥರಾದರು. ಕೆಲವರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿತು.</p><p>ಶಿಕ್ಷಕರು ಹಂತ–ಹಂತವಾಗಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದರು. ಸಾಮೂಹಿಕವಾಗಿ ಎಲ್ಲರಿಗೂ ಹೊಟ್ಟೆ ನೋವು ಕಾಣಿಸಿಕೊಳ್ಳಲು ಆರಂಭಿಸಿದ್ದರಿಂದ ಆಂಬುಲೆನ್ಸ್ ಕರೆಯಿಸಲಾಯಿತು.</p><p>‘ಅಸ್ವಸ್ಥರಾಗಿದ್ದ 23 ಮಕ್ಕಳನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದೆವು. ನಿತ್ರಾಣಗೊಂಡಿದ್ದ 9 ಮಕ್ಕಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಖಾಸಗಿ ಆಸ್ಪತ್ರೆಯಲ್ಲಿನ ಮಕ್ಕಳು ಮಂಗಳವಾರವೇ ಮನೆಗೆ ಮರಳಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿನ ಮಕ್ಕಳು ಗುರುವಾರ ಬಿಡುಗಡೆಯಾಗಲಿದ್ದಾರೆ’ ಎಂದು ಡಿಡಿಪಿಐ ಲೀಲಾವತಿ ಹಿರೇಮಠ ‘ಪ್ರಜಾವಾಣಿ’ಗೆ ತಿಳಿಸಿದರು.</p><p>‘ಮಹಿಳಾ ಸ್ವಸಹಾಯ ಸಂಘದವರು ಅಡುಗೆ ಮಾಡಿದ್ದಾರೆ. ಘಟನೆ ಕುರಿತಾಗಿ ವಿಚಾರಣೆ ನಡೆಸುತ್ತಿದ್ದೇವೆ. ಶಾಲಾಭಿವೃದ್ಧಿ ಸಮಿತಿಯೊಂದಿಗೆ ಬುಧವಾರ ಸಭೆ ಮಾಡಿದ್ದೇವೆ. ಎಸ್ಡಿಎಂಸಿಯವರು ಕೈಗೊಳ್ಳುವ ನಿರ್ಣಯದ ಮೇಲೆ ಅಡುಗೆ ಸಿದ್ಧಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.</p><p>‘ಪಕ್ಕದಲ್ಲಿರುವ ಪ್ರಾಥಮಿಕ ಶಾಲೆ ಯಲ್ಲಿ ಬಿಸಿಯೂಟ ಸಿದ್ಧಪಡಿಸಿ, ಒಂದು ವಾರದವರೆಗೆ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>