<p><strong>ಬೆಳಗಾವಿ</strong>: ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ನಿರ್ದೇಶನಾಲಯದ ವತಿಯಿಂದ ಇಲ್ಲಿ ಬುಧವಾರ ಮುಂಜಾವಿನಲ್ಲಿ ಆಯೋಜಿಸಿದ್ದ ‘ಸ್ವಚ್ಛತಾ ಓಟ’ಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ಕೊಟ್ಟರು.</p><p>ನಂತರ ಮಾತನಾಡಿ, 'ಇಲ್ಲಿನ ಕೆರೆ, ಗಿಡಮರಗಳು ಮತ್ತು ಪರಿಸರ ನೋಡಿದಾಗ, ಬೆಂಗಳೂರು ಮಹಾನಗರಕ್ಕಿಂತ ಬೆಳಗಾವಿಯೇ ಸುಂದರವಾಗಿದೆ ಎಂದೆನಿಸುತ್ತದೆ. ಇಲ್ಲಿ ಸ್ವಚ್ಛತೆ ಕಾಪಾಡಲು ಸರ್ಕಾರ ವಿವಿಧ ಯೋಜನೆಗಳಡಿ ಸಾಕಷ್ಟು ಅನುದಾನ ಕೊಟಗಟಿದೆ. ಸ್ವಚ್ಛತೆ ಕಾಪಾಡುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ' ಎಂದು ಹೇಳಿದರು.</p><p>'ಇದು ರಾಜ್ಯದ ಎರಡನೇ ರಾಜಧಾನಿ. ಮುಂದೆ ಇದಕ್ಕೆ ದೊಡ್ಡ ಭವಿಷ್ಯವಿದೆ. ಎಲ್ಲರೂ ಸೇರಿಕೊಂಡು ಬೆಳಗಾವಿಯನ್ನು ಸ್ವಚ್ಛ ನಗರವಾಗಿಸೋಣ' ಎಂದು ಕರೆಕೊಟ್ಟರು.</p><p>ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ, 'ಸ್ವಚ್ಛತೆಯೇ ದೇವರು ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ಇಡೀ ನಗರ ಸ್ವಚ್ಛವಾಗಿ ಇರಬೇಕು ಎಂದರೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ' ಎಂದು ಅಭಿಪ್ರಾಯಪಟ್ಟರು.</p><p>'ನಮ್ಮ ಮನೆಯನ್ನು ಸ್ವಚ್ಛವಾಗಿ ಇರಿಸಿಕೊಳ್ಳುವಂತೆ ರಸ್ತೆಗಳಲ್ಲೂ ಸ್ವಚ್ಛತೆ ಕಾಪಾಡಬೇಕು. ಎಲ್ಲೆಂದರಲ್ಲಿ ಕಸ ಎಸೆಯಬಾರದು' ಎಂದು ಕರೆಕೊಟ್ಟರು.</p><p>'ಸ್ವಚ್ಛತೆ ವಿಚಾರದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಅಗ್ರಸ್ಥಾನಕ್ಕೆ ಬರಬೇಕು. ಪ್ರತಿಯೊಬ್ಬರೂ ಸ್ವಚ್ಛತೆ ಸಂಕಲ್ಪ ಮಾಡಬೇಕು' ಎಂದು ಕೋರಿದರು.</p><p>ಅಶೋಕ ವೃತ್ತದಿಂದ ಆರಂಭವಾದ ಓಟ ಸಂಗೊಳ್ಳಿ ರಾಯಣ್ಣ ವೃತ್ತ, ಶ್ರೀಕೃಷ್ಣದೇವರಾಯ ವೃತ್ತ ಮತ್ತಿತರ ಮಾರ್ಗಗಳಲ್ಲಿ ಸಾಗಿ, ಕೋಟೆ ಕೆರೆ ಆವರಣ ತಲುಪಲಿದೆ.</p><p>ಮೈಕೊರೆಯುವ ಚಳಿ ಮಧ್ಯೆಯೂ ವಿವಿಧ ವಯೋಮಾನದವರು ಉತ್ಸಾಹದಿಂದ ಪಾಲ್ಗೊಂಡು ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಸ್ವತಃ ಜನಪ್ರತಿನಿಧಿಗಳು, ಅಧಿಕಾರಿಗಳು ಹೆಜ್ಜೆ ಹಾಕುತ್ತಿದ್ದಾರೆ.</p><p>ಸಚಿವ ರಹೀಂ ಖಾನ್,ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಆಸಿಫ್ ಸೇಠ್, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ನಿರ್ದೇಶನಾಲಯದ ವತಿಯಿಂದ ಇಲ್ಲಿ ಬುಧವಾರ ಮುಂಜಾವಿನಲ್ಲಿ ಆಯೋಜಿಸಿದ್ದ ‘ಸ್ವಚ್ಛತಾ ಓಟ’ಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ಕೊಟ್ಟರು.</p><p>ನಂತರ ಮಾತನಾಡಿ, 'ಇಲ್ಲಿನ ಕೆರೆ, ಗಿಡಮರಗಳು ಮತ್ತು ಪರಿಸರ ನೋಡಿದಾಗ, ಬೆಂಗಳೂರು ಮಹಾನಗರಕ್ಕಿಂತ ಬೆಳಗಾವಿಯೇ ಸುಂದರವಾಗಿದೆ ಎಂದೆನಿಸುತ್ತದೆ. ಇಲ್ಲಿ ಸ್ವಚ್ಛತೆ ಕಾಪಾಡಲು ಸರ್ಕಾರ ವಿವಿಧ ಯೋಜನೆಗಳಡಿ ಸಾಕಷ್ಟು ಅನುದಾನ ಕೊಟಗಟಿದೆ. ಸ್ವಚ್ಛತೆ ಕಾಪಾಡುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ' ಎಂದು ಹೇಳಿದರು.</p><p>'ಇದು ರಾಜ್ಯದ ಎರಡನೇ ರಾಜಧಾನಿ. ಮುಂದೆ ಇದಕ್ಕೆ ದೊಡ್ಡ ಭವಿಷ್ಯವಿದೆ. ಎಲ್ಲರೂ ಸೇರಿಕೊಂಡು ಬೆಳಗಾವಿಯನ್ನು ಸ್ವಚ್ಛ ನಗರವಾಗಿಸೋಣ' ಎಂದು ಕರೆಕೊಟ್ಟರು.</p><p>ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ, 'ಸ್ವಚ್ಛತೆಯೇ ದೇವರು ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ಇಡೀ ನಗರ ಸ್ವಚ್ಛವಾಗಿ ಇರಬೇಕು ಎಂದರೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ' ಎಂದು ಅಭಿಪ್ರಾಯಪಟ್ಟರು.</p><p>'ನಮ್ಮ ಮನೆಯನ್ನು ಸ್ವಚ್ಛವಾಗಿ ಇರಿಸಿಕೊಳ್ಳುವಂತೆ ರಸ್ತೆಗಳಲ್ಲೂ ಸ್ವಚ್ಛತೆ ಕಾಪಾಡಬೇಕು. ಎಲ್ಲೆಂದರಲ್ಲಿ ಕಸ ಎಸೆಯಬಾರದು' ಎಂದು ಕರೆಕೊಟ್ಟರು.</p><p>'ಸ್ವಚ್ಛತೆ ವಿಚಾರದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಅಗ್ರಸ್ಥಾನಕ್ಕೆ ಬರಬೇಕು. ಪ್ರತಿಯೊಬ್ಬರೂ ಸ್ವಚ್ಛತೆ ಸಂಕಲ್ಪ ಮಾಡಬೇಕು' ಎಂದು ಕೋರಿದರು.</p><p>ಅಶೋಕ ವೃತ್ತದಿಂದ ಆರಂಭವಾದ ಓಟ ಸಂಗೊಳ್ಳಿ ರಾಯಣ್ಣ ವೃತ್ತ, ಶ್ರೀಕೃಷ್ಣದೇವರಾಯ ವೃತ್ತ ಮತ್ತಿತರ ಮಾರ್ಗಗಳಲ್ಲಿ ಸಾಗಿ, ಕೋಟೆ ಕೆರೆ ಆವರಣ ತಲುಪಲಿದೆ.</p><p>ಮೈಕೊರೆಯುವ ಚಳಿ ಮಧ್ಯೆಯೂ ವಿವಿಧ ವಯೋಮಾನದವರು ಉತ್ಸಾಹದಿಂದ ಪಾಲ್ಗೊಂಡು ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಸ್ವತಃ ಜನಪ್ರತಿನಿಧಿಗಳು, ಅಧಿಕಾರಿಗಳು ಹೆಜ್ಜೆ ಹಾಕುತ್ತಿದ್ದಾರೆ.</p><p>ಸಚಿವ ರಹೀಂ ಖಾನ್,ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಆಸಿಫ್ ಸೇಠ್, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>