<p><strong>ಬೆಳಗಾವಿ:</strong> ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲು ತಮ್ಮನ್ನು ನಿಯೋಜಿಸಿರುವುದಕ್ಕೆ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರು, ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದರು.</p><p>ಬೆಳಗಾವಿ ನಗರ ವಲಯದ ಸರ್ಕಾರಿ, ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಸಮೀಕ್ಷೆ ನಡೆಸುವ ಬಗ್ಗೆ, ಇಲ್ಲಿನ ಶಿವಬಸವ ನಗರದ ಕೆಪಿಟಿಸಿಎಲ್ ಭವನದಲ್ಲಿ ಸೋಮವಾರ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.</p><p>‘ಸಮೀಕ್ಷೆ ಬಗ್ಗೆ ನಮಗೆ ಮೊದಲೇ ಮಾಹಿತಿ ಕೊಟ್ಟಿಲ್ಲ. ಈಗ ಏಕಾಏಕಿಯಾಗಿ ತರಬೇತಿ ನೀಡಿ, ಮಂಗಳವಾರದಿಂದ ಸಮೀಕ್ಷೆ ಮಾಡುವಂತೆ ಒತ್ತಡ ಹೇರುತ್ತಿರುವುದು ಸರಿಯಲ್ಲ’ ಎಂದು ಶಿಕ್ಷಕರು, ಸಿಬ್ಬಂದಿ ದೂರಿದರು.</p><p>‘ಸಮೀಕ್ಷೆ ಬಗ್ಗೆ ಮೊದಲೇ ತಿಳಿಸಿದರೆ ನಾವು ಸಿದ್ಧರಾಗುತ್ತೇವೆ. ಆದರೆ, ಯಾವ ಮಾಹಿತಿ ನೀಡದೆ ಈಗ ಪ್ರೌಢಶಾಲೆ ಶಿಕ್ಷಕರನ್ನು ಸಮೀಕ್ಷೆಗೆ ನಿಯೋಜಿಸಿದ್ದಾರೆ. ಗರ್ಭಿಣಿಯಾಗಿರುವ ನನಗೆ ದಿಕ್ಕೇ ತೋಚುತ್ತಿಲ್ಲ’ ಎಂದು ಶಿಕ್ಷಕಿಯೊಬ್ಬರು ಕಣ್ಣೀರು ಸುರಿಸಿದರು.</p><p>ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ ಮತ್ತಿತರ ಅಧಿಕಾರಿಗಳು ಈ ವಿಷಯವಾಗಿ ಚರ್ಚಿಸಿ, ಶಿಕ್ಷಕರು ಮತ್ತು ಸಿಬ್ಬಂದಿ ಮನವೊಲಿಕೆಗೆ ಯತ್ನಿಸಿದರು.</p><p>‘ಈಗ ಸಮಸ್ಯೆ ಬಗೆಹರಿದಿದ್ದು, ಸಮೀಕ್ಷೆ ಮಾಡಲು ಪ್ರೌಢಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿ ಒಪ್ಪಿದ್ದಾರೆ. ಅವರಿಗೆ ತರಬೇತಿಯನ್ನೂ ಕೊಟ್ಟಿದ್ದೇವೆ. ಗರ್ಭಿಣಿಯರು, ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಮತ್ತು ಸೇವಾನಿವೃತ್ತಿ ಅಂಚಿನಲ್ಲಿ ಇರುವವರಿಗೆ ವಿನಾಯಿತಿ ಕೊಡಲಾಗುವುದು’ ಎಂದು ರವಿ ಭಜಂತ್ರಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲು ತಮ್ಮನ್ನು ನಿಯೋಜಿಸಿರುವುದಕ್ಕೆ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರು, ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದರು.</p><p>ಬೆಳಗಾವಿ ನಗರ ವಲಯದ ಸರ್ಕಾರಿ, ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಸಮೀಕ್ಷೆ ನಡೆಸುವ ಬಗ್ಗೆ, ಇಲ್ಲಿನ ಶಿವಬಸವ ನಗರದ ಕೆಪಿಟಿಸಿಎಲ್ ಭವನದಲ್ಲಿ ಸೋಮವಾರ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.</p><p>‘ಸಮೀಕ್ಷೆ ಬಗ್ಗೆ ನಮಗೆ ಮೊದಲೇ ಮಾಹಿತಿ ಕೊಟ್ಟಿಲ್ಲ. ಈಗ ಏಕಾಏಕಿಯಾಗಿ ತರಬೇತಿ ನೀಡಿ, ಮಂಗಳವಾರದಿಂದ ಸಮೀಕ್ಷೆ ಮಾಡುವಂತೆ ಒತ್ತಡ ಹೇರುತ್ತಿರುವುದು ಸರಿಯಲ್ಲ’ ಎಂದು ಶಿಕ್ಷಕರು, ಸಿಬ್ಬಂದಿ ದೂರಿದರು.</p><p>‘ಸಮೀಕ್ಷೆ ಬಗ್ಗೆ ಮೊದಲೇ ತಿಳಿಸಿದರೆ ನಾವು ಸಿದ್ಧರಾಗುತ್ತೇವೆ. ಆದರೆ, ಯಾವ ಮಾಹಿತಿ ನೀಡದೆ ಈಗ ಪ್ರೌಢಶಾಲೆ ಶಿಕ್ಷಕರನ್ನು ಸಮೀಕ್ಷೆಗೆ ನಿಯೋಜಿಸಿದ್ದಾರೆ. ಗರ್ಭಿಣಿಯಾಗಿರುವ ನನಗೆ ದಿಕ್ಕೇ ತೋಚುತ್ತಿಲ್ಲ’ ಎಂದು ಶಿಕ್ಷಕಿಯೊಬ್ಬರು ಕಣ್ಣೀರು ಸುರಿಸಿದರು.</p><p>ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ ಮತ್ತಿತರ ಅಧಿಕಾರಿಗಳು ಈ ವಿಷಯವಾಗಿ ಚರ್ಚಿಸಿ, ಶಿಕ್ಷಕರು ಮತ್ತು ಸಿಬ್ಬಂದಿ ಮನವೊಲಿಕೆಗೆ ಯತ್ನಿಸಿದರು.</p><p>‘ಈಗ ಸಮಸ್ಯೆ ಬಗೆಹರಿದಿದ್ದು, ಸಮೀಕ್ಷೆ ಮಾಡಲು ಪ್ರೌಢಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿ ಒಪ್ಪಿದ್ದಾರೆ. ಅವರಿಗೆ ತರಬೇತಿಯನ್ನೂ ಕೊಟ್ಟಿದ್ದೇವೆ. ಗರ್ಭಿಣಿಯರು, ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಮತ್ತು ಸೇವಾನಿವೃತ್ತಿ ಅಂಚಿನಲ್ಲಿ ಇರುವವರಿಗೆ ವಿನಾಯಿತಿ ಕೊಡಲಾಗುವುದು’ ಎಂದು ರವಿ ಭಜಂತ್ರಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>