<p><strong>ಬೆಳಗಾವಿ:</strong> ‘ಇಲ್ಲಿನ ಶ್ರೀನಗರ ಉದ್ಯಾನ ಬಳಿಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಸರ್ಕಾರಕ್ಕೆ ಸೇರಿದ ಸರ್ವೆ ನಂ. 1316/3ರಲ್ಲಿ 5 ಎಕರೆ 34 ಗುಂಟೆ ಜಮೀನಿನ ದಾಖಲೆಗಳನ್ನು ತಿರುಚಿ, ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿ ದಾಖಲಿಸಲಾಗಿದೆ’ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರ ಭೀಮಪ್ಪ ಗಡಾದ ಲೋಕಾಯುಕ್ತ ನ್ಯಾಯಾಧೀಶ ಬಿ.ಎಸ್.ಪಾಟೀಲ ಅವರಿಗೆ ಬುಧವಾರ ದೂರು ನೀಡಿದ್ದಾರೆ.</p><p>ಸರ್ಕಾರಿ ಭೂಮಿ ಕಬಳಿಸಿದವರು, ಅದಕ್ಕೆ ಕಾರಣವಾದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.</p><p>‘ಈ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಭೂ ಮಾಪನ ಇಲಾಖೆ, ಕಂದಾಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ಕಚೇರಿಗಳಲ್ಲಿ ಕೇಳಿದ್ದೇನೆ. ದಾಖಲೆಗಳು ಲಭ್ಯವಿಲ್ಲ ಅಥವಾ ಕಾಣೆಯಾಗಿವೆ ಎಂಬ ಉತ್ತರ ಅನುಮಾನಕ್ಕೆ ಕಾರಣವಾಗಿದೆ. ರಾಜಕಾರಣಿಗಳು ಹಾಗೂ ಭೂಗಳ್ಳರ ಪ್ರಭಾವದಿಂದ ಕೆಲ ಅಧಿಕಾರಿಗಳು ಈ ಜಮೀನಿನ ಚಲನ– ವಲನಗಳ ಮೇಲೆ ನಿಗಾವಹಿಸುತ್ತಿದ್ದಾರೆ’ ಎಂದೂ ಅವರು ದೂರಿನಲ್ಲಿ ಆರೋಪಿಸಿದ್ದಾರೆ.</p><p>‘1964–65ರಿಂದ 1975–76ರವರೆಗೆ ಪಹಣಿ ದಾಖಲೆಗಳಲ್ಲಿ ಈ ಜಮೀನು ‘ಪೊಲೀಸ್ ಗೋಲಿಬಾರ ಕಡೆ’ ಎಂದು ದಾಖಲಾಗಿದೆ. ಅಂದರೆ ಇದು ಸರ್ಕಾರದ ಆಸ್ತಿ ಎಂದರ್ಥ. ಆದರೆ, 1975–76ರಲ್ಲಿ ಹಕ್ಕು ದಾಖಲೆ ಸಂಖ್ಯೆ 6907 ಆಧಾರವಾಗಿ 17 ಹಿಸ್ಸಾಗಳಾಗಿ ವಿಂಗಡಿಸಿ ಖಾಸಗಿ ವ್ಯಕ್ತಿಗಳ ಹೆಸರನ್ನು ಸೇರಿಸಲಾಗಿದೆ. ಈ ಹಕ್ಕು ದಾಖಲೆ ಸಂಖ್ಯೆ 6907 ರಿ.ಸ.ನಂ. 1316/3ಗೆ ಸಂಬಂಧಿಸದೇ ಬೇರೆ ಸರ್ವೆ ಸಂಖ್ಯೆಗೆ ಸಂಬಂಧಿಸಿದೆ ಎಂದು ಮಾಹಿತಿ ಹಕ್ಕಿನಡಿ ಈಗಾಗಲೇ ತಹಶೀಲ್ದಾರರು ಸ್ಪಷ್ಟಪಡಿಸಿದ್ದಾರೆ. ಇವೆಲ್ಲವುಗಳ ಆಧಾರದ ಮೇಲೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರು 2024ರ ಆಗಸ್ಟ್ನಲ್ಲಿ ಈ ಜಮೀನನ್ನು ‘ಕರ್ನಾಟಕ ಸರ್ಕಾರ’ ಎಂಬ ಹೆಸರಿನಲ್ಲಿ ದಾಖಲಿಸಲು ಸೂಚಿಸಿದ್ದಾರೆ. ಅಲ್ಲದೇ, 2025ರ ಜನವರಿಯಲ್ಲಿ ಆಗಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೂಡ ‘ಈ ಜಾಗೆ ಪೊಲೀಸ್ ಇಲಾಖೆಯ ಆಸ್ತಿಯಾಗಿದ್ದು, 1924ರಿಂದಲೂ ಪೊಲೀಸ್ ಗೋಲಿಬಾರ್ ಕಡೆ ಆಗಿದೆ’ ಎಂದು ದೃಢಪಡಿಸಿದ್ದಾರೆ. ಈ ಎಲ್ಲ ದಾಖಲೆಗಳನ್ನೂ ದೂರಿನೊಂದಿಗೆ ಸಲ್ಲಿಸಲಾಗಿದೆ.</p><p>‘ಇದೇ ವಿಷಯವಾಗಿ ಜಿಲ್ಲಾಧಿಕಾರಿಗೆ 2025 ಮತ್ತು 2026ರಲ್ಲಿ ದಾಖಲೆಗಳ ಸಮೇತ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಜಮೀನು ಸದ್ಯ ₹200 ಕೋಟಿ ಬೆಲೆಬಾಳುತ್ತದೆ. ಸರ್ಕಾರಿ ಜಮೀನನ್ನು ಕಬಳಿಸಲು ಯತ್ನಿಸಿರುವ ಅಧಿಕಾರಿಗಳು ಮತ್ತು ಭೂಗಳ್ಳರ ವಿರುದ್ಧ ಸಮಗ್ರ ತನಿಖೆ ನಡೆಸಿ, ಜಮೀನನ್ನು ಪುನಃ ‘ಪೊಲೀಸ್ ಗೋಲಿಬಾರ್ ಕಡೆ’ ಎಂದು ನಮೂದಿಸಲು ಕ್ರಮ ಕೈಗೊಳ್ಳಿ’ ಎಂದೂ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಇಲ್ಲಿನ ಶ್ರೀನಗರ ಉದ್ಯಾನ ಬಳಿಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಸರ್ಕಾರಕ್ಕೆ ಸೇರಿದ ಸರ್ವೆ ನಂ. 1316/3ರಲ್ಲಿ 5 ಎಕರೆ 34 ಗುಂಟೆ ಜಮೀನಿನ ದಾಖಲೆಗಳನ್ನು ತಿರುಚಿ, ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿ ದಾಖಲಿಸಲಾಗಿದೆ’ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರ ಭೀಮಪ್ಪ ಗಡಾದ ಲೋಕಾಯುಕ್ತ ನ್ಯಾಯಾಧೀಶ ಬಿ.ಎಸ್.ಪಾಟೀಲ ಅವರಿಗೆ ಬುಧವಾರ ದೂರು ನೀಡಿದ್ದಾರೆ.</p><p>ಸರ್ಕಾರಿ ಭೂಮಿ ಕಬಳಿಸಿದವರು, ಅದಕ್ಕೆ ಕಾರಣವಾದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.</p><p>‘ಈ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಭೂ ಮಾಪನ ಇಲಾಖೆ, ಕಂದಾಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ಕಚೇರಿಗಳಲ್ಲಿ ಕೇಳಿದ್ದೇನೆ. ದಾಖಲೆಗಳು ಲಭ್ಯವಿಲ್ಲ ಅಥವಾ ಕಾಣೆಯಾಗಿವೆ ಎಂಬ ಉತ್ತರ ಅನುಮಾನಕ್ಕೆ ಕಾರಣವಾಗಿದೆ. ರಾಜಕಾರಣಿಗಳು ಹಾಗೂ ಭೂಗಳ್ಳರ ಪ್ರಭಾವದಿಂದ ಕೆಲ ಅಧಿಕಾರಿಗಳು ಈ ಜಮೀನಿನ ಚಲನ– ವಲನಗಳ ಮೇಲೆ ನಿಗಾವಹಿಸುತ್ತಿದ್ದಾರೆ’ ಎಂದೂ ಅವರು ದೂರಿನಲ್ಲಿ ಆರೋಪಿಸಿದ್ದಾರೆ.</p><p>‘1964–65ರಿಂದ 1975–76ರವರೆಗೆ ಪಹಣಿ ದಾಖಲೆಗಳಲ್ಲಿ ಈ ಜಮೀನು ‘ಪೊಲೀಸ್ ಗೋಲಿಬಾರ ಕಡೆ’ ಎಂದು ದಾಖಲಾಗಿದೆ. ಅಂದರೆ ಇದು ಸರ್ಕಾರದ ಆಸ್ತಿ ಎಂದರ್ಥ. ಆದರೆ, 1975–76ರಲ್ಲಿ ಹಕ್ಕು ದಾಖಲೆ ಸಂಖ್ಯೆ 6907 ಆಧಾರವಾಗಿ 17 ಹಿಸ್ಸಾಗಳಾಗಿ ವಿಂಗಡಿಸಿ ಖಾಸಗಿ ವ್ಯಕ್ತಿಗಳ ಹೆಸರನ್ನು ಸೇರಿಸಲಾಗಿದೆ. ಈ ಹಕ್ಕು ದಾಖಲೆ ಸಂಖ್ಯೆ 6907 ರಿ.ಸ.ನಂ. 1316/3ಗೆ ಸಂಬಂಧಿಸದೇ ಬೇರೆ ಸರ್ವೆ ಸಂಖ್ಯೆಗೆ ಸಂಬಂಧಿಸಿದೆ ಎಂದು ಮಾಹಿತಿ ಹಕ್ಕಿನಡಿ ಈಗಾಗಲೇ ತಹಶೀಲ್ದಾರರು ಸ್ಪಷ್ಟಪಡಿಸಿದ್ದಾರೆ. ಇವೆಲ್ಲವುಗಳ ಆಧಾರದ ಮೇಲೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರು 2024ರ ಆಗಸ್ಟ್ನಲ್ಲಿ ಈ ಜಮೀನನ್ನು ‘ಕರ್ನಾಟಕ ಸರ್ಕಾರ’ ಎಂಬ ಹೆಸರಿನಲ್ಲಿ ದಾಖಲಿಸಲು ಸೂಚಿಸಿದ್ದಾರೆ. ಅಲ್ಲದೇ, 2025ರ ಜನವರಿಯಲ್ಲಿ ಆಗಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೂಡ ‘ಈ ಜಾಗೆ ಪೊಲೀಸ್ ಇಲಾಖೆಯ ಆಸ್ತಿಯಾಗಿದ್ದು, 1924ರಿಂದಲೂ ಪೊಲೀಸ್ ಗೋಲಿಬಾರ್ ಕಡೆ ಆಗಿದೆ’ ಎಂದು ದೃಢಪಡಿಸಿದ್ದಾರೆ. ಈ ಎಲ್ಲ ದಾಖಲೆಗಳನ್ನೂ ದೂರಿನೊಂದಿಗೆ ಸಲ್ಲಿಸಲಾಗಿದೆ.</p><p>‘ಇದೇ ವಿಷಯವಾಗಿ ಜಿಲ್ಲಾಧಿಕಾರಿಗೆ 2025 ಮತ್ತು 2026ರಲ್ಲಿ ದಾಖಲೆಗಳ ಸಮೇತ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಜಮೀನು ಸದ್ಯ ₹200 ಕೋಟಿ ಬೆಲೆಬಾಳುತ್ತದೆ. ಸರ್ಕಾರಿ ಜಮೀನನ್ನು ಕಬಳಿಸಲು ಯತ್ನಿಸಿರುವ ಅಧಿಕಾರಿಗಳು ಮತ್ತು ಭೂಗಳ್ಳರ ವಿರುದ್ಧ ಸಮಗ್ರ ತನಿಖೆ ನಡೆಸಿ, ಜಮೀನನ್ನು ಪುನಃ ‘ಪೊಲೀಸ್ ಗೋಲಿಬಾರ್ ಕಡೆ’ ಎಂದು ನಮೂದಿಸಲು ಕ್ರಮ ಕೈಗೊಳ್ಳಿ’ ಎಂದೂ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>