<p><strong>ಬೆಳಗಾವಿ</strong>: ಇಲ್ಲಿ ಶುಕ್ರವಾರ ರಾತ್ರಿ ಮೆಹಬೂಬ್ ಸುಬಾನಿ ಉರುಸ್ ವೇಳೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಶನಿವಾರ 11 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.</p>.<p>ಪ್ರತಿ ವರ್ಷ ಉರುಸ್ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮೂಲಕ ಸಾಗಿ ದರ್ಗಾಕ್ಕೆ ಹೋಗುತ್ತಿತ್ತು. ಈ ವರ್ಷ ಅನುಮತಿ ಇಲ್ಲದೇ ಖಡಕ್ ಗಲ್ಲಿಗೆ ಮೆರವಣಿಗೆ ಬಂದಿದ್ದು, ಗಲಾಟೆಗೆ ಕಾರಣವಾಗಿದೆ.</p>.<p>ಮೆರವಣಿಗೆ ವೇಳೆ ಮುಸ್ಲಿಂ ಯುವಕರು ‘ಐ ಲವ್ ಮುಹಮ್ಮದ್’ ಎಂಬ ಘೋಷಣೆ ಕೂಗಿದರು. ಮೆರವಣಿಗೆ eKE ಖಡಕ್ ಗಲ್ಲಿಗೆ ಬಂದಿದೆ ಎಂದು ಅಲ್ಲಿನ ಹಿಂದೂ ಯುವಕರು ಪ್ರಶ್ನೆ ಮಾಡಿದರು. ಆಗ ಕತ್ತಲಿನಿಂದ ಕಲ್ಲುಗಳು ತೂರಿಬಂದವು ಎಂದು ಮೆರವಣಿಗೆಯಲ್ಲಿದ್ದವರು ತಿಳಿಸಿದ್ದಾರೆ.</p>.<p>ಪೊಲೀಸ್ ಆಯುಕ್ತ ಭೂಷಣ್ ಬೊರಸೆ, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿ ತಿಳಿಗೊಳಿಸಿರು.</p>.<p>ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮನಿ, ಇಬ್ಬರು ಡಿಸಿಪಿ ಹಾಗೂ ಪೊಲೀಸರ ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದರು. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಾತಾವರಣ ತಿಳಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿ ಶುಕ್ರವಾರ ರಾತ್ರಿ ಮೆಹಬೂಬ್ ಸುಬಾನಿ ಉರುಸ್ ವೇಳೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಶನಿವಾರ 11 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.</p>.<p>ಪ್ರತಿ ವರ್ಷ ಉರುಸ್ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮೂಲಕ ಸಾಗಿ ದರ್ಗಾಕ್ಕೆ ಹೋಗುತ್ತಿತ್ತು. ಈ ವರ್ಷ ಅನುಮತಿ ಇಲ್ಲದೇ ಖಡಕ್ ಗಲ್ಲಿಗೆ ಮೆರವಣಿಗೆ ಬಂದಿದ್ದು, ಗಲಾಟೆಗೆ ಕಾರಣವಾಗಿದೆ.</p>.<p>ಮೆರವಣಿಗೆ ವೇಳೆ ಮುಸ್ಲಿಂ ಯುವಕರು ‘ಐ ಲವ್ ಮುಹಮ್ಮದ್’ ಎಂಬ ಘೋಷಣೆ ಕೂಗಿದರು. ಮೆರವಣಿಗೆ eKE ಖಡಕ್ ಗಲ್ಲಿಗೆ ಬಂದಿದೆ ಎಂದು ಅಲ್ಲಿನ ಹಿಂದೂ ಯುವಕರು ಪ್ರಶ್ನೆ ಮಾಡಿದರು. ಆಗ ಕತ್ತಲಿನಿಂದ ಕಲ್ಲುಗಳು ತೂರಿಬಂದವು ಎಂದು ಮೆರವಣಿಗೆಯಲ್ಲಿದ್ದವರು ತಿಳಿಸಿದ್ದಾರೆ.</p>.<p>ಪೊಲೀಸ್ ಆಯುಕ್ತ ಭೂಷಣ್ ಬೊರಸೆ, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿ ತಿಳಿಗೊಳಿಸಿರು.</p>.<p>ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮನಿ, ಇಬ್ಬರು ಡಿಸಿಪಿ ಹಾಗೂ ಪೊಲೀಸರ ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದರು. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಾತಾವರಣ ತಿಳಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>